<p><strong>ನವದೆಹಲಿ</strong>: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ 5,965 ಕೋವಿಡ್–19 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 18,14,515 ಮುಟ್ಟಿದೆ. ಇದೇ ಅವಧಿಯಲ್ಲಿ 3,937 ಮಂದಿ ಗುಣಮುಖರಾಗಿದ್ದಾರೆ ಹಾಗೂ 75 ಮಂದಿ ಮೃತಪಟ್ಟಿದ್ದಾರೆ. ಒಟ್ಟು 89,905 ಸಕ್ರಿಯ ಪ್ರಕರಣಗಳಿವೆ.</p>.<p>ಪಶ್ಚಿಮ ಬಂಗಾಳದಲ್ಲಿ ಶನಿವಾರ 3,459 ಹೊಸ ಪ್ರಕರಣಗಳು ದಾಖಲಾಗಿದ್ದು, 52 ಮಂದಿ ಮೃತಪಟ್ಟಿದ್ದಾರೆ. ಈ ವರೆಗೂ ಒಟ್ಟು 4,77,446 ಪ್ರಕರಣಗಳು ಬೆಳಕಿಗೆ ಬಂದಿದ್ದು, ಅದರಲ್ಲಿ 4,44,587 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.</p>.<p>ಮಧ್ಯಪ್ರದೇಶದಲ್ಲಿ ಇಂದು 1,634 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು 14,981 ಸಕ್ರಿಯ ಪ್ರಕರಣಗಳಿವೆ.</p>.<p>ಕರ್ನಾಟಕದಾದ್ಯಂತ 1,522 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. 12 ಮಂದಿ ಸಾವಿಗೀಡಾಗಿದ್ದು, 24,757 ಸಕ್ರಿಯ ಪ್ರಕರಣಗಳಿವೆ.</p>.<p>ಪಂಜಾಬ್ನಲ್ಲಿ 745 ಹೊಸ ಪ್ರಕರಣಗಲು ಪತ್ತೆಯಾಗಿದ್ದು, 28 ಸೋಂಕಿತರು ಮೃತಪಟ್ಟಿದ್ದಾರೆ. 7,834 ಸಕ್ರಿಯ ಪ್ರಕರಣಗಳಿವೆ.</p>.<p>ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 4,998 ಹೊಸ ಪ್ರಕರಣಗಳು ದಾಖಲಾಗಿದ್ದು, 89 ಮಂದಿ ಸಾವಿಗೀಡಾಗಿದ್ದಾರೆ. 36,578 ಸಕ್ರಿಯ ಪ್ರಕರಣಗಳಿವೆ. </p>.<p>ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 41,322 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಇದರೊಂದಿಗೆ ದೇಶದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ ಶನಿವಾರ 93,51,110 ಕ್ಕೆ ಏರಿಕೆಯಾಗಿದೆ.</p>.<p>ಇದೇ ಅವಧಿಯಲ್ಲಿ ದೇಶದಾದ್ಯಂತ 485 ಸಾವು ಸಂಭವಿಸಿವೆ. ಹೀಗಾಗಿ, ಭಾರತದಲ್ಲಿ ಕೋವಿಡ್ ಕಾರಣದ ಸಾವುಗಳ ಸಂಖ್ಯೆ 1,36,200 ಆಗಿದೆ.</p>.<p>ಸದ್ಯ ರಾಷ್ಟ್ರದಲ್ಲಿ 4,54,940 ಸಕ್ರಿಯ ಪ್ರಕರಣಗಳಿವೆ. ಈ 24 ಗಂಟೆಗಳಲ್ಲಿ 41,452 ಮಂದಿ ಗುಣುಮಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಈ ವರೆಗೆ ಕೋವಿಡ್ ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ 87,59,969 ಆಗಿದೆ.</p>.