<p><strong>ಬೆಂಗಳೂರು:</strong> ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್–19 ದೃಢಪಟ್ಟ 78,357 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದ 1,045 ಮಂದಿ ಸಾವಿಗೀಡಾಗಿದ್ದಾರೆ.</p>.<p>ದೇಶದಲ್ಲಿ ಒಟ್ಟು ಕೊರೊನಾ ವೈರಸ್ ಪ್ರಕರಣಗಳು 37,69,524 ಮುಟ್ಟಿದೆ. ಪ್ರಸ್ತುತ 8,01,282 ಸಕ್ರಿಯ ಪ್ರಕರಣಗಳಿದ್ದು, 29,01,909 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೆ 66,333 ಜನ ಕೋವಿಡ್ ಕಾರಣದಿಂದ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ಮಂಗಳವಾರ ಒಂದೇ ದಿನ 10,12,367 ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಹಾಗೂ ಸೆಪ್ಟೆಂಬರ್ 1ರ ವರೆಗೂ ದೇಶದಲ್ಲಿ ಒಟ್ಟು 4,43,37,201 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಪ್ರಕಟಿಸಿದೆ.</p>.<p>ಮಹಾರಾಷ್ಟ್ರದಲ್ಲಿ 1,98,866 ಸಕ್ರಿಯ ಪ್ರಕರಣಗಳಿದ್ದು, 5,84,537 ಮಂದಿ ಗುಣಮುಖರಾಗಿದ್ದಾರೆ ಹಾಗೂ 24,903 ಜನ ಸಾವಿಗೀಡಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 15,870 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ 1,56,728 ಜನ ಗುಣಮುಖರಾಗಿದ್ದು, 4,462 ಮಂದಿ ಸಾವಿಗೀಡಾಗಿದ್ದಾರೆ.</p>.<p>ಕರ್ನಾಟಕದಲ್ಲಿ 91,018 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ 2,54,626 ಮಂದಿ ಗುಣಮುಖರಾಗಿದ್ದು, 5,837 ಜನ ಸಾವಿಗೀಡಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್–19 ದೃಢಪಟ್ಟ 78,357 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದ 1,045 ಮಂದಿ ಸಾವಿಗೀಡಾಗಿದ್ದಾರೆ.</p>.<p>ದೇಶದಲ್ಲಿ ಒಟ್ಟು ಕೊರೊನಾ ವೈರಸ್ ಪ್ರಕರಣಗಳು 37,69,524 ಮುಟ್ಟಿದೆ. ಪ್ರಸ್ತುತ 8,01,282 ಸಕ್ರಿಯ ಪ್ರಕರಣಗಳಿದ್ದು, 29,01,909 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೆ 66,333 ಜನ ಕೋವಿಡ್ ಕಾರಣದಿಂದ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ಮಂಗಳವಾರ ಒಂದೇ ದಿನ 10,12,367 ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಹಾಗೂ ಸೆಪ್ಟೆಂಬರ್ 1ರ ವರೆಗೂ ದೇಶದಲ್ಲಿ ಒಟ್ಟು 4,43,37,201 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಪ್ರಕಟಿಸಿದೆ.</p>.<p>ಮಹಾರಾಷ್ಟ್ರದಲ್ಲಿ 1,98,866 ಸಕ್ರಿಯ ಪ್ರಕರಣಗಳಿದ್ದು, 5,84,537 ಮಂದಿ ಗುಣಮುಖರಾಗಿದ್ದಾರೆ ಹಾಗೂ 24,903 ಜನ ಸಾವಿಗೀಡಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 15,870 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ 1,56,728 ಜನ ಗುಣಮುಖರಾಗಿದ್ದು, 4,462 ಮಂದಿ ಸಾವಿಗೀಡಾಗಿದ್ದಾರೆ.</p>.<p>ಕರ್ನಾಟಕದಲ್ಲಿ 91,018 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ 2,54,626 ಮಂದಿ ಗುಣಮುಖರಾಗಿದ್ದು, 5,837 ಜನ ಸಾವಿಗೀಡಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>