ನವದೆಹಲಿ: ಕೋವಿಡ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆಯಾಗಿ ಈ ವರ್ಷದ ಗಣರಾಜ್ಯ ದಿನದ ಪಥಸಂಚಲನ ಕಾರ್ಯಕ್ರಮಕ್ಕೆ ಹಾಜರಾಗುವ ಜನರ ಸಂಖ್ಯೆಯಲ್ಲಿ ಶೇ 70–80ರಷ್ಟು ಕಡಿತಗೊಳಿಸಲಾಗಿದೆ. ಆದ್ದರಿಂದ 5–8 ಸಾವಿರ ಜನರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.