<p>ಮಹಾರಾಷ್ಟ್ರದಲ್ಲಿ 18,08,550, ಕರ್ನಾಟಕದಲ್ಲಿ 8,81,086 , ಆಂಧ್ರಪ್ರದೇಶದಲ್ಲಿ8,66,438 ತಮಿಳುನಾಡಿನಲ್ಲಿ 7,77,616, ದೆಹಲಿಯಲ್ಲಿ5,51,262 ಪ್ರಕರಣಗಳಿವೆ.</p>.<p>ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ನಲ್ಲಿ 189 ಪ್ರಕರಣ, ಸಿಕ್ಕಿಂನಲ್ಲಿ 37, ಪಶ್ಚಿಮ ಬಂಗಾಳದಲ್ಲಿ 3,489 (46 ಸಾವು), ಬಿಹಾರದಲ್ಲಿ 698 (5 ಸಾವು), ಅಸ್ಸಾಂನಲ್ಲಿ 149 (2 ಸಾವು) ವರದಿಯಾಗಿವೆ.</p>.<p><strong>ಶಾಸಕ ಸಾವು</strong></p>.<p>ಮಹಾರಾಷ್ಟ್ರದ ಪಂಡರಾಪುರ-ಮಂಗಳವೇಧ ವಿಧಾನಸಭೆ ಕ್ಷೇತ್ರದ ಎನ್ಸಿಪಿ ಶಾಸಕ ಭರತ್ ಭಾಲ್ಕೆ ಶುಕ್ರವಾರ ಪುಣೆಯ ರೂಬಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೋವಿಡ್ ನಂತರದ ಸಮಸ್ಯೆಗಳ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು.</p>.<p><strong>ಬಿಜೆಪಿ ನಾಯಕನಿಗೆ ಕೋವಿಡ್</strong></p>.<p>ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ, ದೆಹಲಿ ಉಸ್ತುವಾರಿ ವೈಜಯಂತ್ ಪಾಂಡ ಅವರಿಗೆ ಕೋವಿಡ್ ಇರುವುದು ಶುಕ್ರವಾರ ದೃಢವಾಗಿದೆ.</p>.<p><strong>ಪ್ರಧಾನಿ 'ವ್ಯಾಕ್ಸಿನ್ ಟೂರ್'</strong></p>.<p>ಕೊರೊನಾ ವೈರಸ್ ಲಸಿಕೆ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಹಮದಾಬಾದ್, ಹೈದರಾಬಾದ್ ಮತ್ತು ಪುಣೆ ಪ್ರವಾಸ ಕೈಗೊಂಡಿದ್ದಾರೆ.</p>.<p>'ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನಾ ಪ್ರಕ್ರಿಯೆಯನ್ನು ಸ್ವತಃ ಪರಿಶೀಲಿಸಲು ಶನಿವಾರ ಪ್ರಧಾನಿ ನರೇಂದ್ರ ಮೋದಿ 3 ನಗರಗಳಿಗೆ ಭೇಟಿ ನೀಡಲಿದ್ದಾರೆ. ಅಹಮದಾಬಾದ್ನ 'ಸೈಡಸ್ ಬಯೋಟೆಕ್ ಪಾರ್ಕ್', ಹೈದರಾಬಾದ್ನ 'ಭಾರತ್ ಬಯೋಟೆಕ್' ಮತ್ತು ಪುಣೆಯ 'ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ'ಕ್ಕೆ ಅವರು ಭೇಟಿ ನೀಡುವರು' ಎಂದು ಪ್ರಧಾನಿ ಕಚೇರಿ (ಪಿಎಂಒ) ಟ್ವೀಟ್ ಮಾಡಿದೆ.</p>.<p>ಶನಿವಾರ ಬೆಳಗ್ಗೆ 9.30ಗೆ ಅವರು ಅಹಮದಾಬಾದ್ಗೆ ಭೇಟಿ ನೀಡಿದ್ದರು.</p>.<p><strong>ಲೇಹ್ನಲ್ಲಿ ರಾತ್ರಿ ಕರ್ಫ್ಯೂ</strong></p>.