ಸುದ್ದಿಸಂಸ್ಥೆ 'ಎಎನ್ಐ' ಜೊತೆ ಗುರುವಾರ ಮಾತನಾಡಿರುವ ಅವರು, 'ಕೇರಳದ ವಿರುದ್ಧ ಯೋಜಿತ ಅಭಿಯಾನ ನಡೆಯುತ್ತಿದೆ. ನಮ್ಮಲ್ಲಿ ಉತ್ತಮ ರಕ್ಷಣಾ ಕಾರ್ಯವಿಧಾನವಿದೆ ಎಂದು ವಿವಿಧ ರಾಜ್ಯಗಳ ತಜ್ಞರು ಹೇಳಿದ್ದಾರೆ. ಕೇರಳದ ಶೇ 42 ಜನರು ಪ್ರತಿಕಾಯಗಳನ್ನು ಹೊಂದಿದ್ದಾರೆಂದು ಐಸಿಎಂಆರ್ ನಡೆಸಿದ ಸಿರೊಪ್ರೆವೆಲೆನ್ಸ್ ಅಧ್ಯಯನದಿಂದ ತಿಳಿದುಬಂದಿದೆ. ಕೋವಿಡ್ ತಡೆಗಟ್ಟುವ ಕಾರ್ಯವಿಧಾನವೂ ನಮ್ಮಲ್ಲಿ ಉತ್ತಮವಾಗಿದೆ ಎಂಬುದನ್ನು ತಜ್ಞರು ತಿಳಿಸಿದ್ದಾರೆ' ಎಂದು ಹೇಳಿಕೆ ನೀಡಿದ್ದಾರೆ.