<p><strong>ನವದೆಹಲಿ</strong>: ದೇಶದಲ್ಲಿ ಕೋವಿಡ್–19ರ ಪರಿಸ್ಥಿತಿ ಮತ್ತು ಲಸಿಕಾ ಅಭಿಯಾನದ ಕುರಿತು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಂದ ವಿವರವಾಗಿ ಮಾಹಿತಿ ಪಡೆದಿದ್ದಾರೆ. ಆ ಬಳಿಕ ಅಧಿಕಾರಿಗಳಿಗೆ ಹಲವು ಪ್ರಮುಖ ಸೂಚನೆಗಳನ್ನು ಮೋದಿ ನೀಡಿದ್ದಾರೆ.</p>.<p>'ಕೋವಿಡ್ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಕಂಟೈನ್ಮೆಂಟ್ ಜೋನ್ಗಳನ್ನು ನಿರ್ಮಿಸುವ ಅವಶ್ಯಕತೆ ಇದೆ. ಅಧಿಕ ಪ್ರಕರಣಗಳು ಕಂಡುಬಂದಿರುವ ಸ್ಥಳಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಬೇಕಿದೆ' ಎಂದು ಮೋದಿ ತಿಳಿಸಿದ್ದಾರೆ.</p>.<p>'ಗ್ರಾಮೀಣ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಪರೀಕ್ಷೆಗಳನ್ನು ನಡೆಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಸಂಪನ್ಮೂಲಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಪ್ರತ್ಯೇಕ ವಾಸ, ದೈಹಿಕ ಅಂತರ, ಮಾಸ್ಕ್ ಧರಿಸುವುದು ಮತ್ತು ಚಿಕಿತ್ಸೆ ಪಡೆಯುವುದರ ಬಗ್ಗೆ ಹಳ್ಳಿಗಳಲ್ಲಿ ತಿಳುವಳಿಕೆ ನೀಡಬೇಕು. ಸುಲಭ ಭಾಷೆಯಲ್ಲಿ ಕೋವಿಡ್ ಮಾರ್ಗಸೂಚಿಗಳು ಲಭ್ಯವಾಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕೆಂದು' ಪ್ರಧಾನಿ ಆದೇಶಿಸಿದ್ದಾರೆ.</p>.<p>'ಗ್ರಾಮೀಣ ಪ್ರದೇಶಗಳಲ್ಲಿ ಆಮ್ಲಜನಕದ ಪೂರೈಕೆಯನ್ನು ಖಾತ್ರಿಪಡಿಸುವ ವಿತರಣಾ ಯೋಜನೆಯನ್ನು ರೂಪಿಸಬೇಕು. ಅಂತಹ ಸಲಕರಣೆಗಳ ಕಾರ್ಯಾಚರಣೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಅಗತ್ಯವಾದ ತರಬೇತಿಯನ್ನು ನೀಡಬೇಕು. ವೈದ್ಯಕೀಯ ಸಾಧನಗಳ ಸುಗಮ ಕಾರ್ಯಾಚರಣೆಗೆ ವಿದ್ಯುತ್ ಸರಬರಾಜಿನ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು' ಎಂದು ಪ್ರಧಾನಿ ನಿರ್ದೇಶನ ನೀಡಿದ್ದಾರೆ.</p>.<p>ಲಸಿಕೆ ಲಭ್ಯತೆ ಮತ್ತು ಲಸಿಕೆ ಅಭಿಯಾನದ ವೇಗವನ್ನು ಹೆಚ್ಚಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿ ಸೂಚಿಸಿದ್ದಾರೆ.</p>.<p><strong>ಪ್ರಧಾನಿಗೆ ಮಾಹಿತಿ ನೀಡಿದ ಅಧಿಕಾರಿಗಳು</strong></p>.