ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇತ್ತೀಚೆಗೆ ಇಳಿಕೆ ಕಂಡು ಬರುತ್ತಿರುವ ಕಾರಣ, ಶಾಲೆಗಳನ್ನು ಆರಂಭಿಸಲು ಕೆಲವು ರಾಜ್ಯಗಳು ಕ್ರಮ ಕೈಗೊಂಡಿವೆ. ಆದರೆ, ಎಲ್ಲ ಶಿಕ್ಷಕರಿಗೆ ಕೋವಿಡ್ ಲಸಿಕೆ ನೀಡುವುದು ಸಾಧ್ಯವಾಗದೇ ಇರುವ ಬಗ್ಗೆ ಕಳವಳ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರ ಹೇಳಿಕೆಗೆ ಮಹತ್ವ ಬಂದಿದೆ.