ನವದೆಹಲಿ: ಕೋವಿಡ್ ಇನ್ನೂ ಮುಗಿದಿಲ್ಲ. ಸೋಂಕು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಯನ್ನು ತಪ್ಪದೆ ಪಾಲಿಸಿ ಎಂದು ಸಾರ್ವಜನಿಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಲಹೆ ನೀಡಿದರು.
ದೆಹಲಿಯಲ್ಲಿ ಭಗವಾನ್ ಮಹಾವೀರ್ ಸೂಪರ್ ಸ್ಪೆಷಾಲಿಟಿ ನಿರ್ಮಾಣಕ್ಕೆ ಮಂಗಳವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸೋಂಕು ತಡೆಗಟ್ಟಲು ಮಾಸ್ಕ್ ಪರಿಣಾಮಕಾರಿ ಅಸ್ತ್ರ ಎಂದರು.
250 ಹಾಸಿಗೆಗಳ ಸಾಮರ್ಥ್ಯದ ಈ ಆಸ್ಪತ್ರೆಯ ನಿರ್ಮಾಣ ಕಾರ್ಯ 2023ರ ವೇಳೆಗೆ ಮುಕ್ತಾಯವಾಗಲಿದೆ. ಇಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಸಮಾಜದ ಎಲ್ಲ ವರ್ಗದವರಿಗೂ ಕೈ ಗೆಟಕುವ ದರದಲ್ಲಿ ಮತ್ತು ಬಡವರಿಗೆ ಉಚಿತವಾಗಿ ದೊರಕಲಿದೆ. ಇದು ಸಂತಸದ ಸಂಗತಿ ಎಂದರು.