<p>ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ ಲೇಹ್ನಲ್ಲಿ ಹೊಸ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ. ಶನಿವಾರದಿಂದ ರಾತ್ರಿ ಕರ್ಫ್ಯೂ ಜಾರಿಗೆ ತರಲು ಆದೇಶಿಸಲಾಗಿದೆ. ರಾತ್ರಿ 8ರಿಂದ ಬೆಳಗ್ಗೆ 5ರ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ 5,965 ಕೋವಿಡ್–19 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 18,14,515 ಮುಟ್ಟಿದೆ. ಇದೇ ಅವಧಿಯಲ್ಲಿ 3,937 ಮಂದಿ ಗುಣಮುಖರಾಗಿದ್ದಾರೆ ಹಾಗೂ 75 ಮಂದಿ ಮೃತಪಟ್ಟಿದ್ದಾರೆ. ಒಟ್ಟು 89,905 ಸಕ್ರಿಯ ಪ್ರಕರಣಗಳಿವೆ.</p>.<p>ಪಶ್ಚಿಮ ಬಂಗಾಳದಲ್ಲಿ ಶನಿವಾರ 3,459 ಹೊಸ ಪ್ರಕರಣಗಳು ದಾಖಲಾಗಿದ್ದು, 52 ಮಂದಿ ಮೃತಪಟ್ಟಿದ್ದಾರೆ. ಈ ವರೆಗೂ ಒಟ್ಟು 4,77,446 ಪ್ರಕರಣಗಳು ಬೆಳಕಿಗೆ ಬಂದಿದ್ದು, ಅದರಲ್ಲಿ 4,44,587 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.</p>.<p>ಮಧ್ಯಪ್ರದೇಶದಲ್ಲಿ ಇಂದು 1,634 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು 14,981 ಸಕ್ರಿಯ ಪ್ರಕರಣಗಳಿವೆ.</p>.<p>ಕರ್ನಾಟಕದಾದ್ಯಂತ 1,522 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. 12 ಮಂದಿ ಸಾವಿಗೀಡಾಗಿದ್ದು, 24,757 ಸಕ್ರಿಯ ಪ್ರಕರಣಗಳಿವೆ.</p>.<p>ಪಂಜಾಬ್ನಲ್ಲಿ 745 ಹೊಸ ಪ್ರಕರಣಗಲು ಪತ್ತೆಯಾಗಿದ್ದು, 28 ಸೋಂಕಿತರು ಮೃತಪಟ್ಟಿದ್ದಾರೆ. 7,834 ಸಕ್ರಿಯ ಪ್ರಕರಣಗಳಿವೆ.</p>.<p>ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 4,998 ಹೊಸ ಪ್ರಕರಣಗಳು ದಾಖಲಾಗಿದ್ದು, 89 ಮಂದಿ ಸಾವಿಗೀಡಾಗಿದ್ದಾರೆ. 36,578 ಸಕ್ರಿಯ ಪ್ರಕರಣಗಳಿವೆ. </p>.<p>ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 41,322 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಇದರೊಂದಿಗೆ ದೇಶದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ ಶನಿವಾರ 93,51,110 ಕ್ಕೆ ಏರಿಕೆಯಾಗಿದೆ.</p>.<p>ಇದೇ ಅವಧಿಯಲ್ಲಿ ದೇಶದಾದ್ಯಂತ 485 ಸಾವು ಸಂಭವಿಸಿವೆ. ಹೀಗಾಗಿ, ಭಾರತದಲ್ಲಿ ಕೋವಿಡ್ ಕಾರಣದ ಸಾವುಗಳ ಸಂಖ್ಯೆ 1,36,200 ಆಗಿದೆ.</p>.<p>ಸದ್ಯ ರಾಷ್ಟ್ರದಲ್ಲಿ 4,54,940 ಸಕ್ರಿಯ ಪ್ರಕರಣಗಳಿವೆ. ಈ 24 ಗಂಟೆಗಳಲ್ಲಿ 41,452 ಮಂದಿ ಗುಣುಮಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಈ ವರೆಗೆ ಕೋವಿಡ್ ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ 87,59,969 ಆಗಿದೆ.</p>.<p>ಮಹಾರಾಷ್ಟ್ರದಲ್ಲಿ 18,08,550, ಕರ್ನಾಟಕದಲ್ಲಿ 8,81,086 , ಆಂಧ್ರಪ್ರದೇಶದಲ್ಲಿ8,66,438 ತಮಿಳುನಾಡಿನಲ್ಲಿ 7,77,616, ದೆಹಲಿಯಲ್ಲಿ5,51,262 ಪ್ರಕರಣಗಳಿವೆ.