ನವದೆಹಲಿ: ಭಾರತ ಸೇರಿದಂತೆ ವಿಶ್ವದ ಇತರ ದೇಶಗಳಲ್ಲಿ ಪರಿಸರದ ಮೇಲೆ ನಡೆಯುತ್ತಿರುವ ನಿರಂತರ ಶೋಷಣೆಯಿಂದಾಗಿ ನೈಸರ್ಗಿಕ ಪ್ರದೇಶಗಳು ಮತ್ತು ಜೀವವೈವಿಧ್ಯತೆಗೆ ಕುತ್ತು ಎದುರಾಗಿದೆ. ಇದರ ಫಲಿತಾಂಶವಾಗಿ ಕೋವಿಡ್ ಸಾಂಕ್ರಾಮಿಕ ರೋಗ ವಿಶ್ವವನ್ನು ಕಾಡುತ್ತಿದೆ ಎಂದು ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ (ಯುಎನ್ಇಪಿ) ಭಾರತದ ಮುಖ್ಯಸ್ಥ ಅತುಲ್ ಬಾಗಿ ಹೇಳಿದ್ದಾರೆ.