<p><strong>ತಿರುವನಂತಪುರ: </strong>ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಆದರೆ, ಶಬರಿಮಲೆಯ ಆರಾಧ್ಯ ದೈವ ಸ್ವಾಮಿ ಅಯ್ಯಪ್ಪ ಭಕ್ತರನ್ನು ಇದು ವಿಚಲಿತಗೊಳಿಸಿಲ್ಲ.</p>.<p>ಅಯ್ಯಪ್ಪ ದರ್ಶನಕ್ಕಾಗಿ ಆನ್ಲೈನ್ ಮೂಲಕ ಟಿಕೆಟ್ ಬುಕಿಂಗ್ ಆರಂಭಗೊಂಡ ಕೆಲವೇ ಗಂಟೆಗಳಲ್ಲಿ, ಟಿಕೆಟ್ಗಳು ಬಿಸಿ ದೋಸೆಯಂತೆ ಮಾರಾಟವಾಗಿರುವುದು ಈ ಮಾತನ್ನು ಪುಷ್ಟೀಕರಿಸುತ್ತದೆ.</p>.<p>ದರ್ಶನಕ್ಕಾಗಿ ಬರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಸರ್ಕಾರ ನಿರ್ಧರಿಸಿದ್ದು, ಇದಕ್ಕೆ ಹಲವಾರು ಕಠಿಣ ಮಾರ್ಗಸೂಚಿಗಳನ್ನೂ ಜಾರಿಗೊಳಿಸಿದೆ. ಆದರೂ, ದರ್ಶನಾಕಾಂಕ್ಷಿಗಳಲ್ಲಿ ಉತ್ಸಾಹ ಕಡಿಮೆಯಾಗಿಲ್ಲ ಎಂದು ಮೂಲಗಳು ಹೇಳಿವೆ.</p>.<p>ಆರು ತಿಂಗಳ ನಂತರ ದೇವಸ್ಥಾನವನ್ನು ತೆರೆಯಲಾಗುತ್ತಿದೆ. ತಿಂಗಳಿಗೊಮ್ಮೆ ನಡೆಯುವ ಸಾಯಂಕಾಲದ ಪೂಜಾ ವಿಧಿಗಳಿಗೆ ಚಾಲನೆ ನೀಡಲಾಗುತ್ತದೆ.ಈ ಧಾರ್ಮಿಕ ವಿಧಿಗಳು ಅ. 16ರಿಂದ 21ರ ರಾತ್ರಿವರೆಗೆ ನೆರವೇರಲಿವೆ.</p>.<p>ಈ ಅವಧಿಯಲ್ಲಿ ಪ್ರತಿ ದಿನ 250 ಭಕ್ತರಿಗೆ ಮಾತ್ರ ಪ್ರವೇಶಾವಕಾಶ ಇದೆ. ಭಕ್ತರು ಸರದಿಯಲ್ಲಿ ಸಾಗುವುದನ್ನು ಆನ್ಲೈನ್ ಮೂಲಕವೇ ಪೊಲೀಸರು ನಿಯಂತ್ರಿಸುವ ವ್ಯವಸ್ಥೆ ಮಾಡಲಾಗಿದೆ.</p>.<p>ಮಾಸ್ಕ್ ಧರಿಸುವುದರಿಂದ ವಿನಾಯಿತಿ: ದೇವಸ್ಥಾನ ತಲುಪಲು ಬೆಟ್ಟವನ್ನು ಏರಬೇಕು. ಇಂಥ ಸಂದರ್ಭದಲ್ಲಿ ಭಕ್ತರು ಮಾಸ್ಕ್ ಧರಿಸಿ, ಚಾರಣ ಮಾಡುವುದು ಕಷ್ಟ ಎಂಬ ಕಾರಣಕ್ಕೆ ಈ ಅವಧಿಯಲ್ಲಿ ಮಾಸ್ಕ್ ಧರಿಸುವುದರಿಂದ ವಿನಾಯಿತಿ ನೀಡಲಾಗಿದೆ.</p>.<p>ದೇವಸ್ಥಾನದಲ್ಲಿ ಸ್ವಾಮಿ ಅಯ್ಯಪ್ಪ ದರ್ಶನ ಮಾಡುವುದಕ್ಕೆ 48 ಗಂಟೆಗಳ ಮೊದಲು ಕೋವಿಡ್ ಪರೀಕ್ಷೆ ಮಾಡಿಕೊಳ್ಳುವುದು ಕಡ್ಡಾಯಗೊಳಿಸಲಾಗಿದೆ.</p>.<p>ಆದರೆ, ಸರ್ಕಾರದ ಈ ನಿರ್ಧಾರಕ್ಕೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕೊರತೆ ಎದುರಿಸುತ್ತಿದೆ. ಈಗ ಶಬರಿಮಲೆಯಲ್ಲಿ ಹೆಚ್ಚುವರಿ ವೈದ್ಯರು, ಇತರ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ವೈದ್ಯರು ಬೇಡಿಕೆ ಮುಂದಿಟ್ಟಿದ್ದಾರೆ.</p>.<p>‘ಪ್ರತಿ ದಿನ 250 ಜನ ಭಕ್ತರಿಗೆ ಪ್ರವೇಶಾವಕಾಶ ನೀಡಲಾಗುತ್ತಿದೆ. ಹೀಗಾಗಿ ಚಾರಣ ವೇಳೆ ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದು ಕಷ್ಟವಾಗುವುದಿಲ್ಲ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಎ.ಎಲ್.ಶೀಜಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ: </strong>ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಆದರೆ, ಶಬರಿಮಲೆಯ ಆರಾಧ್ಯ ದೈವ ಸ್ವಾಮಿ ಅಯ್ಯಪ್ಪ ಭಕ್ತರನ್ನು ಇದು ವಿಚಲಿತಗೊಳಿಸಿಲ್ಲ.</p>.<p>ಅಯ್ಯಪ್ಪ ದರ್ಶನಕ್ಕಾಗಿ ಆನ್ಲೈನ್ ಮೂಲಕ ಟಿಕೆಟ್ ಬುಕಿಂಗ್ ಆರಂಭಗೊಂಡ ಕೆಲವೇ ಗಂಟೆಗಳಲ್ಲಿ, ಟಿಕೆಟ್ಗಳು ಬಿಸಿ ದೋಸೆಯಂತೆ ಮಾರಾಟವಾಗಿರುವುದು ಈ ಮಾತನ್ನು ಪುಷ್ಟೀಕರಿಸುತ್ತದೆ.</p>.<p>ದರ್ಶನಕ್ಕಾಗಿ ಬರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಸರ್ಕಾರ ನಿರ್ಧರಿಸಿದ್ದು, ಇದಕ್ಕೆ ಹಲವಾರು ಕಠಿಣ ಮಾರ್ಗಸೂಚಿಗಳನ್ನೂ ಜಾರಿಗೊಳಿಸಿದೆ. ಆದರೂ, ದರ್ಶನಾಕಾಂಕ್ಷಿಗಳಲ್ಲಿ ಉತ್ಸಾಹ ಕಡಿಮೆಯಾಗಿಲ್ಲ ಎಂದು ಮೂಲಗಳು ಹೇಳಿವೆ.</p>.<p>ಆರು ತಿಂಗಳ ನಂತರ ದೇವಸ್ಥಾನವನ್ನು ತೆರೆಯಲಾಗುತ್ತಿದೆ. ತಿಂಗಳಿಗೊಮ್ಮೆ ನಡೆಯುವ ಸಾಯಂಕಾಲದ ಪೂಜಾ ವಿಧಿಗಳಿಗೆ ಚಾಲನೆ ನೀಡಲಾಗುತ್ತದೆ.ಈ ಧಾರ್ಮಿಕ ವಿಧಿಗಳು ಅ. 16ರಿಂದ 21ರ ರಾತ್ರಿವರೆಗೆ ನೆರವೇರಲಿವೆ.</p>.<p>ಈ ಅವಧಿಯಲ್ಲಿ ಪ್ರತಿ ದಿನ 250 ಭಕ್ತರಿಗೆ ಮಾತ್ರ ಪ್ರವೇಶಾವಕಾಶ ಇದೆ. ಭಕ್ತರು ಸರದಿಯಲ್ಲಿ ಸಾಗುವುದನ್ನು ಆನ್ಲೈನ್ ಮೂಲಕವೇ ಪೊಲೀಸರು ನಿಯಂತ್ರಿಸುವ ವ್ಯವಸ್ಥೆ ಮಾಡಲಾಗಿದೆ.</p>.<p>ಮಾಸ್ಕ್ ಧರಿಸುವುದರಿಂದ ವಿನಾಯಿತಿ: ದೇವಸ್ಥಾನ ತಲುಪಲು ಬೆಟ್ಟವನ್ನು ಏರಬೇಕು. ಇಂಥ ಸಂದರ್ಭದಲ್ಲಿ ಭಕ್ತರು ಮಾಸ್ಕ್ ಧರಿಸಿ, ಚಾರಣ ಮಾಡುವುದು ಕಷ್ಟ ಎಂಬ ಕಾರಣಕ್ಕೆ ಈ ಅವಧಿಯಲ್ಲಿ ಮಾಸ್ಕ್ ಧರಿಸುವುದರಿಂದ ವಿನಾಯಿತಿ ನೀಡಲಾಗಿದೆ.</p>.<p>ದೇವಸ್ಥಾನದಲ್ಲಿ ಸ್ವಾಮಿ ಅಯ್ಯಪ್ಪ ದರ್ಶನ ಮಾಡುವುದಕ್ಕೆ 48 ಗಂಟೆಗಳ ಮೊದಲು ಕೋವಿಡ್ ಪರೀಕ್ಷೆ ಮಾಡಿಕೊಳ್ಳುವುದು ಕಡ್ಡಾಯಗೊಳಿಸಲಾಗಿದೆ.</p>.<p>ಆದರೆ, ಸರ್ಕಾರದ ಈ ನಿರ್ಧಾರಕ್ಕೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕೊರತೆ ಎದುರಿಸುತ್ತಿದೆ. ಈಗ ಶಬರಿಮಲೆಯಲ್ಲಿ ಹೆಚ್ಚುವರಿ ವೈದ್ಯರು, ಇತರ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ವೈದ್ಯರು ಬೇಡಿಕೆ ಮುಂದಿಟ್ಟಿದ್ದಾರೆ.</p>.<p>‘ಪ್ರತಿ ದಿನ 250 ಜನ ಭಕ್ತರಿಗೆ ಪ್ರವೇಶಾವಕಾಶ ನೀಡಲಾಗುತ್ತಿದೆ. ಹೀಗಾಗಿ ಚಾರಣ ವೇಳೆ ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದು ಕಷ್ಟವಾಗುವುದಿಲ್ಲ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಎ.ಎಲ್.ಶೀಜಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>