<p><strong>ನವದೆಹಲಿ</strong>: ರಾಜಧಾನಿಯಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಹೊಸದಾಗಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿಂದೆಯೇ ದೆಹಲಿ ಸರ್ಕಾರ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸಿ ನೂತನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.</p>.<p>ಹೊಸದಾಗಿ ಯಾವುದಾದರೂ ಪ್ರಕರಣ ಕಾಣಿಸಿಕೊಂಡಲ್ಲಿ ಶಾಲೆಯನ್ನು ಬಂದ್ ಮಾಡಬೇಕು ಎಂದು ಆದೇಶಿಸಿದೆ.</p>.<p>ಅಲ್ಲದೆ,ಎಲ್ಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಪರಸ್ಪರ ಅಂತರ ಕಾಯ್ದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.</p>.<p>ದೆಹಲಿಯಲ್ಲಿ ಗುರುವಾರ ಹೊಸದಾಗಿ 325 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇವು ಕಳೆದ 40 ದಿನಗಳಲ್ಲಿ ವರದಿಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ಆದರೆ, ಯಾವುದೇ ಸಾವು ವರದಿಯಾಗಿಲ್ಲ.</p>.<p>ಸೋಂಕು ತಡೆಗೆ ಕ್ರಮ ಕೈಗೊಳ್ಳಲು ಇದೇ 20ರಂದು ಸಭೆ ನಡೆಸುವುದಾಗಿ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.</p>.<p>‘ಕೋವಿಡ್ –19 ಪರಿಸ್ಥಿತಿಯ ಮೇಲೆ ನಮ್ಮ ಸರ್ಕಾರವು ನಿಗಾ ವಹಿಸಿದೆ’ ಎಂದು ದೆಹಲಿ ಮುಖ್ಯಮಂತ್ರಿ<br />ಅರವಿಂದ ಕೇಜ್ರಿವಾಲ್ ಗುರುವಾರ ತಿಳಿಸಿದ್ದಾರೆ.</p>.<p>‘ಕೊರೊನಾ ವೈರಸ್ನಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ. ಜನರು ಆತಂಕಪಡುವ ಅಗತ್ಯವಿಲ್ಲ’ ಎಂದೂ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.</p>.<p><strong>15 ಮಕ್ಕಳಿಗೆ ಸೋಂಕು:</strong> ಉತ್ತರ ಪ್ರದೇಶದ ಗೌತಮ ಬುದ್ಧ ನಗರದಲ್ಲಿ 15 ಮಕ್ಕಳು ಸೇರಿ 44 ಮಂದಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 121ಕ್ಕೆ ಏರಿಕೆಯಾಗಿದೆ.</p>.<p><strong>ಚೀನಾದಲ್ಲಿ ಕೋವಿಡ್ ಏರಿಕೆ: ಮತ್ತಷ್ಟು ನಗರಗಳಿಗೆ ನಿರ್ಬಂಧ ವಿಸ್ತರಣೆ</strong></p>.<p><strong>ಬೀಜಿಂಗ್</strong>: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಂಘೈನಲ್ಲಿ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ಇತರೆ ನಗರಗಳಿಗೂ ವಿಸ್ತರಿಸಲಾಗಿದೆ.</p>.