‘21 ಜನರ ಪೈಕಿ ಮೂರರಿಂದ ನಾಲ್ಕು ಮಂದಿ ಮಾತ್ರ ಕೋವಿಡ್ನಿಂದಾಗಿ ಸಾವಿಗೀಡಾಗಿದ್ದಾರೆ. ಬಹುತೇಕರು ವಯೋಸಹಜ ಕಾರಣಗಳಿಂದಾಗಿ ಮೃತಪಟ್ಟಿದ್ದಾರೆ. ಮೃತಪಟ್ವವರ 147 ಕುಟುಂಬಗಳ ಎಲ್ಲ ಸದಸ್ಯರ ಗಂಟಲು ಮಾದರಿಯನ್ನು ಪರೀಕ್ಷೆಗಾಗಿ ತೆಗೆದುಕೊಳ್ಳಲಾಗಿದೆ. ಕೋವಿಡ್ ಸಮುದಾಯದ ನೆಲೆಯಲ್ಲಿ ಹಬ್ಬುತ್ತಿದೆಯೇ ಎಂಬುದನ್ನು ಪರೀಕ್ಷಿಸಲಾಗುತ್ತಿದೆ’ ಎಂದು ಲಕ್ಷ್ಮಣಘಡದ ಉಪ ವಿಭಾಗೀಯ ಅಧಿಕಾರಿ ಕುಲರಾಜ್ ಮೀನಾ ಶನಿವಾರ ತಿಳಿಸಿದ್ದಾರೆ.