<p>ಮಾರ್ಚ್ ತಿಂಗಳ ಆರಂಭದಲ್ಲಿ ವಾರಕ್ಕೆ ಸುಮಾರು 50 ಲಕ್ಷ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು. ಈಗ ವಾರಕ್ಕೆ ಸುಮಾರು 1.3 ಕೋಟಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದ್ದಾರೆ.</p>.<p>ದೇಶದಲ್ಲಿ ಕ್ರಮೇಣ ಕಡಿಮೆಯಾಗುತ್ತಿರುವ ಕೋವಿಡ್ ಸೋಂಕಿತರ ಸಂಖ್ಯೆ ಮತ್ತು ಹೆಚ್ಚುತ್ತಿರುವ ಚೇತರಿಕೆ ದರದ ಬಗೆಗಿನ ಮಾಹಿತಿಯನ್ನು ಪ್ರಧಾನಿ ಮೋದಿ ಅಧಿಕಾರಿಗಳಿಂದ ಪಡೆದುಕೊಂಡಿದ್ದಾರೆ.</p>.<p>ಆರೋಗ್ಯ ಕಾರ್ಯಕರ್ತರು, ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರದ ಸತತ ಪ್ರಯತ್ನದ ಫಲವಾಗಿ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂಬ ಅಭಿಪ್ರಾಯಗಳೂ ಸಭೆಯಲ್ಲಿ ವ್ಯಕ್ತವಾಗಿವೆ.</p>.<p>ಇದೇ ವೇಳೆ ಕೋವಿಡ್ ಪರೀಕ್ಷೆ, ಆಮ್ಲಜನಕ ಲಭ್ಯತೆ, ಆರೋಗ್ಯ ಮೂಲಸೌಕರ್ಯ, ಲಸಿಕೆ ಅಭಿಯಾನದ ಮಾರ್ಗಸೂಚಿ ಮತ್ತು ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪರಿಸ್ಥಿತಿಗಳ ಬಗ್ಗೆ ಸಭೆಯಲ್ಲಿ ವಿವರವಾಗಿ ಚರ್ಚೆ ನಡೆಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿ ಕೋವಿಡ್–19ರ ಪರಿಸ್ಥಿತಿ ಮತ್ತು ಲಸಿಕಾ ಅಭಿಯಾನದ ಕುರಿತು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಂದ ವಿವರವಾಗಿ ಮಾಹಿತಿ ಪಡೆದಿದ್ದಾರೆ. ಆ ಬಳಿಕ ಅಧಿಕಾರಿಗಳಿಗೆ ಹಲವು ಪ್ರಮುಖ ಸೂಚನೆಗಳನ್ನು ಮೋದಿ ನೀಡಿದ್ದಾರೆ.</p>.<p>'ಕೋವಿಡ್ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಕಂಟೈನ್ಮೆಂಟ್ ಜೋನ್ಗಳನ್ನು ನಿರ್ಮಿಸುವ ಅವಶ್ಯಕತೆ ಇದೆ. ಅಧಿಕ ಪ್ರಕರಣಗಳು ಕಂಡುಬಂದಿರುವ ಸ್ಥಳಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಬೇಕಿದೆ' ಎಂದು ಮೋದಿ ತಿಳಿಸಿದ್ದಾರೆ.</p>.<p>'ಗ್ರಾಮೀಣ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಪರೀಕ್ಷೆಗಳನ್ನು ನಡೆಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಸಂಪನ್ಮೂಲಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಪ್ರತ್ಯೇಕ ವಾಸ, ದೈಹಿಕ ಅಂತರ, ಮಾಸ್ಕ್ ಧರಿಸುವುದು ಮತ್ತು ಚಿಕಿತ್ಸೆ ಪಡೆಯುವುದರ ಬಗ್ಗೆ ಹಳ್ಳಿಗಳಲ್ಲಿ ತಿಳುವಳಿಕೆ ನೀಡಬೇಕು. ಸುಲಭ ಭಾಷೆಯಲ್ಲಿ ಕೋವಿಡ್ ಮಾರ್ಗಸೂಚಿಗಳು ಲಭ್ಯವಾಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕೆಂದು' ಪ್ರಧಾನಿ ಆದೇಶಿಸಿದ್ದಾರೆ.