<p>2.5 ಕೋಟಿ ಜನರು ಇರುವ ಚೀನಾದ ವಾಣಿಜ್ಯ ನಗರಿ ಶಾಂಘೈನಲ್ಲಿ ವಿಧಿಸಿರುವ ಲಾಕ್ಡೌನ್ ಮೂರನೇ ವಾರಕ್ಕೆ ಕಾಲಿಟ್ಟಿದೆ. ಇಲ್ಲಿ 27,719 ಹೊಸ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 2,573 ಮಂದಿಗೆ ಸೋಂಕಿನ ಲಕ್ಷಣಗಳಿವೆ. ಸೋಂಕು ನಿಯಂತ್ರಣ ಮೀರಿದೆ ಎಂದು ಆರೋಗ್ಯಾಧಿಕಾರಿಗಳು ಎಚ್ಚರಿಸಿದ್ದಾರೆ.</p>.<p>1.9 ಕೋಟಿ ಜನಸಂಖ್ಯೆ ಇರುವ ಗುವಾಂಗ್ಝೌ ನಗರಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಇತರೆ ನಗರಗಳಲ್ಲಿಯೂ ಕೈಗಾರಿಕೆಗಳು ಹಾಗೂ ಶಾಲೆಗಳನ್ನು ಬಂದ್ ಮಾಡಲಾಗುತ್ತಿದೆ. ಈ ನಿರ್ಬಂಧಗಳು ರೈತರ ಕೃಷಿ ಚಟುವಟಿಕೆಗೂ ಅಡ್ಡಿಯಾಗಬಹುದು. ಇದರಿಂದ ಗೋಧಿ ಮತ್ತು ಆಹಾರ ಆಮದು ಹೆಚ್ಚಬಹುದು ಎಂದು ಆರ್ಥಿಕ ತಜ್ಞರು ಎಚ್ಚರಿಕೆ ನೀಡಿದ್ದಾರೆ.</p>.<p>ಹಾಂಗ್ಕಾಂಗ್ನಲ್ಲಿ ಸೋಂಕು ಇಳಿಕೆ:ಹಾಂಗ್ಕಾಂಗ್ನಲ್ಲಿ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಅಂತರ ಕಾಯ್ದುಕೊಳ್ಳುವಿಕೆ, ಸಂಜೆ ರೆಸ್ಟೋರೆಂಟ್ ಮತ್ತು ಖಾಸಗಿಯಾಗಿ ಜನ ಸೇರುವುದರ ಮೇಲೆ ವಿಧಿಸಲಾಗಿದ್ದ ನಿರ್ಬಂಧಗಳಿಗೆ ವಿನಾಯಿತಿ ನೀಡಲಾಗಿದೆ.</p>.<p><strong>ಪ್ರಯಾಣದ ವೇಳೆ ಮಾಸ್ಕ್ ಬಳಸಿ: </strong>ಅಮೆರಿಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರಯಾಣ, ವಿಮಾನ ಪ್ರಯಾಣ ಮತ್ತು ಸಾರ್ವಜನಿಕ ಸಾರಿಗೆಗಳಲ್ಲಿ ಮಾಸ್ಕ್ ಧರಿಸಬೇಕೆಂಬ ನಿಯಮವನ್ನು ವಿಸ್ತರಿಸುವುದಾಗಿ ಬೈಡನ್ ಆಡಳಿತ ತಿಳಿಸಿದೆ.</p>.<p>ರೋಗ ನಿಯಂತ್ರಣ ಕೇಂದ್ರ ಜಾರಿಗೊಳಿಸಿದ್ದ ಮಾಸ್ಕ್ ನಿಯಮಾವಳಿ ಏ.18ರಂದು ಮುಕ್ತಾಯ ಗೊಳ್ಳಬೇಕಿತ್ತು. ಅದನ್ನು ಇದೀಗ ಮೇ 3ರವರೆಗೂ ವಿಸ್ತರಿಸಲಾಗಿದೆ.</p>.<p><strong>ಕೋವಿಡ್: ಸಕ್ರಿಯ ಪ್ರಕರಣ ಏರಿಕೆ</strong></p>.<p><strong>ನವದೆಹಲಿ</strong>: ದೇಶದಲ್ಲಿ ಇಳಿಕೆಯಾಗುತ್ತಿದ್ದ ಕೋವಿಡ್ ಸಕ್ರಿಯ ಪ್ರಕರಣಗಳು ಗುರುವಾರ ತುಸು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 11,058ಕ್ಕೆ ಏರಿಕೆಯಾಗಿದೆ. 1,007 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.</p>.