</p>.<p>ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ನಲ್ಲಿ 189 ಪ್ರಕರಣ, ಸಿಕ್ಕಿಂನಲ್ಲಿ 37, ಪಶ್ಚಿಮ ಬಂಗಾಳದಲ್ಲಿ 3,489 (46 ಸಾವು), ಬಿಹಾರದಲ್ಲಿ 698 (5 ಸಾವು), ಅಸ್ಸಾಂನಲ್ಲಿ 149 (2 ಸಾವು) ವರದಿಯಾಗಿವೆ.</p>.<p><strong>ಶಾಸಕ ಸಾವು</strong></p>.<p>ಮಹಾರಾಷ್ಟ್ರದ ಪಂಡರಾಪುರ-ಮಂಗಳವೇಧ ವಿಧಾನಸಭೆ ಕ್ಷೇತ್ರದ ಎನ್ಸಿಪಿ ಶಾಸಕ ಭರತ್ ಭಾಲ್ಕೆ ಶುಕ್ರವಾರ ಪುಣೆಯ ರೂಬಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೋವಿಡ್ ನಂತರದ ಸಮಸ್ಯೆಗಳ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು.</p>.<p><strong>ಬಿಜೆಪಿ ನಾಯಕನಿಗೆ ಕೋವಿಡ್</strong></p>.<p>ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ, ದೆಹಲಿ ಉಸ್ತುವಾರಿ ವೈಜಯಂತ್ ಪಾಂಡ ಅವರಿಗೆ ಕೋವಿಡ್ ಇರುವುದು ಶುಕ್ರವಾರ ದೃಢವಾಗಿದೆ.</p>.<p><strong>ಪ್ರಧಾನಿ 'ವ್ಯಾಕ್ಸಿನ್ ಟೂರ್'</strong></p>.<p>ಕೊರೊನಾ ವೈರಸ್ ಲಸಿಕೆ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಹಮದಾಬಾದ್, ಹೈದರಾಬಾದ್ ಮತ್ತು ಪುಣೆ ಪ್ರವಾಸ ಕೈಗೊಂಡಿದ್ದಾರೆ.</p>.<p>'ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನಾ ಪ್ರಕ್ರಿಯೆಯನ್ನು ಸ್ವತಃ ಪರಿಶೀಲಿಸಲು ಶನಿವಾರ ಪ್ರಧಾನಿ ನರೇಂದ್ರ ಮೋದಿ 3 ನಗರಗಳಿಗೆ ಭೇಟಿ ನೀಡಲಿದ್ದಾರೆ. ಅಹಮದಾಬಾದ್ನ 'ಸೈಡಸ್ ಬಯೋಟೆಕ್ ಪಾರ್ಕ್', ಹೈದರಾಬಾದ್ನ 'ಭಾರತ್ ಬಯೋಟೆಕ್' ಮತ್ತು ಪುಣೆಯ 'ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ'ಕ್ಕೆ ಅವರು ಭೇಟಿ ನೀಡುವರು' ಎಂದು ಪ್ರಧಾನಿ ಕಚೇರಿ (ಪಿಎಂಒ) ಟ್ವೀಟ್ ಮಾಡಿದೆ.</p>.<p>ಶನಿವಾರ ಬೆಳಗ್ಗೆ 9.30ಗೆ ಅವರು ಅಹಮದಾಬಾದ್ಗೆ ಭೇಟಿ ನೀಡಿದ್ದರು.</p>.<p><strong>ಲೇಹ್ನಲ್ಲಿ ರಾತ್ರಿ ಕರ್ಫ್ಯೂ</strong></p>.<p>ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ ಲೇಹ್ನಲ್ಲಿ ಹೊಸ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ. ಶನಿವಾರದಿಂದ ರಾತ್ರಿ ಕರ್ಫ್ಯೂ ಜಾರಿಗೆ ತರಲು ಆದೇಶಿಸಲಾಗಿದೆ. ರಾತ್ರಿ 8ರಿಂದ ಬೆಳಗ್ಗೆ 5ರ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>