<p class="title"><strong>ನವದೆಹಲಿ:</strong> ಕೋವಿಡ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆಯಾಗಿ ಈ ವರ್ಷದ ಗಣರಾಜ್ಯ ದಿನದ ಪಥಸಂಚಲನ ಕಾರ್ಯಕ್ರಮಕ್ಕೆ ಹಾಜರಾಗುವ ಜನರ ಸಂಖ್ಯೆಯಲ್ಲಿ ಶೇ 70–80ರಷ್ಟು ಕಡಿತಗೊಳಿಸಲಾಗಿದೆ. ಆದ್ದರಿಂದ 5–8 ಸಾವಿರ ಜನರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p>.<p class="title">ಕಳೆದ ವರ್ಷ ಪಥಸಂಚಲನ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರ ಜನರ ಭಾಗವಹಿಸುವಿಕೆಗೆ ಅವಕಾಶ ನೀಡಲಾಗಿತ್ತು.</p>.<p class="title">ಅಲ್ಲದೆ ಈ ವರ್ಷದ ಪರೇಡ್ಗೆ ಮುಖ್ಯ ಅತಿಥಿ ಬರುತ್ತಾರೆಯೇ ಅಥವಾ ಇಲ್ಲವೇ ಎಂಬ ನಿರ್ಧಾರವನ್ನು ವಿದೇಶಾಂಗ ಸಚಿವಾಲಯವು ಇನ್ನೂ ತೆಗೆದುಕೊಳ್ಳಬೇಕಾಗಿದೆ ಎಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಕಳೆದ ವರ್ಷ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಇರಲಿಲ್ಲ.</p>.<p>ಕಾರ್ಯಕ್ರಮದಲ್ಲಿ ಜನರು ಒಂದೆಡೆ ಸೇರುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡುವುದು ಮುಖ್ಯ ಉದ್ದೇಶವಾಗಿದೆ. ಕಾರ್ಯಕ್ರಮವು ಕೋವಿಡ್ ಹರಡಲು ವೇದಿಕೆಯಾಗಬಾರದು. ಆದ್ದರಿಂದ ಜನರ ಭಾಗವಹಿಸುವಿಕೆಯನ್ನು ಕಡಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.</p>.<p>ಭಾಗವಹಿಸುವ ನಿರ್ದಿಷ್ಟ ಜನರ ಸಂಖ್ಯೆಯನ್ನು ಇನ್ನೂ ನಿರ್ಧರಿಸಿಲ್ಲ. ಇದು ಈ ವರ್ಷ 5–8 ಸಾವಿರದೊಳಗೆ ಇರಲಿದೆ. ಜನರು ವಾಹಿನಿಗಳಲ್ಲಿ ನೇರಪ್ರಸಾರದ ಪಥಸಂಚಲನವನ್ನು ವೀಕ್ಷಿಸಬಹುದು ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಕೋವಿಡ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆಯಾಗಿ ಈ ವರ್ಷದ ಗಣರಾಜ್ಯ ದಿನದ ಪಥಸಂಚಲನ ಕಾರ್ಯಕ್ರಮಕ್ಕೆ ಹಾಜರಾಗುವ ಜನರ ಸಂಖ್ಯೆಯಲ್ಲಿ ಶೇ 70–80ರಷ್ಟು ಕಡಿತಗೊಳಿಸಲಾಗಿದೆ. ಆದ್ದರಿಂದ 5–8 ಸಾವಿರ ಜನರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p>.<p class="title">ಕಳೆದ ವರ್ಷ ಪಥಸಂಚಲನ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರ ಜನರ ಭಾಗವಹಿಸುವಿಕೆಗೆ ಅವಕಾಶ ನೀಡಲಾಗಿತ್ತು.</p>.<p class="title">ಅಲ್ಲದೆ ಈ ವರ್ಷದ ಪರೇಡ್ಗೆ ಮುಖ್ಯ ಅತಿಥಿ ಬರುತ್ತಾರೆಯೇ ಅಥವಾ ಇಲ್ಲವೇ ಎಂಬ ನಿರ್ಧಾರವನ್ನು ವಿದೇಶಾಂಗ ಸಚಿವಾಲಯವು ಇನ್ನೂ ತೆಗೆದುಕೊಳ್ಳಬೇಕಾಗಿದೆ ಎಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಕಳೆದ ವರ್ಷ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಇರಲಿಲ್ಲ.</p>.<p>ಕಾರ್ಯಕ್ರಮದಲ್ಲಿ ಜನರು ಒಂದೆಡೆ ಸೇರುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡುವುದು ಮುಖ್ಯ ಉದ್ದೇಶವಾಗಿದೆ. ಕಾರ್ಯಕ್ರಮವು ಕೋವಿಡ್ ಹರಡಲು ವೇದಿಕೆಯಾಗಬಾರದು. ಆದ್ದರಿಂದ ಜನರ ಭಾಗವಹಿಸುವಿಕೆಯನ್ನು ಕಡಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.</p>.<p>ಭಾಗವಹಿಸುವ ನಿರ್ದಿಷ್ಟ ಜನರ ಸಂಖ್ಯೆಯನ್ನು ಇನ್ನೂ ನಿರ್ಧರಿಸಿಲ್ಲ. ಇದು ಈ ವರ್ಷ 5–8 ಸಾವಿರದೊಳಗೆ ಇರಲಿದೆ. ಜನರು ವಾಹಿನಿಗಳಲ್ಲಿ ನೇರಪ್ರಸಾರದ ಪಥಸಂಚಲನವನ್ನು ವೀಕ್ಷಿಸಬಹುದು ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>