<p><strong>ನವದೆಹಲಿ</strong>: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 12,689 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 137 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.</p>.<p>ದೇಶದಲ್ಲಿ ಈವರೆಗೆ ಒಟ್ಟು 1,06,89,527 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,53,724 ಮಂದಿ ಸಾವಿಗೀಡಾಗಿದ್ದಾರೆ.</p>.<p>1,03,59,305 ಸೋಂಕಿತರು ಗುಣಮುಖರಾಗಿದ್ದು, 1,76,498 ಸಕ್ರಿಯ ಪ್ರಕರಣಗಳಿವೆ.</p>.<p>ಈ ವರೆಗೆ 20,29,424 ಜನರಿಗೆ ಲಸಿಕೆ ನೀಡಲಾಗಿದೆ.</p>.<p><strong>ಮಹಾರಾಷ್ಟ್ರದಲ್ಲಿ 47,470 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ</strong></p>.<p>ಮಹಾರಾಷ್ಟ್ರದ 528 ಕೇಂದ್ರಗಳಲ್ಲಿ ಬುಧವಾರ 47,470 ಆರೋಗ್ಯ ಕಾರ್ಯಕರ್ತರು ಅಥವಾ ಉದ್ದೇಶಿತ ಕಾರ್ಮಿಕರಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<br />ಈ ಮೂಲಕ ಒಟ್ಟಾರೆ 1,78,371 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ ಎಂದು ರಾಜ್ಯ ಸಾರ್ವಜನಿಕ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಪ್ರದೀಪ್ ವ್ಯಾಸ್ ತಿಳಿಸಿದ್ದಾರೆ.</p>.<p><strong>ಉತ್ತರ ಪ್ರದೇಶದಲ್ಲಿ 173 ಹೊಸ ಪ್ರಕರಣ</strong></p>.<p>ಉತ್ತರ ಪ್ರದೇಶದಲ್ಲಿ ಬುಧವಾರ ಹೊಸದಾಗಿ 173 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆಯು 5,99,376ಕ್ಕೆ ಏರಿಕೆಯಾಗಿದೆ. ನಾಲ್ಕು ಜನರು ಸಾವಿಗೀಡಾಗುವುದರೊಂದಿಗೆ, ಮೃತರ ಸಂಖ್ಯೆ 8,636ಕ್ಕೆ ಏರಿಕೆಯಾಗಿದೆ.</p>.<p>ಈ ಪೈಕಿ ಲಕನೌನಲ್ಲಿ 42 ಮತ್ತು ಮೀರತ್ನಲ್ಲಿ 14 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದೇ ವೇಳೆ ರಾಜ್ಯದಲ್ಲಿ 333 ಜನರು ಗುಣಮುಖರಾಗಿದ್ದು, ಈವರೆಗೂ 5,84,372 ಜನರು ಚೇತರಿಸಿಕೊಂಡಿದ್ದಾರೆ.</p>.<p><strong>ಚಂಡೀಗಡಲ್ಲಿ 40 ಹೊಸ ಪ್ರಕರಣ</strong></p>.<p>ಕಳೆದ 24 ಗಂಟೆಗಳ ಅವಧಿಯಲ್ಲಿ ಚಂಡೀಗಡದಲ್ಲಿ 40 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 20,819 ಜನರು ಈವರೆಗೆ ಸೋಂಕಿತರಾಗಿದ್ದಾರೆ. ಈವರೆಗೂ 334 ಜನರು ಮೃತಪಟ್ಟಿದ್ದಾರೆ. ಸದ್ಯ 146 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 12,689 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 137 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.</p>.<p>ದೇಶದಲ್ಲಿ ಈವರೆಗೆ ಒಟ್ಟು 1,06,89,527 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,53,724 ಮಂದಿ ಸಾವಿಗೀಡಾಗಿದ್ದಾರೆ.</p>.<p>1,03,59,305 ಸೋಂಕಿತರು ಗುಣಮುಖರಾಗಿದ್ದು, 1,76,498 ಸಕ್ರಿಯ ಪ್ರಕರಣಗಳಿವೆ.</p>.<p>ಈ ವರೆಗೆ 20,29,424 ಜನರಿಗೆ ಲಸಿಕೆ ನೀಡಲಾಗಿದೆ.</p>.<p><strong>ಮಹಾರಾಷ್ಟ್ರದಲ್ಲಿ 47,470 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ</strong></p>.<p>ಮಹಾರಾಷ್ಟ್ರದ 528 ಕೇಂದ್ರಗಳಲ್ಲಿ ಬುಧವಾರ 47,470 ಆರೋಗ್ಯ ಕಾರ್ಯಕರ್ತರು ಅಥವಾ ಉದ್ದೇಶಿತ ಕಾರ್ಮಿಕರಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<br />ಈ ಮೂಲಕ ಒಟ್ಟಾರೆ 1,78,371 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ ಎಂದು ರಾಜ್ಯ ಸಾರ್ವಜನಿಕ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಪ್ರದೀಪ್ ವ್ಯಾಸ್ ತಿಳಿಸಿದ್ದಾರೆ.</p>.<p><strong>ಉತ್ತರ ಪ್ರದೇಶದಲ್ಲಿ 173 ಹೊಸ ಪ್ರಕರಣ</strong></p>.<p>ಉತ್ತರ ಪ್ರದೇಶದಲ್ಲಿ ಬುಧವಾರ ಹೊಸದಾಗಿ 173 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆಯು 5,99,376ಕ್ಕೆ ಏರಿಕೆಯಾಗಿದೆ. ನಾಲ್ಕು ಜನರು ಸಾವಿಗೀಡಾಗುವುದರೊಂದಿಗೆ, ಮೃತರ ಸಂಖ್ಯೆ 8,636ಕ್ಕೆ ಏರಿಕೆಯಾಗಿದೆ.</p>.<p>ಈ ಪೈಕಿ ಲಕನೌನಲ್ಲಿ 42 ಮತ್ತು ಮೀರತ್ನಲ್ಲಿ 14 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದೇ ವೇಳೆ ರಾಜ್ಯದಲ್ಲಿ 333 ಜನರು ಗುಣಮುಖರಾಗಿದ್ದು, ಈವರೆಗೂ 5,84,372 ಜನರು ಚೇತರಿಸಿಕೊಂಡಿದ್ದಾರೆ.</p>.<p><strong>ಚಂಡೀಗಡಲ್ಲಿ 40 ಹೊಸ ಪ್ರಕರಣ</strong></p>.<p>ಕಳೆದ 24 ಗಂಟೆಗಳ ಅವಧಿಯಲ್ಲಿ ಚಂಡೀಗಡದಲ್ಲಿ 40 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 20,819 ಜನರು ಈವರೆಗೆ ಸೋಂಕಿತರಾಗಿದ್ದಾರೆ. ಈವರೆಗೂ 334 ಜನರು ಮೃತಪಟ್ಟಿದ್ದಾರೆ. ಸದ್ಯ 146 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>