‘ತಿರುಪತಿಗೆ ಭೇಟಿ ನೀಡುವ ಭಕ್ತರಿಗೆ ಟಿಟಿಡಿ ಹಲವು ನಿರ್ಬಂಧಗಳನ್ನು ವಿಧಿಸಿದೆ. ವೈಕುಂಠ ಸರದಿ ಕಾಂಪ್ಲೆಕ್ಸ್, ಶ್ರೀವಾರಿ ದೇವಸ್ಥಾನ, ಅನ್ನ ಪ್ರಸಾದಂ ಕಟ್ಟಡ, ಕಲ್ಯಾಣಕಟ್ಟಡಗಳಲ್ಲಿ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ತಿರುಮಲದ ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯವಾಗಿ ಅಂತರ ಕಾಪಾಡಿಕೊಳ್ಳುವಂತೆ ಸೂಚಿಸಲಾಗಿದೆ. ಜ್ವರ, ಶೀತ ಮತ್ತು ಕೆಮ್ಮು ಇರುವಂಥ ಭಕ್ತರು ತಿರುಮಲಕ್ಕೆ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ’ ಎಂದು ಟಿಟಿಡಿಯ ಅಧಿಕಾರಿಯೊಬ್ಬರು ಬುಧವಾರ ಮಾಹಿತಿ ನೀಡಿದ್ದಾರೆ.