ಆರೋಗ್ಯ ಸಮಸ್ಯೆಗಳು ಬಿಗಡಾಯಿಸಿದ್ದಕ್ಕಾಗಿ ಸರ್ಕಾರದ ಚುಕ್ಕಾಣಿ ಹಿಡಿದವರನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್, ಇದೇ 26ರಿಂದ ಲಖನೌ, ವಾರಾಣಸಿ, ಕಾನ್ಪುರ, ಪ್ರಯಾಗರಾಜ್ ಮತ್ತು ಗೋರಖಪುರದಲ್ಲಿ ಲಾಕ್ಡೌನ್ ಹೇರಲು ಸೋಮವಾರ ಆದೇಶಿಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ ವರ್ಮಾ ಮತ್ತು ಅಜಿತ್ ಕುಮಾರ್ ಅವರ ಪೀಠವು ಈ ಆದೇಶ ಹೊರಡಿಸಿದೆ.