ಗುರುವಾರ ನಡೆದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಪತ್ತು ನಿರ್ವಹಣಾ ಸಚಿವ ವಿಜಯ್ ವಾಡೆಟ್ಟಿವಾರ್ ಅವರು, ರಾಜಧಾನಿ ಮುಂಬೈನಲ್ಲಿ ನಿರ್ಬಂಧಗಳನ್ನು ಭಾಗಶಃ ಸಡಿಲಗೊಳಿಸಲಾಗುವುದು. ಆದರೆ, ಸ್ಥಳೀಯ ರೈಲು ಪ್ರಯಾಣ ಸೇರಿದಂತೆ ಇನ್ನಿತರ ದೈನಂದಿನ ಚಟುವಟಿಕೆಗಳು ಸಾರ್ವಜನಿಕರಿಗೆ ಮುಕ್ತವಾಗಿರುವುದಿಲ್ಲ ಎಂದು ಹೇಳಿದ್ದಾರೆ.