<p><strong>ನವದೆಹಲಿ:</strong> ಕೋವಿಡ್ ಪ್ರಕರಣಗಳು ಏರುಗತಿಯಲ್ಲಿದ್ದು, ಆತಂಕ ಹೆಚ್ಚಿಸಿದೆ. 24ಗಂಟೆಗಳಲ್ಲಿ 24,882 ಹೊಸ ಪ್ರಕರಣ ದಾಖಲಾಗಿದೆ. ಇವು ಕಳೆದ 83 ದಿನಗಳ ಅವಧಿಯಲ್ಲಿ ದಾಖಲಾದ ಗರಿಷ್ಠ ಸಂಖ್ಯೆಯ ಪ್ರಕರಣಗಳು.</p>.<p>ಮಹಾರಾಷ್ಟ್ರ, ಕೇರಳ, ಪಂಜಾಬ್, ಕರ್ನಾಟಕ, ಗುಜರಾತ್ ಹಾಗೂ ತಮಿಳುನಾಡಿನಲ್ಲಿ ಪ್ರಕರಣಗಳು ಹೆಚ್ಚುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಪ್ರಕಟಿಸಿದೆ. ಇದರ ಬೆನ್ನಲ್ಲೇ ಕಟ್ಟೆಚ್ಚರ ವಹಿಸಲು ಸರ್ಕಾರಗಳು ಒತ್ತು ನೀಡಿದೆ.</p>.<p>ಮಹಾರಾಷ್ಟ್ರ, ಪಂಜಾಬ್ ಮತ್ತು ಮಧ್ಯಪ್ರದೇಶ ರಾಜ್ಯ ಸರ್ಕಾರಗಳು ಸೋಂಕು ಹೆಚ್ಚಿರುವ ಕೆಲ ಜಿಲ್ಲೆಗಳಲ್ಲಿ ಲಾಕ್ಡೌನ್ ಮತ್ತು ರಾತ್ರಿ ಕರ್ಫ್ಯೂ ಕ್ರಮಗಳಿಗೆ ಮುಂದಾಗಿವೆ.</p>.<p>ಕಳೆದ 24 ಗಂಟೆಗಳಲ್ಲಿ 24,882 ಪ್ರಕರಣ ದಾಖಲಾಗಿದ್ದು, 140 ಮಂದಿ ಮೃತಪಟ್ಟಿದ್ದಾರೆ. ಈ ಹಿಂದೆ ಗರಿಷ್ಠ ಸಂಖ್ಯೆಯಲ್ಲಿಅಂದರೆ 26,624 ಪ್ರಕರಣಗಳು ಕಳೆದ 2020ರ ಡಿಸೆಂಬರ್ 20ರಂದು ವರದಿಯಾಗಿದ್ದವು.</p>.<p>ಮಹಾರಾಷ್ಟ್ರ ಸರ್ಕಾರ ನಾಗಪುರ, ಠಾಣೆ ಸೇರಿ ಹಲವು ಜಿಲ್ಲೆಗಳಲ್ಲಿ ನಿರ್ಬಂಧ ಹೇರಿದೆ. ಪುಣೆಯಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. 15ರಿಂದ ನಾಗ್ಫುರದಲ್ಲಿ ಲಾಕ್ಡೌನ್ ಜಾರಿಗೆ ಬರಲಿದೆ. ಪಂಜಾಬ್ ಸರ್ಕಾರ 8 ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಿದ್ದು, ಮುಂಜಾಗ್ರತೆ ಕ್ರಮವಾಗಿ ಶಾಲೆಗಳಿಗೆ ರಜೆಯನ್ನು ಘೋಷಿಸಿದೆ.</p>.<p>ಮಧ್ಯಪ್ರದೇಶ ಸರ್ಕಾರವೂ ರಾತ್ರಿ ಕರ್ಫ್ಯೂ ವಿಧಿಸಲು ಮುಂದಾಗಿದೆ. ಇಂದೋರ್ ಮತ್ತು ಭೋಪಾಲ್ನಲ್ಲಿ ಭಾನುವಾರ ಅಥವಾ ಸೋಮವಾರದಿಂದ ರಾತ್ರಿ ಕರ್ಫ್ಯೂ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.</p>.<p>*</p>.<p>‘ದೇಶದಲ್ಲಿ ಪ್ರಸ್ತುತ ಕೋವಿಡ್ನ ಎರಡನೇ ಅಲೆ ಆರಂಭವಾಗಿದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಏನೋ ಆಗುತ್ತಿದೆ ಎಂಬುದು ನಿಜ. ಹೆಚ್ಚು ಪ್ರಕರಣಗಳು ವರದಿಯಾಗಲು ಮಾರ್ಗಸೂಚಿ ನಿಯಮ ಪಾಲಿಸುವಲ್ಲಿನ ಜನರ ಧೋರಣೆಯೇ ಕಾರಣ.<br /><em><strong>-ಅನುರಾಗ್ ಅಗರವಾಲ್, ಜೀವವಿಜ್ಞಾನ ವಿಭಾಗದ ನಿರ್ದೇಶಕ, ಸಿಎಸ್ಐಆರ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್ ಪ್ರಕರಣಗಳು ಏರುಗತಿಯಲ್ಲಿದ್ದು, ಆತಂಕ ಹೆಚ್ಚಿಸಿದೆ. 