<p class="title"><strong>ತಿರುವನಂತಪುರ</strong>: ಕೇರಳದಲ್ಲಿ ಕೋವಿಡ್ ಸೋಂಕು ಏರುಗತಿಯಲ್ಲಿ ಸಾಗುತ್ತಿದ್ದರೂ, ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ರಾಜ್ಯದಲ್ಲಿ ಕೋವಿಡ್ ಪಿಡುಗಿನ ತೀವ್ರತೆ ಕಡಿಮೆಯಾಗುತ್ತಿದೆ ಎಂದು ಬುಧವಾರ ವಿಧಾನಸಭೆಗೆ ತಿಳಿಸಿದ್ದಾರೆ.</p>.<p class="title">ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪಡೆಯಬೇಕಾದವರ ಮತ್ತು ಐಸಿಯುನಲ್ಲಿ ದಾಖಲಾಗಬೇಕಾದವರ ಸಂಖ್ಯೆ ಕಡಿಮೆಯಾಗಿದೆ ಎಂದು ಅವರು ಹೇಳಿದರು.</p>.<p class="title">ಸಂಪೂರ್ಣವಾಗಿ ಲಸಿಕೆ ಪಡೆದವರಿಗೆ ಸೋಂಕು ಬರುತ್ತಿದೆಯೇ ಅಥವಾ ಒಮ್ಮೆ ಸೋಂಕಿತರಾಗಿದ್ದವರಲ್ಲಿ ಮರು ಸೋಂಕು ಕಾಣಿಸಿಕೊಳ್ಳುತ್ತಿದೆಯೇ ಎಂಬುದರ ಕುರಿತು ಪರಿಶೀಲಿಸಲಾಗುತ್ತಿದೆ. ಸಮೀಕ್ಷೆಯ ಪ್ರಕಾರ ಮರು ಸೋಂಕಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.</p>.<p class="title">ಇದರ ಜತೆಗೆ ರಾಜ್ಯದಲ್ಲಿ ಲಸಿಕೆ ನೀಡುವಿಕೆ ಕಾರ್ಯವೂ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು.</p>.<p class="title">ಕೇರಳದಲ್ಲಿ ಮಂಗಳವಾರ 23,676 ಹೊಸ ಪ್ರಕರಣಗಳು ವರದಿಯಾಗಿದ್ದು, 148 ಜನರು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ತಿರುವನಂತಪುರ</strong>: ಕೇರಳದಲ್ಲಿ ಕೋವಿಡ್ ಸೋಂಕು ಏರುಗತಿಯಲ್ಲಿ ಸಾಗುತ್ತಿದ್ದರೂ, ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ರಾಜ್ಯದಲ್ಲಿ ಕೋವಿಡ್ ಪಿಡುಗಿನ ತೀವ್ರತೆ ಕಡಿಮೆಯಾಗುತ್ತಿದೆ ಎಂದು ಬುಧವಾರ ವಿಧಾನಸಭೆಗೆ ತಿಳಿಸಿದ್ದಾರೆ.</p>.<p class="title">ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪಡೆಯಬೇಕಾದವರ ಮತ್ತು ಐಸಿಯುನಲ್ಲಿ ದಾಖಲಾಗಬೇಕಾದವರ ಸಂಖ್ಯೆ ಕಡಿಮೆಯಾಗಿದೆ ಎಂದು ಅವರು ಹೇಳಿದರು.</p>.<p class="title">ಸಂಪೂರ್ಣವಾಗಿ ಲಸಿಕೆ ಪಡೆದವರಿಗೆ ಸೋಂಕು ಬರುತ್ತಿದೆಯೇ ಅಥವಾ ಒಮ್ಮೆ ಸೋಂಕಿತರಾಗಿದ್ದವರಲ್ಲಿ ಮರು ಸೋಂಕು ಕಾಣಿಸಿಕೊಳ್ಳುತ್ತಿದೆಯೇ ಎಂಬುದರ ಕುರಿತು ಪರಿಶೀಲಿಸಲಾಗುತ್ತಿದೆ. ಸಮೀಕ್ಷೆಯ ಪ್ರಕಾರ ಮರು ಸೋಂಕಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.</p>.<p class="title">ಇದರ ಜತೆಗೆ ರಾಜ್ಯದಲ್ಲಿ ಲಸಿಕೆ ನೀಡುವಿಕೆ ಕಾರ್ಯವೂ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು.</p>.<p class="title">ಕೇರಳದಲ್ಲಿ ಮಂಗಳವಾರ 23,676 ಹೊಸ ಪ್ರಕರಣಗಳು ವರದಿಯಾಗಿದ್ದು, 148 ಜನರು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>