<p>ನಿತ್ಯ ಎರಡಂಕಿ ಇರುತ್ತಿದ್ದ ಸೋಂಕಿತರ ಸಾವಿನ ಸಂಖ್ಯೆ ಇಳಿಕೆ ಯಾಗಿದೆ. ಒಬ್ಬರ ಸಾವಿನೊಂದಿಗೆ ಒಟ್ಟು ಮೃತಪಟ್ಟವರ ಸಂಖ್ಯೆ 5,21,737ಕ್ಕೆ ಏರಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜಧಾನಿಯಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಹೊಸದಾಗಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿಂದೆಯೇ ದೆಹಲಿ ಸರ್ಕಾರ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸಿ ನೂತನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.</p>.<p>ಹೊಸದಾಗಿ ಯಾವುದಾದರೂ ಪ್ರಕರಣ ಕಾಣಿಸಿಕೊಂಡಲ್ಲಿ ಶಾಲೆಯನ್ನು ಬಂದ್ ಮಾಡಬೇಕು ಎಂದು ಆದೇಶಿಸಿದೆ.</p>.<p>ಅಲ್ಲದೆ,ಎಲ್ಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಪರಸ್ಪರ ಅಂತರ ಕಾಯ್ದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.</p>.<p>ದೆಹಲಿಯಲ್ಲಿ ಗುರುವಾರ ಹೊಸದಾಗಿ 325 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇವು ಕಳೆದ 40 ದಿನಗಳಲ್ಲಿ ವರದಿಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ಆದರೆ, ಯಾವುದೇ ಸಾವು ವರದಿಯಾಗಿಲ್ಲ.</p>.<p>ಸೋಂಕು ತಡೆಗೆ ಕ್ರಮ ಕೈಗೊಳ್ಳಲು ಇದೇ 20ರಂದು ಸಭೆ ನಡೆಸುವುದಾಗಿ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.</p>.<p>‘ಕೋವಿಡ್ –19 ಪರಿಸ್ಥಿತಿಯ ಮೇಲೆ ನಮ್ಮ ಸರ್ಕಾರವು ನಿಗಾ ವಹಿಸಿದೆ’ ಎಂದು ದೆಹಲಿ ಮುಖ್ಯಮಂತ್ರಿ<br />ಅರವಿಂದ ಕೇಜ್ರಿವಾಲ್ ಗುರುವಾರ ತಿಳಿಸಿದ್ದಾರೆ.</p>.<p>‘ಕೊರೊನಾ ವೈರಸ್ನಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ. ಜನರು ಆತಂಕಪಡುವ ಅಗತ್ಯವಿಲ್ಲ’ ಎಂದೂ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.</p>.<p><strong>15 ಮಕ್ಕಳಿಗೆ ಸೋಂಕು:</strong> ಉತ್ತರ ಪ್ರದೇಶದ ಗೌತಮ ಬುದ್ಧ ನಗರದಲ್ಲಿ 15 ಮಕ್ಕಳು ಸೇರಿ 44 ಮಂದಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 121ಕ್ಕೆ ಏರಿಕೆಯಾಗಿದೆ.</p>.<p><strong>ಚೀನಾದಲ್ಲಿ ಕೋವಿಡ್ ಏರಿಕೆ: ಮತ್ತಷ್ಟು ನಗರಗಳಿಗೆ ನಿರ್ಬಂಧ ವಿಸ್ತರಣೆ</strong></p>.<p><strong>ಬೀಜಿಂಗ್</strong>: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಂಘೈನಲ್ಲಿ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ಇತರೆ ನಗರಗಳಿಗೂ ವಿಸ್ತರಿಸಲಾಗಿದೆ.</p>.