<p><strong>ಹೈದರಾಬಾದ್: </strong>ವಾರದ ಹಿಂದೆ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದ ತೆಲಂಗಾಣದ ವಾರಂಗಲ್ ಜಿಲ್ಲೆಯ 45 ವರ್ಷದ ಅಂಗನವಾಡಿ ಶಿಕ್ಷಕಿ ಎದೆನೋವಿನಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p>ವಾರಂಗಲ್ನ ಶ್ಯಾಮ್ ಪೇಟೆಯ ಶಿಕ್ಷಕಿ ಜನವರಿ 19ರಂದು ಲಸಿಕೆ ಹಾಕಿಸಿಕೊಂಡಿದ್ದು, ಶನಿವಾರ ಕೆಲವು ಔಷಧಿಗಳನ್ನು ಪಡೆದಿದ್ದಾರೆ. ಬಳಿಕ ಎದೆನೋವು ಕಾಣಿಸಿಕೊಂಡಿದ್ದರಿಂದ ಮಲಗಿದ್ದಾರೆ. ಆದರೆ, ಭಾನುವಾರ ಬೆಳಗ್ಗೆ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.</p>.<p>ಶಿಕ್ಷಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮಹಾತ್ಮಾ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿನ ಕಾರಣ ಪತ್ತೆಗೆ ಪ್ರಯೋಗಾಲಯ ಮಾದರಿ ಸಂಗ್ರಹಿಸಲಾಗಿದೆ ಎಂದು ಆಸ್ಪತ್ರೆ ಮುಖ್ಯಸ್ಥ ನಾಗಾರ್ಜುನ ರೆಡ್ಡಿ ಹೇಳಿದ್ದಾರೆ.</p>.<p>ತೆಲಂಗಾಣ ರಾಜ್ಯದಲ್ಲಿ ಕೋವಿಡ್ ಲಸಿಕೆ ಪಡೆದು ಎದೆನೋವು ಕಾಣಿಸಿಕೊಂಡು ಮೃತಪಟ್ಟ ಎರಡನೇ ಮಹಿಳೆಯಾಗಿದ್ದು, ನಿರ್ಮಲ್ ಜಿಲ್ಲೆಯ 42 ವರ್ಷದ ಆರೋಗ್ಯ ಕಾರ್ಯಕರ್ತರೊಬ್ಬರು ಲಸಿಕೆ ಪಡೆದ ಬಳಿಕ ಎದೆನೋವು ಕಾಣಿಸಿಕೊಂಡು ಮೃತಪಟ್ಟಿದ್ದರು. ಆದರೆ, ಪ್ರಾಥಮಿಕ ಪರೀಕ್ಷೆಯಲ್ಲಿ ಸಾವಿಗೂ ಲಸಿಕೆಗೂ ಸಂಬಂಧವಿಲ್ಲ ಎಂದು ತಿಳಿದುಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್: </strong>ವಾರದ ಹಿಂದೆ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದ ತೆಲಂಗಾಣದ ವಾರಂಗಲ್ ಜಿಲ್ಲೆಯ 45 ವರ್ಷದ ಅಂಗನವಾಡಿ ಶಿಕ್ಷಕಿ ಎದೆನೋವಿನಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p>ವಾರಂಗಲ್ನ ಶ್ಯಾಮ್ ಪೇಟೆಯ ಶಿಕ್ಷಕಿ ಜನವರಿ 19ರಂದು ಲಸಿಕೆ ಹಾಕಿಸಿಕೊಂಡಿದ್ದು, ಶನಿವಾರ ಕೆಲವು ಔಷಧಿಗಳನ್ನು ಪಡೆದಿದ್ದಾರೆ. ಬಳಿಕ ಎದೆನೋವು ಕಾಣಿಸಿಕೊಂಡಿದ್ದರಿಂದ ಮಲಗಿದ್ದಾರೆ. ಆದರೆ, ಭಾನುವಾರ ಬೆಳಗ್ಗೆ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.</p>.<p>ಶಿಕ್ಷಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮಹಾತ್ಮಾ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿನ ಕಾರಣ ಪತ್ತೆಗೆ ಪ್ರಯೋಗಾಲಯ ಮಾದರಿ ಸಂಗ್ರಹಿಸಲಾಗಿದೆ ಎಂದು ಆಸ್ಪತ್ರೆ ಮುಖ್ಯಸ್ಥ ನಾಗಾರ್ಜುನ ರೆಡ್ಡಿ ಹೇಳಿದ್ದಾರೆ.</p>.<p>ತೆಲಂಗಾಣ ರಾಜ್ಯದಲ್ಲಿ ಕೋವಿಡ್ ಲಸಿಕೆ ಪಡೆದು ಎದೆನೋವು ಕಾಣಿಸಿಕೊಂಡು ಮೃತಪಟ್ಟ ಎರಡನೇ ಮಹಿಳೆಯಾಗಿದ್ದು, ನಿರ್ಮಲ್ ಜಿಲ್ಲೆಯ 42 ವರ್ಷದ ಆರೋಗ್ಯ ಕಾರ್ಯಕರ್ತರೊಬ್ಬರು ಲಸಿಕೆ ಪಡೆದ ಬಳಿಕ ಎದೆನೋವು ಕಾಣಿಸಿಕೊಂಡು ಮೃತಪಟ್ಟಿದ್ದರು. ಆದರೆ, ಪ್ರಾಥಮಿಕ ಪರೀಕ್ಷೆಯಲ್ಲಿ ಸಾವಿಗೂ ಲಸಿಕೆಗೂ ಸಂಬಂಧವಿಲ್ಲ ಎಂದು ತಿಳಿದುಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>