<p><strong>ನವದೆಹಲಿ:</strong> ಕೋವಿಡ್–19 ಎರಡನೇ ಅಲೆಯ ಸಂದರ್ಭದಲ್ಲಿ ಮಾರ್ಚ್ ತಿಂಗಳ ಮಧ್ಯದಲ್ಲೇ ಲಾಕ್ಡೌನ್ ಘೋಷಿಸಿದ್ದರೆ ಸುಮಾರು 1.3 ಕೋಟಿ ಪ್ರಕರಣಗಳು ಕಡಿಮೆಯಾಗುತ್ತಿದ್ದವು ಮತ್ತು 1.10 ಲಕ್ಷ ಸಾವುಗಳು ಸಂಭವಿಸುತ್ತಿರಲಿಲ್ಲ ಎನ್ನುವುದು ಅಧ್ಯಯನದಿಂದ ತಿಳಿದು ಬಂದಿದೆ.</p>.<p>ಬಹುತೇಕ ರಾಜ್ಯಗಳು ತಡವಾಗಿ ಲಾಕ್ಡೌನ್ ಘೋಷಿಸಿದ್ದರಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಕಾರಣವಾಯಿತು ಎಂದು ಅಧ್ಯಯನ ವರದಿಯಲ್ಲಿ ತಿಳಿಸಲಾಗಿದೆ.</p>.<p>ಮಿಷಿಗನ್ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗಗಳ ತಜ್ಞ ಭ್ರಮಾರ್ ಮುಖರ್ಜಿ ಅವರು, ಕೋವಿಡ್–19 ಎರಡನೆ ಅಲೆಯ ಬಗ್ಗೆ ಅಧ್ಯಯನ ನಡೆಸಿದ್ದಾರೆ.</p>.<p>2020ರ ಡಿಸೆಂಬರ್ ಮತ್ತು 2021ರ ಜನವರಿಯಲ್ಲಿ ಕಡಿಮೆ ಪ್ರಕರಣಗಳು ಪತ್ತೆಯಾಗಿದ್ದವು. ಆದರೆ, ಮಹಾರಾಷ್ಟ್ರ, ಪಂಜಾಬ್ ಮತ್ತು ಛತ್ತೀಸಗಡದಲ್ಲಿ 2021ರ ಫೆಬ್ರುವರಿಯಿಂದಲೇ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗತೊಡಗಿತು. ಆದರೂ, ಕಠಿಣ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಿಲ್ಲ ಎಂದು ವರದಿ ತಿಳಿಸಿದೆ.</p>.<p>ಮಹಾರಾಷ್ಟ್ರದಲ್ಲಿ ಏಪ್ರಿಲ್ 14ರಂದು ಲಾಕ್ಡೌನ್ ಜಾರಿಗೊಳಿಸಲಾಯಿತು. ಆದರೆ, ಇದು ತಡವಾಗಿತ್ತು. ಈ ಸಮಯಕ್ಕೆ ದೇಶದಾದ್ಯಂತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿತ್ತು.</p>.<p>ಮಾರ್ಚ್ ಮಧ್ಯದಲ್ಲಿ ಲಾಕ್ಡೌನ್ ಜಾರಿಗೊಳಿಸಿದ್ದರೆ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿತ್ತು ಎಂದು ಮುಖರ್ಜಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್–19 ಎರಡನೇ ಅಲೆಯ ಸಂದರ್ಭದಲ್ಲಿ ಮಾರ್ಚ್ ತಿಂಗಳ ಮಧ್ಯದಲ್ಲೇ ಲಾಕ್ಡೌನ್ ಘೋಷಿಸಿದ್ದರೆ ಸುಮಾರು 1.3 ಕೋಟಿ ಪ್ರಕರಣಗಳು ಕಡಿಮೆಯಾಗುತ್ತಿದ್ದವು ಮತ್ತು 1.10 ಲಕ್ಷ ಸಾವುಗಳು ಸಂಭವಿಸುತ್ತಿರಲಿಲ್ಲ ಎನ್ನುವುದು ಅಧ್ಯಯನದಿಂದ ತಿಳಿದು ಬಂದಿದೆ.</p>.<p>ಬಹುತೇಕ ರಾಜ್ಯಗಳು ತಡವಾಗಿ ಲಾಕ್ಡೌನ್ ಘೋಷಿಸಿದ್ದರಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಕಾರಣವಾಯಿತು ಎಂದು ಅಧ್ಯಯನ ವರದಿಯಲ್ಲಿ ತಿಳಿಸಲಾಗಿದೆ.</p>.<p>ಮಿಷಿಗನ್ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗಗಳ ತಜ್ಞ ಭ್ರಮಾರ್ ಮುಖರ್ಜಿ ಅವರು, ಕೋವಿಡ್–19 ಎರಡನೆ ಅಲೆಯ ಬಗ್ಗೆ ಅಧ್ಯಯನ ನಡೆಸಿದ್ದಾರೆ.</p>.<p>2020ರ ಡಿಸೆಂಬರ್ ಮತ್ತು 2021ರ ಜನವರಿಯಲ್ಲಿ ಕಡಿಮೆ ಪ್ರಕರಣಗಳು ಪತ್ತೆಯಾಗಿದ್ದವು. ಆದರೆ, ಮಹಾರಾಷ್ಟ್ರ, ಪಂಜಾಬ್ ಮತ್ತು ಛತ್ತೀಸಗಡದಲ್ಲಿ 2021ರ ಫೆಬ್ರುವರಿಯಿಂದಲೇ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗತೊಡಗಿತು. ಆದರೂ, ಕಠಿಣ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಿಲ್ಲ ಎಂದು ವರದಿ ತಿಳಿಸಿದೆ.</p>.<p>ಮಹಾರಾಷ್ಟ್ರದಲ್ಲಿ ಏಪ್ರಿಲ್ 14ರಂದು ಲಾಕ್ಡೌನ್ ಜಾರಿಗೊಳಿಸಲಾಯಿತು. ಆದರೆ, ಇದು ತಡವಾಗಿತ್ತು. ಈ ಸಮಯಕ್ಕೆ ದೇಶದಾದ್ಯಂತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿತ್ತು.</p>.<p>ಮಾರ್ಚ್ ಮಧ್ಯದಲ್ಲಿ ಲಾಕ್ಡೌನ್ ಜಾರಿಗೊಳಿಸಿದ್ದರೆ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿತ್ತು ಎಂದು ಮುಖರ್ಜಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>