<p>2.5 ಕೋಟಿ ಜನರು ಇರುವ ಚೀನಾದ ವಾಣಿಜ್ಯ ನಗರಿ ಶಾಂಘೈನಲ್ಲಿ ವಿಧಿಸಿರುವ ಲಾಕ್ಡೌನ್ ಮೂರನೇ ವಾರಕ್ಕೆ ಕಾಲಿಟ್ಟಿದೆ. ಇಲ್ಲಿ 27,719 ಹೊಸ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 2,573 ಮಂದಿಗೆ ಸೋಂಕಿನ ಲಕ್ಷಣಗಳಿವೆ. ಸೋಂಕು ನಿಯಂತ್ರಣ ಮೀರಿದೆ ಎಂದು ಆರೋಗ್ಯಾಧಿಕಾರಿಗಳು ಎಚ್ಚರಿಸಿದ್ದಾರೆ.</p>.<p>1.9 ಕೋಟಿ ಜನಸಂಖ್ಯೆ ಇರುವ ಗುವಾಂಗ್ಝೌ ನಗರಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಇತರೆ ನಗರಗಳಲ್ಲಿಯೂ ಕೈಗಾರಿಕೆಗಳು ಹಾಗೂ ಶಾಲೆಗಳನ್ನು ಬಂದ್ ಮಾಡಲಾಗುತ್ತಿದೆ. ಈ ನಿರ್ಬಂಧಗಳು ರೈತರ ಕೃಷಿ ಚಟುವಟಿಕೆಗೂ ಅಡ್ಡಿಯಾಗಬಹುದು. ಇದರಿಂದ ಗೋಧಿ ಮತ್ತು ಆಹಾರ ಆಮದು ಹೆಚ್ಚಬಹುದು ಎಂದು ಆರ್ಥಿಕ ತಜ್ಞರು ಎಚ್ಚರಿಕೆ ನೀಡಿದ್ದಾರೆ.</p>.<p>ಹಾಂಗ್ಕಾಂಗ್ನಲ್ಲಿ ಸೋಂಕು ಇಳಿಕೆ:ಹಾಂಗ್ಕಾಂಗ್ನಲ್ಲಿ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಅಂತರ ಕಾಯ್ದುಕೊಳ್ಳುವಿಕೆ, ಸಂಜೆ ರೆಸ್ಟೋರೆಂಟ್ ಮತ್ತು ಖಾಸಗಿಯಾಗಿ ಜನ ಸೇರುವುದರ ಮೇಲೆ ವಿಧಿಸಲಾಗಿದ್ದ ನಿರ್ಬಂಧಗಳಿಗೆ ವಿನಾಯಿತಿ ನೀಡಲಾಗಿದೆ.</p>.<p><strong>ಪ್ರಯಾಣದ ವೇಳೆ ಮಾಸ್ಕ್ ಬಳಸಿ: </strong>ಅಮೆರಿಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರಯಾಣ, ವಿಮಾನ ಪ್ರಯಾಣ ಮತ್ತು ಸಾರ್ವಜನಿಕ ಸಾರಿಗೆಗಳಲ್ಲಿ ಮಾಸ್ಕ್ ಧರಿಸಬೇಕೆಂಬ ನಿಯಮವನ್ನು ವಿಸ್ತರಿಸುವುದಾಗಿ ಬೈಡನ್ ಆಡಳಿತ ತಿಳಿಸಿದೆ.</p>.<p>ರೋಗ ನಿಯಂತ್ರಣ ಕೇಂದ್ರ ಜಾರಿಗೊಳಿಸಿದ್ದ ಮಾಸ್ಕ್ ನಿಯಮಾವಳಿ ಏ.18ರಂದು ಮುಕ್ತಾಯ ಗೊಳ್ಳಬೇಕಿತ್ತು. ಅದನ್ನು ಇದೀಗ ಮೇ 3ರವರೆಗೂ ವಿಸ್ತರಿಸಲಾಗಿದೆ.</p>.<p><strong>ಕೋವಿಡ್: ಸಕ್ರಿಯ ಪ್ರಕರಣ ಏರಿಕೆ</strong></p>.<p><strong>ನವದೆಹಲಿ</strong>: ದೇಶದಲ್ಲಿ ಇಳಿಕೆಯಾಗುತ್ತಿದ್ದ ಕೋವಿಡ್ ಸಕ್ರಿಯ ಪ್ರಕರಣಗಳು ಗುರುವಾರ ತುಸು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 11,058ಕ್ಕೆ ಏರಿಕೆಯಾಗಿದೆ. 1,007 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.</p>.<p>ನಿತ್ಯ ಎರಡಂಕಿ ಇರುತ್ತಿದ್ದ ಸೋಂಕಿತರ ಸಾವಿನ ಸಂಖ್ಯೆ ಇಳಿಕೆ ಯಾಗಿದೆ. ಒಬ್ಬರ ಸಾವಿನೊಂದಿಗೆ ಒಟ್ಟು ಮೃತಪಟ್ಟವರ ಸಂಖ್ಯೆ 5,21,737ಕ್ಕೆ ಏರಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>