<p><strong>ನವದೆಹಲಿ:</strong> ರಾಷ್ಟ್ರರಾಜಧಾನಿಯಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಆಸ್ಪತ್ರೆಗಳಲ್ಲಿನ ಪರಿಸ್ಥಿತಿ ಹದಗೆಟ್ಟರೆ ಲಾಕ್ಡೌನ್ ಹೇರುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ತಿಳಿಸಿದ್ದಾರೆ.</p>.<p>ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ʼಲಾಕ್ಡೌನ್ ಜಾರಿಗೊಳಿಸುವ ಉದ್ದೇಶ ದೆಹಲಿ ಸರ್ಕಾರಕ್ಕಿಲ್ಲ. ಆದರೆ, ಆಸ್ಪತ್ರೆಗಳಲ್ಲಿನ ಪರಿಸ್ಥಿತಿ ಹದಗೆಟ್ಟರೆ, ನಮಗೆ ಬೇರೆ ದಾರಿ ಇಲ್ಲʼ ಎಂದಿದ್ದಾರೆ.</p>.<p>ಇದಕ್ಕೂ ಮೊದಲು,ದೆಹಲಿಯಲ್ಲಿ ಸೋಂಕು ದೃಢಪಟ್ಟಿರುವ ಶೇ.65 ಮಂದಿ45 ವರ್ಷಕ್ಕಿಂತ ಕೆಳಗಿನವರು ಎಂದು ಹೇಳಿದಕೇಜ್ರಿವಾಲ್, ಕೇಂದ್ರ ಸರ್ಕಾರವು ಲಸಿಕೆ ಅಭಿಯಾನದಲ್ಲಿನ ವಯಸ್ಸಿನ ನಿರ್ಬಂಧವನ್ನು ತೆಗೆದುಹಾಕಬೇಕು ಎಂದು ಆಗ್ರಹಿಸಿದರು.</p>.<p>ಮುಂದುವರಿದು,ಜನರು ಆಸ್ಪತ್ರೆಗಳಿಗೆ ತೆರಳುವ ಮುನ್ನ ಆಸ್ಪತ್ರೆಗಳಲ್ಲಿ ಹಾಸಿಗೆ ಲಭ್ಯತೆಯ ಬಗ್ಗೆ ಆ್ಯಪ್ ಮೂಲಕ ತಿಳಿದುಕೊಳ್ಳಿ. ತುರ್ತು ಪರಿಸ್ಥಿತಿ ಇದ್ದರೆ ಮಾತ್ರವೇ ಹಾಸಿಗೆ ತೆಗೆದುಕೊಳ್ಳಿ ಎಂದೂ ಮನವಿ ಮಾಡಿದರು.</p>.<p>ಮಹಾರಾಷ್ಟ್ರದಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣಿಸುವವರು 72 ಗಂಟೆಗೂ ಮೊದಲು ಮಾಡಿಸಿದ ಕೋವಿಡ್-19 ಪರೀಕ್ಷೆಯ ನೆಗಟಿವ್ ವರದಿಯನ್ನು ಕಡ್ಡಾಯವಾಗಿ ತರಬೇಕು ಎಂದು ದೆಹಲಿ ವಿಪತ್ತು ನಿರ್ವಹಣಾಪ್ರಾಧಿಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದೆ.</p>.<p>ಸದ್ಯ ದೆಹಲಿಯಲ್ಲಿ28,773 ಸಕ್ರಿಯ ಪ್ರಕರಣಗಳು ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರರಾಜಧಾನಿಯಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಆಸ್ಪತ್ರೆಗಳಲ್ಲಿನ ಪರಿಸ್ಥಿತಿ ಹದಗೆಟ್ಟರೆ ಲಾಕ್ಡೌನ್ ಹೇರುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ತಿಳಿಸಿದ್ದಾರೆ.</p>.<p>ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ʼಲಾಕ್ಡೌನ್ ಜಾರಿಗೊಳಿಸುವ ಉದ್ದೇಶ ದೆಹಲಿ ಸರ್ಕಾರಕ್ಕಿಲ್ಲ. ಆದರೆ, ಆಸ್ಪತ್ರೆಗಳಲ್ಲಿನ ಪರಿಸ್ಥಿತಿ ಹದಗೆಟ್ಟರೆ, ನಮಗೆ ಬೇರೆ ದಾರಿ ಇಲ್ಲʼ ಎಂದಿದ್ದಾರೆ.</p>.<p>ಇದಕ್ಕೂ ಮೊದಲು,ದೆಹಲಿಯಲ್ಲಿ ಸೋಂಕು ದೃಢಪಟ್ಟಿರುವ ಶೇ.65 ಮಂದಿ45 ವರ್ಷಕ್ಕಿಂತ ಕೆಳಗಿನವರು ಎಂದು ಹೇಳಿದಕೇಜ್ರಿವಾಲ್, ಕೇಂದ್ರ ಸರ್ಕಾರವು ಲಸಿಕೆ ಅಭಿಯಾನದಲ್ಲಿನ ವಯಸ್ಸಿನ ನಿರ್ಬಂಧವನ್ನು ತೆಗೆದುಹಾಕಬೇಕು ಎಂದು ಆಗ್ರಹಿಸಿದರು.</p>.<p>ಮುಂದುವರಿದು,ಜನರು ಆಸ್ಪತ್ರೆಗಳಿಗೆ ತೆರಳುವ ಮುನ್ನ ಆಸ್ಪತ್ರೆಗಳಲ್ಲಿ ಹಾಸಿಗೆ ಲಭ್ಯತೆಯ ಬಗ್ಗೆ ಆ್ಯಪ್ ಮೂಲಕ ತಿಳಿದುಕೊಳ್ಳಿ. ತುರ್ತು ಪರಿಸ್ಥಿತಿ ಇದ್ದರೆ ಮಾತ್ರವೇ ಹಾಸಿಗೆ ತೆಗೆದುಕೊಳ್ಳಿ ಎಂದೂ ಮನವಿ ಮಾಡಿದರು.</p>.<p>ಮಹಾರಾಷ್ಟ್ರದಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣಿಸುವವರು 72 ಗಂಟೆಗೂ ಮೊದಲು ಮಾಡಿಸಿದ ಕೋವಿಡ್-19 ಪರೀಕ್ಷೆಯ ನೆಗಟಿವ್ ವರದಿಯನ್ನು ಕಡ್ಡಾಯವಾಗಿ ತರಬೇಕು ಎಂದು ದೆಹಲಿ ವಿಪತ್ತು ನಿರ್ವಹಣಾಪ್ರಾಧಿಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದೆ.</p>.<p>ಸದ್ಯ ದೆಹಲಿಯಲ್ಲಿ28,773 ಸಕ್ರಿಯ ಪ್ರಕರಣಗಳು ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>