</p>.<p>'ಗ್ರಾಮೀಣ ಪ್ರದೇಶಗಳಲ್ಲಿ ಆಮ್ಲಜನಕದ ಪೂರೈಕೆಯನ್ನು ಖಾತ್ರಿಪಡಿಸುವ ವಿತರಣಾ ಯೋಜನೆಯನ್ನು ರೂಪಿಸಬೇಕು. ಅಂತಹ ಸಲಕರಣೆಗಳ ಕಾರ್ಯಾಚರಣೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಅಗತ್ಯವಾದ ತರಬೇತಿಯನ್ನು ನೀಡಬೇಕು. ವೈದ್ಯಕೀಯ ಸಾಧನಗಳ ಸುಗಮ ಕಾರ್ಯಾಚರಣೆಗೆ ವಿದ್ಯುತ್ ಸರಬರಾಜಿನ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು' ಎಂದು ಪ್ರಧಾನಿ ನಿರ್ದೇಶನ ನೀಡಿದ್ದಾರೆ.</p>.<p>ಲಸಿಕೆ ಲಭ್ಯತೆ ಮತ್ತು ಲಸಿಕೆ ಅಭಿಯಾನದ ವೇಗವನ್ನು ಹೆಚ್ಚಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿ ಸೂಚಿಸಿದ್ದಾರೆ.</p>.<p><strong>ಪ್ರಧಾನಿಗೆ ಮಾಹಿತಿ ನೀಡಿದ ಅಧಿಕಾರಿಗಳು</strong></p>.<p>ಮಾರ್ಚ್ ತಿಂಗಳ ಆರಂಭದಲ್ಲಿ ವಾರಕ್ಕೆ ಸುಮಾರು 50 ಲಕ್ಷ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು. ಈಗ ವಾರಕ್ಕೆ ಸುಮಾರು 1.3 ಕೋಟಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದ್ದಾರೆ.</p>.<p>ದೇಶದಲ್ಲಿ ಕ್ರಮೇಣ ಕಡಿಮೆಯಾಗುತ್ತಿರುವ ಕೋವಿಡ್ ಸೋಂಕಿತರ ಸಂಖ್ಯೆ ಮತ್ತು ಹೆಚ್ಚುತ್ತಿರುವ ಚೇತರಿಕೆ ದರದ ಬಗೆಗಿನ ಮಾಹಿತಿಯನ್ನು ಪ್ರಧಾನಿ ಮೋದಿ ಅಧಿಕಾರಿಗಳಿಂದ ಪಡೆದುಕೊಂಡಿದ್ದಾರೆ.</p>.<p>ಆರೋಗ್ಯ ಕಾರ್ಯಕರ್ತರು, ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರದ ಸತತ ಪ್ರಯತ್ನದ ಫಲವಾಗಿ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂಬ ಅಭಿಪ್ರಾಯಗಳೂ ಸಭೆಯಲ್ಲಿ ವ್ಯಕ್ತವಾಗಿವೆ.</p>.<p>ಇದೇ ವೇಳೆ ಕೋವಿಡ್ ಪರೀಕ್ಷೆ, ಆಮ್ಲಜನಕ ಲಭ್ಯತೆ, ಆರೋಗ್ಯ ಮೂಲಸೌಕರ್ಯ, ಲಸಿಕೆ ಅಭಿಯಾನದ ಮಾರ್ಗಸೂಚಿ ಮತ್ತು ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪರಿಸ್ಥಿತಿಗಳ ಬಗ್ಗೆ ಸಭೆಯಲ್ಲಿ ವಿವರವಾಗಿ ಚರ್ಚೆ ನಡೆಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>