<p><strong>ಶ್ರೀನಗರ:</strong> ಕೋವಿಡ್-19 ಲಸಿಕೆಗಳು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದಲ್ಲ, ಬದಲಾಗಿ ಮಾನವೀಯತೆಗೆ ಸೇರಿದ್ದಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫೆರನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ತಿಳಿಸಿದರು.</p>.<p>ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಕೊರೊನಾ ವೈರಸ್ ಲಸಿಕೆಗಳನ್ನು ಬಿಜೆಪಿಯ ಲಸಿಕೆ ಎಂದು ಟೀಕಿಸಿದ ಬೆನ್ನಲ್ಲೇ ಒಮರ್ ಅವರಿಂದ ಇಂತಹದೊಂದು ಅಭಿಪ್ರಾಯ ವ್ಯಕ್ತವಾಗಿದೆ.</p>.<p>ಸದ್ಯಕ್ಕೆ ನಾನು ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ. ಬಿಜೆಪಿಯ ಲಸಿಕೆಯನ್ನು ನಾನು ಹೇಗೆ ನಂಬಬಲ್ಲೆ, ನಮ್ಮ ಲಸಿಕೆ ಸಿದ್ಧವಾದಾಗಎಲ್ಲರಿಗೂ ಉಚಿತ ಲಸಿಕೆ ಸಿಗುತ್ತದೆ. ನಾವು ಬಿಜೆಪಿಯ ಲಸಿಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಅಖಿಲೇಶ್ ಯಾದವ್ ಹೇಳಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/india-rehearses-for-massive-coronavirus-vaccination-drive-vardhan-assures-people-on-safety-of-792883.html" itemprop="url">ಕೋವಿಡ್ ಲಸಿಕಾ ಅಭಿಯಾನ: 75 ಲಕ್ಷ ನೋಂದಣಿ </a></p>.<p>ಇದಕ್ಕೆ ಪ್ರತಿಕ್ರಿಯೆ ನೀಡಿರುವ ಒಮರ್ ಅಬ್ದುಲ್ಲಾ, ನನಗೆ ಬೇರೆಯವರ ವಿಚಾರ ತಿಳಿದಿಲ್ಲ. ಆದರೆ ನನ್ನ ಸರದಿ ಬಂದಾಗ ನಾನು ಸಂತೋಷದಿಂದ ಲಸಿಕೆ ಸ್ವೀಕರಿಸುತ್ತೇನೆ. ಈ ವೈರಸ್ ಮಾರಕವಾಗಿದ್ದು, ಲಸಿಕೆಯು ಇದನ್ನು ಹೋಗಲಾಡಿಸಿ ಸಾಮಾನ್ಯ ಸ್ಥಿತಿಗೆ ತರಲು ಸಾಧ್ಯವಾಗುವುದಾದರೆ ನನ್ನನ್ನು ಸೇರಿಸಿ ಎಂದು ಒಮರ್ ಅಬ್ದುಲ್ಲಾ ತಿಳಿಸಿದರು.</p>.<p>ಹೆಚ್ಚು ಜನರಿಗೆ ಲಸಿಕೆ ಹಾಕಿದರೆ ಅದು ದೇಶ ಹಾಗೂ ಆರ್ಥಿಕತೆಗೆ ಉತ್ತಮವಾಗಿರುತ್ತದೆ. ಲಸಿಕೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದಲ್ಲ. ಅವು ಮಾನವೀಯತೆಗೆ ಸೇರಿದ್ದಾಗಿದೆ. ಶೀಘ್ರದಲ್ಲೇ ಬಡವರಿಗೂ ಲಸಿಕೆ ಹಾಕುತ್ತೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಕೋವಿಡ್-19 ಲಸಿಕೆಗಳು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದಲ್ಲ, ಬದಲಾಗಿ ಮಾನವೀಯತೆಗೆ ಸೇರಿದ್ದಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫೆರನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ತಿಳಿಸಿದರು.</p>.<p>ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಕೊರೊನಾ ವೈರಸ್ ಲಸಿಕೆಗಳನ್ನು ಬಿಜೆಪಿಯ ಲಸಿಕೆ ಎಂದು ಟೀಕಿಸಿದ ಬೆನ್ನಲ್ಲೇ ಒಮರ್ ಅವರಿಂದ ಇಂತಹದೊಂದು ಅಭಿಪ್ರಾಯ ವ್ಯಕ್ತವಾಗಿದೆ.</p>.<p>ಸದ್ಯಕ್ಕೆ ನಾನು ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ. ಬಿಜೆಪಿಯ ಲಸಿಕೆಯನ್ನು ನಾನು ಹೇಗೆ ನಂಬಬಲ್ಲೆ, ನಮ್ಮ ಲಸಿಕೆ ಸಿದ್ಧವಾದಾಗಎಲ್ಲರಿಗೂ ಉಚಿತ ಲಸಿಕೆ ಸಿಗುತ್ತದೆ. ನಾವು ಬಿಜೆಪಿಯ ಲಸಿಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಅಖಿಲೇಶ್ ಯಾದವ್ ಹೇಳಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/india-rehearses-for-massive-coronavirus-vaccination-drive-vardhan-assures-people-on-safety-of-792883.html" itemprop="url">ಕೋವಿಡ್ ಲಸಿಕಾ ಅಭಿಯಾನ: 75 ಲಕ್ಷ ನೋಂದಣಿ </a></p>.<p>ಇದಕ್ಕೆ ಪ್ರತಿಕ್ರಿಯೆ ನೀಡಿರುವ ಒಮರ್ ಅಬ್ದುಲ್ಲಾ, ನನಗೆ ಬೇರೆಯವರ ವಿಚಾರ ತಿಳಿದಿಲ್ಲ. ಆದರೆ ನನ್ನ ಸರದಿ ಬಂದಾಗ ನಾನು ಸಂತೋಷದಿಂದ ಲಸಿಕೆ ಸ್ವೀಕರಿಸುತ್ತೇನೆ. ಈ ವೈರಸ್ ಮಾರಕವಾಗಿದ್ದು, ಲಸಿಕೆಯು ಇದನ್ನು ಹೋಗಲಾಡಿಸಿ ಸಾಮಾನ್ಯ ಸ್ಥಿತಿಗೆ ತರಲು ಸಾಧ್ಯವಾಗುವುದಾದರೆ ನನ್ನನ್ನು ಸೇರಿಸಿ ಎಂದು ಒಮರ್ ಅಬ್ದುಲ್ಲಾ ತಿಳಿಸಿದರು.</p>.<p>ಹೆಚ್ಚು ಜನರಿಗೆ ಲಸಿಕೆ ಹಾಕಿದರೆ ಅದು ದೇಶ ಹಾಗೂ ಆರ್ಥಿಕತೆಗೆ ಉತ್ತಮವಾಗಿರುತ್ತದೆ. ಲಸಿಕೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದಲ್ಲ. ಅವು ಮಾನವೀಯತೆಗೆ ಸೇರಿದ್ದಾಗಿದೆ. ಶೀಘ್ರದಲ್ಲೇ ಬಡವರಿಗೂ ಲಸಿಕೆ ಹಾಕುತ್ತೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>