24ಗಂಟೆಗಳಲ್ಲಿ 24,882 ಹೊಸ ಪ್ರಕರಣ ದಾಖಲಾಗಿದೆ. ಇವು ಕಳೆದ 83 ದಿನಗಳ ಅವಧಿಯಲ್ಲಿ ದಾಖಲಾದ ಗರಿಷ್ಠ ಸಂಖ್ಯೆಯ ಪ್ರಕರಣಗಳು.</p>.<p>ಮಹಾರಾಷ್ಟ್ರ, ಕೇರಳ, ಪಂಜಾಬ್, ಕರ್ನಾಟಕ, ಗುಜರಾತ್ ಹಾಗೂ ತಮಿಳುನಾಡಿನಲ್ಲಿ ಪ್ರಕರಣಗಳು ಹೆಚ್ಚುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಪ್ರಕಟಿಸಿದೆ. ಇದರ ಬೆನ್ನಲ್ಲೇ ಕಟ್ಟೆಚ್ಚರ ವಹಿಸಲು ಸರ್ಕಾರಗಳು ಒತ್ತು ನೀಡಿದೆ.</p>.<p>ಮಹಾರಾಷ್ಟ್ರ, ಪಂಜಾಬ್ ಮತ್ತು ಮಧ್ಯಪ್ರದೇಶ ರಾಜ್ಯ ಸರ್ಕಾರಗಳು ಸೋಂಕು ಹೆಚ್ಚಿರುವ ಕೆಲ ಜಿಲ್ಲೆಗಳಲ್ಲಿ ಲಾಕ್ಡೌನ್ ಮತ್ತು ರಾತ್ರಿ ಕರ್ಫ್ಯೂ ಕ್ರಮಗಳಿಗೆ ಮುಂದಾಗಿವೆ.</p>.<p>ಕಳೆದ 24 ಗಂಟೆಗಳಲ್ಲಿ 24,882 ಪ್ರಕರಣ ದಾಖಲಾಗಿದ್ದು, 140 ಮಂದಿ ಮೃತಪಟ್ಟಿದ್ದಾರೆ. ಈ ಹಿಂದೆ ಗರಿಷ್ಠ ಸಂಖ್ಯೆಯಲ್ಲಿಅಂದರೆ 26,624 ಪ್ರಕರಣಗಳು ಕಳೆದ 2020ರ ಡಿಸೆಂಬರ್ 20ರಂದು ವರದಿಯಾಗಿದ್ದವು.</p>.<p>ಮಹಾರಾಷ್ಟ್ರ ಸರ್ಕಾರ ನಾಗಪುರ, ಠಾಣೆ ಸೇರಿ ಹಲವು ಜಿಲ್ಲೆಗಳಲ್ಲಿ ನಿರ್ಬಂಧ ಹೇರಿದೆ. ಪುಣೆಯಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. 15ರಿಂದ ನಾಗ್ಫುರದಲ್ಲಿ ಲಾಕ್ಡೌನ್ ಜಾರಿಗೆ ಬರಲಿದೆ. ಪಂಜಾಬ್ ಸರ್ಕಾರ 8 ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಿದ್ದು, ಮುಂಜಾಗ್ರತೆ ಕ್ರಮವಾಗಿ ಶಾಲೆಗಳಿಗೆ ರಜೆಯನ್ನು ಘೋಷಿಸಿದೆ.</p>.<p>ಮಧ್ಯಪ್ರದೇಶ ಸರ್ಕಾರವೂ ರಾತ್ರಿ ಕರ್ಫ್ಯೂ ವಿಧಿಸಲು ಮುಂದಾಗಿದೆ. ಇಂದೋರ್ ಮತ್ತು ಭೋಪಾಲ್ನಲ್ಲಿ ಭಾನುವಾರ ಅಥವಾ ಸೋಮವಾರದಿಂದ ರಾತ್ರಿ ಕರ್ಫ್ಯೂ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.</p>.<p>*</p>.<p>‘ದೇಶದಲ್ಲಿ ಪ್ರಸ್ತುತ ಕೋವಿಡ್ನ ಎರಡನೇ ಅಲೆ ಆರಂಭವಾಗಿದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಏನೋ ಆಗುತ್ತಿದೆ ಎಂಬುದು ನಿಜ. ಹೆಚ್ಚು ಪ್ರಕರಣಗಳು ವರದಿಯಾಗಲು ಮಾರ್ಗಸೂಚಿ ನಿಯಮ ಪಾಲಿಸುವಲ್ಲಿನ ಜನರ ಧೋರಣೆಯೇ ಕಾರಣ.<br /><em><strong>-ಅನುರಾಗ್ ಅಗರವಾಲ್, ಜೀವವಿಜ್ಞಾನ ವಿಭಾಗದ ನಿರ್ದೇಶಕ, ಸಿಎಸ್ಐಆರ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>