<p class="title"><strong>ನವದೆಹಲಿ:</strong> ಕೋವಿಡ್ ಭೀತಿ ಕಾರಣದಿಂದ ಹಬ್ಬಗಳ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಗುಂಪುಗೂಡಲು ಅವಕಾಶ ನೀಡಬಾರದು. ಅನಿವಾರ್ಯ ಎನಿಸಿದಲ್ಲಿ ಸಾಮೂಹಿಕವಾಗಿ ಲಸಿಕೆ ಪಡೆಯಲಾಗಿದೆ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.</p>.<p class="title">ಜನರು ಆದ್ಯತೆ ಮೇರೆಗೆ ಲಸಿಕೆ ಪಡೆಯಬೇಕು, ಕೋವಿಡ್ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಟ್ಟಾರೆಯಾಗಿ ದೇಶದಲ್ಲಿ ವಾರದಿಂದ ವಾರಕ್ಕೆ ಕೋವಿಡ್ ಪ್ರಕರಣಗಳು ಇಳಿಮುಖವಾಗಿದ್ದರೂ ಇನ್ನೂ ಪೂರ್ಣವಾಗಿ ಎರಡನೇ ಅಲೆ ಅಂತ್ಯಗೊಂಡಿಲ್ಲ ಎಂಬುದನ್ನು ಗಮನಿಸಬೇಕು ಎಂದು ಎಚ್ಚರಿಸಿದೆ.</p>.<p>ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್, ದೇಶದ 39 ಜಿಲ್ಲೆಗಳಲ್ಲಿ ಸೋಂಕು ದೃಢೀಕರಣ ಪ್ರಮಾಣ ಶೇ 10ಕ್ಕಿಂತಲೂ ಹೆಚ್ಚು ಇದೆ. ಹಾಗೆಯೇ, 38 ಜಿಲ್ಲೆಗಳಲ್ಲಿ ದೃಢೀಕರಣ ಪ್ರಮಾಣವು ಶೇ 1 ರಿಂದ 10ರಷ್ಟು ಇದೆ ಎಂದು ತಿಳಿಸಿದರು.</p>.<p>ದೇಶದಾದ್ಯಂತ ವಯಸ್ಕರಲ್ಲಿ ಶೇ 16ರಷ್ಟು ಜನಸಂಖ್ಯೆಗೆ ಲಸಿಕೆಯ ಎರಡೂ ಡೋಸ್ ನೀಡಲಾಗಿದೆ. ಶೇ 54ರಷ್ಟು ಜನಸಂಖ್ಯೆಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಹೇಳಿದರು.</p>.<p>ಮೂರನೇ ಅಲೆ ಆರಂಭವಾಗುವ ಭೀತಿ ಇದೆ. ಹಬ್ಬಗಳ ಋತುವಿನಲ್ಲಿ ಜನರ ಗುಂಪುಗೂಡುವಿಕೆ ತಪ್ಪಿಸುವುದು ಅಗತ್ಯ ಎಂದು ಐಸಿಎಂಆರ್ ಪ್ರಧಾನ ನಿರ್ದೇಶಕ ಡಾ.ಬಲರಾಂ ಭಾರ್ಗವ ಅವರು ಹೇಳಿದರು.</p>.<p>ನಾಗರಿಕರು ಕೂಡಾ ಆದಷ್ಟೂ ಹಬ್ಬಗಳ ಆಚರಣೆಯನ್ನು ಮನೆಗೇ ಸೀಮಿತಗೊಳಿಸಬೇಕು ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪಾಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಕೋವಿಡ್ ಭೀತಿ ಕಾರಣದಿಂದ ಹಬ್ಬಗಳ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಗುಂಪುಗೂಡಲು ಅವಕಾಶ ನೀಡಬಾರದು. ಅನಿವಾರ್ಯ ಎನಿಸಿದಲ್ಲಿ ಸಾಮೂಹಿಕವಾಗಿ ಲಸಿಕೆ ಪಡೆಯಲಾಗಿದೆ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.</p>.<p class="title">ಜನರು ಆದ್ಯತೆ ಮೇರೆಗೆ ಲಸಿಕೆ ಪಡೆಯಬೇಕು, ಕೋವಿಡ್ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಟ್ಟಾರೆಯಾಗಿ ದೇಶದಲ್ಲಿ ವಾರದಿಂದ ವಾರಕ್ಕೆ ಕೋವಿಡ್ ಪ್ರಕರಣಗಳು ಇಳಿಮುಖವಾಗಿದ್ದರೂ ಇನ್ನೂ ಪೂರ್ಣವಾಗಿ ಎರಡನೇ ಅಲೆ ಅಂತ್ಯಗೊಂಡಿಲ್ಲ ಎಂಬುದನ್ನು ಗಮನಿಸಬೇಕು ಎಂದು ಎಚ್ಚರಿಸಿದೆ.</p>.<p>ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್, ದೇಶದ 39 ಜಿಲ್ಲೆಗಳಲ್ಲಿ ಸೋಂಕು ದೃಢೀಕರಣ ಪ್ರಮಾಣ ಶೇ 10ಕ್ಕಿಂತಲೂ ಹೆಚ್ಚು ಇದೆ. ಹಾಗೆಯೇ, 38 ಜಿಲ್ಲೆಗಳಲ್ಲಿ ದೃಢೀಕರಣ ಪ್ರಮಾಣವು ಶೇ 1 ರಿಂದ 10ರಷ್ಟು ಇದೆ ಎಂದು ತಿಳಿಸಿದರು.</p>.<p>ದೇಶದಾದ್ಯಂತ ವಯಸ್ಕರಲ್ಲಿ ಶೇ 16ರಷ್ಟು ಜನಸಂಖ್ಯೆಗೆ ಲಸಿಕೆಯ ಎರಡೂ ಡೋಸ್ ನೀಡಲಾಗಿದೆ. ಶೇ 54ರಷ್ಟು ಜನಸಂಖ್ಯೆಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಹೇಳಿದರು.</p>.<p>ಮೂರನೇ ಅಲೆ ಆರಂಭವಾಗುವ ಭೀತಿ ಇದೆ. ಹಬ್ಬಗಳ ಋತುವಿನಲ್ಲಿ ಜನರ ಗುಂಪುಗೂಡುವಿಕೆ ತಪ್ಪಿಸುವುದು ಅಗತ್ಯ ಎಂದು ಐಸಿಎಂಆರ್ ಪ್ರಧಾನ ನಿರ್ದೇಶಕ ಡಾ.ಬಲರಾಂ ಭಾರ್ಗವ ಅವರು ಹೇಳಿದರು.</p>.<p>ನಾಗರಿಕರು ಕೂಡಾ ಆದಷ್ಟೂ ಹಬ್ಬಗಳ ಆಚರಣೆಯನ್ನು ಮನೆಗೇ ಸೀಮಿತಗೊಳಿಸಬೇಕು ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪಾಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>