<p><strong>ನವದೆಹಲಿ</strong>: ದೇಶದಾದ್ಯಂತ ಕೋವಿಡ್ನಿಂದ ಚೇತರಿಸಿಕೊಂಡವರ ಸಂಖ್ಯೆ 29.70 ಲಕ್ಷಕ್ಕಿಂತ ಅಧಿಕವಾಗಿದ್ದು, ಈ ಸಂಖ್ಯೆಯು ಸಕ್ರಿಯ ಪ್ರಕರಣಗಳಿಗಿಂತ 3.5 ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿರುವ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್, 'ಕಳೆದ 24 ಗಂಟೆಗಳಲ್ಲಿ 11 ಲಕ್ಷಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಒಂದೇ ದಿನದಲ್ಲಿ 68,584 ಜನರು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ' ಎಂದು ಮಾಹಿತಿ ನೀಡಿದ್ದಾರೆ.</p>.<p>'ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಶೇ.62 ಪ್ರಕರಣಗಳು ತಮಿಳುನಾಡು, ಉತ್ತರ ಪ್ರದೇಶ, ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿವೆ. ಈ ಐದು ರಾಜ್ಯಗಳಲ್ಲಿ ಕೋವಿಡ್ನಿಂದಾಗಿ ಮೃತಪಟ್ಟವರ ಸಂಖ್ಯೆ ದೇಶದ ಶೇ. 70ರಷ್ಟಿದೆ' ಎಂದು ರಾಜೇಶ್ ಭೂಷಣ್ ಹೇಳಿದ್ದಾರೆ.</p>.<p>'ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿನ ಇಳಿಕೆಯ ವಾರದ ಪ್ರಮಾಣ ಆಂಧ್ರಪ್ರದೇಶದಲ್ಲಿ ಶೇ.13.7, ಕರ್ನಾಟಕದಲ್ಲಿ ಶೇ 16.1, ಮಹಾರಾಷ್ಟ್ರದಲ್ಲಿ ಶೇ.6.8 ಮತ್ತು ತಮಿಳುನಾಡಿನಲ್ಲಿ ಶೇ.23.9, ಉತ್ತರ ಪ್ರದೇಶದಲ್ಲಿ ಶೇ.17.1ರಷ್ಟು ಕಂಡುಬಂದಿದೆ' ಎಂದು ಅವರು ಹೇಳಿದರು.</p>.<p>'ದೇಶದಲ್ಲಿ ಹಬ್ಬ ಮತ್ತು ಪರೀಕ್ಷೆಗಳು ಸಮೀಪಿಸುತ್ತಿದ್ದು, ಪ್ರತಿಯೊಬ್ಬರೂ ಶಿಸ್ತಿನ ನಡವಳಿಕೆಗಳನ್ನು ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಯಲು ನಾವು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್ಗಳನ್ನು ಬಳಸಿ, ನಿಮ್ಮ ಕೈಗಳನ್ನು ನಿಯಮಿತವಾಗಿ ತೊಳೆಯಿರಿ' ಎಂಬ ಸಲಹೆಯನ್ನು ಅವರು ನೀಡಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಾದ್ಯಂತ ಕೋವಿಡ್ನಿಂದ ಚೇತರಿಸಿಕೊಂಡವರ ಸಂಖ್ಯೆ 29.70 ಲಕ್ಷಕ್ಕಿಂತ ಅಧಿಕವಾಗಿದ್ದು, ಈ ಸಂಖ್ಯೆಯು ಸಕ್ರಿಯ ಪ್ರಕರಣಗಳಿಗಿಂತ 3.5 ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿರುವ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್, 'ಕಳೆದ 24 ಗಂಟೆಗಳಲ್ಲಿ 11 ಲಕ್ಷಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಒಂದೇ ದಿನದಲ್ಲಿ 68,584 ಜನರು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ' ಎಂದು ಮಾಹಿತಿ ನೀಡಿದ್ದಾರೆ.</p>.<p>'ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಶೇ.62 ಪ್ರಕರಣಗಳು ತಮಿಳುನಾಡು, ಉತ್ತರ ಪ್ರದೇಶ, ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿವೆ. ಈ ಐದು ರಾಜ್ಯಗಳಲ್ಲಿ ಕೋವಿಡ್ನಿಂದಾಗಿ ಮೃತಪಟ್ಟವರ ಸಂಖ್ಯೆ ದೇಶದ ಶೇ. 70ರಷ್ಟಿದೆ' ಎಂದು ರಾಜೇಶ್ ಭೂಷಣ್ ಹೇಳಿದ್ದಾರೆ.</p>.<p>'ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿನ ಇಳಿಕೆಯ ವಾರದ ಪ್ರಮಾಣ ಆಂಧ್ರಪ್ರದೇಶದಲ್ಲಿ ಶೇ.13.7, ಕರ್ನಾಟಕದಲ್ಲಿ ಶೇ 16.1, ಮಹಾರಾಷ್ಟ್ರದಲ್ಲಿ ಶೇ.6.8 ಮತ್ತು ತಮಿಳುನಾಡಿನಲ್ಲಿ ಶೇ.23.9, ಉತ್ತರ ಪ್ರದೇಶದಲ್ಲಿ ಶೇ.17.1ರಷ್ಟು ಕಂಡುಬಂದಿದೆ' ಎಂದು ಅವರು ಹೇಳಿದರು.</p>.<p>'ದೇಶದಲ್ಲಿ ಹಬ್ಬ ಮತ್ತು ಪರೀಕ್ಷೆಗಳು ಸಮೀಪಿಸುತ್ತಿದ್ದು, ಪ್ರತಿಯೊಬ್ಬರೂ ಶಿಸ್ತಿನ ನಡವಳಿಕೆಗಳನ್ನು ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಯಲು ನಾವು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್ಗಳನ್ನು ಬಳಸಿ, ನಿಮ್ಮ ಕೈಗಳನ್ನು ನಿಯಮಿತವಾಗಿ ತೊಳೆಯಿರಿ' ಎಂಬ ಸಲಹೆಯನ್ನು ಅವರು ನೀಡಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>