<p><strong>ಜೈಪುರ:</strong> ಕೋವಿಡ್-19 ನಿಯಂತ್ರಿಸುವ ಸಲುವಾಗಿ ಕನ್ವರ್ ಯಾತ್ರೆ ಮತ್ತು ಈದ್-ಉಲ್-ಜುಹಾ ಸೇರಿದಂತೆ ಎಲ್ಲ ರೀತಿಯ ಧಾರ್ಮಿಕ ಆಚರಣೆಗಳು ಮತ್ತು ಉತ್ಸವಗಳನ್ನು ನಿರ್ಬಂಧಿಸಲಾಗುವುದು ಎಂದುರಾಜಸ್ಥಾನ ಸರ್ಕಾರ ತಿಳಿಸಿದೆ.</p>.<p>ಅಧಿಸೂಚನೆ ಪ್ರಕಾರ, ಮಥುರಾದ ಗೋವರ್ಧನ ಪ್ರದೇಶದಲ್ಲಿ ಪ್ರತಿವರ್ಷ ಏರ್ಪಡಿಸುವ ಮುದಿಯಾ ಪೂನೊ ಮೇಳವೂ ಈ ವರ್ಷ ನಡೆಯುವುದಿಲ್ಲ. ಭಕ್ತರು ಗುಂಪುಗೂಡುವುದಕ್ಕೆ ಅನುಮತಿನೀಡಲಾಗುವುದಿಲ್ಲ. ಭಕ್ತರು ಮನೆಗಳಲ್ಲಿಯೇ ದೇವರಿಗೆ ಪ್ರಾರ್ಥನೆ ಸಲ್ಲಿಸುವಂತೆ ಮತ್ತು ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆಸರ್ಕಾರ ಮನವಿ ಮಾಡಿದೆ.</p>.<p>ಉತ್ತರಾಖಂಡದಲ್ಲಿ ಕನ್ವರ್ ಯಾತ್ರೆಯನ್ನು ಸತತ ಎರಡನೇ ವರ್ಷವೂ ನಿಷೇಧಿಸಲಾಗಿದೆ. ಆದರೆ, ಉತ್ತರ ಪ್ರದೇಶದಲ್ಲಿ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.</p>.<p>ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ರಾಜಸ್ಥಾನದಲ್ಲಿ ಇದುವರೆಗೆ9,43,788 ಸೋಂಕಿತರು ಗುಣಮುಖರಾಗಿದ್ದು,8,947 ಮಂದಿ ಮೃತಪಟ್ಟಿದ್ದಾರೆ.ಇನ್ನೂ522 ಸಕ್ರಿಯ ಪ್ರಕರಣಗಳಿವೆ.</p>.<p>ರಾಜ್ಯದಲ್ಲಿ ಇದುವರೆಗೆ 2ಕೋಟಿ 75ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ವಿತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಕೋವಿಡ್-19 ನಿಯಂತ್ರಿಸುವ ಸಲುವಾಗಿ ಕನ್ವರ್ ಯಾತ್ರೆ ಮತ್ತು ಈದ್-ಉಲ್-ಜುಹಾ ಸೇರಿದಂತೆ ಎಲ್ಲ ರೀತಿಯ ಧಾರ್ಮಿಕ ಆಚರಣೆಗಳು ಮತ್ತು ಉತ್ಸವಗಳನ್ನು ನಿರ್ಬಂಧಿಸಲಾಗುವುದು ಎಂದುರಾಜಸ್ಥಾನ ಸರ್ಕಾರ ತಿಳಿಸಿದೆ.</p>.<p>ಅಧಿಸೂಚನೆ ಪ್ರಕಾರ, ಮಥುರಾದ ಗೋವರ್ಧನ ಪ್ರದೇಶದಲ್ಲಿ ಪ್ರತಿವರ್ಷ ಏರ್ಪಡಿಸುವ ಮುದಿಯಾ ಪೂನೊ ಮೇಳವೂ ಈ ವರ್ಷ ನಡೆಯುವುದಿಲ್ಲ. ಭಕ್ತರು ಗುಂಪುಗೂಡುವುದಕ್ಕೆ ಅನುಮತಿನೀಡಲಾಗುವುದಿಲ್ಲ. ಭಕ್ತರು ಮನೆಗಳಲ್ಲಿಯೇ ದೇವರಿಗೆ ಪ್ರಾರ್ಥನೆ ಸಲ್ಲಿಸುವಂತೆ ಮತ್ತು ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆಸರ್ಕಾರ ಮನವಿ ಮಾಡಿದೆ.</p>.<p>ಉತ್ತರಾಖಂಡದಲ್ಲಿ ಕನ್ವರ್ ಯಾತ್ರೆಯನ್ನು ಸತತ ಎರಡನೇ ವರ್ಷವೂ ನಿಷೇಧಿಸಲಾಗಿದೆ. ಆದರೆ, ಉತ್ತರ ಪ್ರದೇಶದಲ್ಲಿ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.</p>.<p>ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ರಾಜಸ್ಥಾನದಲ್ಲಿ ಇದುವರೆಗೆ9,43,788 ಸೋಂಕಿತರು ಗುಣಮುಖರಾಗಿದ್ದು,8,947 ಮಂದಿ ಮೃತಪಟ್ಟಿದ್ದಾರೆ.ಇನ್ನೂ522 ಸಕ್ರಿಯ ಪ್ರಕರಣಗಳಿವೆ.</p>.<p>ರಾಜ್ಯದಲ್ಲಿ ಇದುವರೆಗೆ 2ಕೋಟಿ 75ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ವಿತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>