ಭಾರತೀಯ ವೈದ್ಯಕೀಯ ಸಂಘದ (ಐಎಂಎ) 96ನೇ ರಾಷ್ಟ್ರೀಯ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿರುವ ನಿತೀಶ್ ಕುಮಾರ್ ಅವರು ಕೋವಿಡ್–19 ಮೂರನೇ ಅಲೆಯ ಕುರಿತು ಪ್ರಸ್ತಾಪಿಸಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕವನ್ನು ಎದುರಿಸಲು ರಾಜ್ಯ ಸರ್ಕಾರ ಸಕಲ ರೀತಿಯಲ್ಲೂ ಸಜ್ಜಾಗಿದೆ, ' ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿಗಳ ಅನ್ವಯ ಆರೋಗ್ಯ ಇಲಾಖೆಯು ಆಸ್ಪತ್ರೆಗಳಲ್ಲಿ ಸೌಲಭ್ಯಗಳನ್ನು ಉನ್ನತೀಕರಿಸುವ ಕಾರ್ಯದಲ್ಲಿ ನಿರತವಾಗಿದೆ' ಎಂದಿದ್ದಾರೆ.