<p><strong>ನವದೆಹಲಿ:</strong> ಕೊರೊನಾ ಸೋಂಕು ತಡೆಗೆ ಅಭಿವೃದ್ಧಿಪಡಿಸಿದ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ನ ತುರ್ತು ಮತ್ತು ನಿರ್ಬಂಧಿತ ಬಳಕೆಗೆ ಭಾರತದ ಔಷಧ ಮಹಾನಿಯಂತ್ರಕರು (ಡಿಸಿಜಿಐ) ಅನುಮೋದನೆ ನೀಡಿದ್ದಾರೆ. ಇದರಿಂದಾಗಿ, ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ದಿಸೆಯಲ್ಲಿ ದೇಶವು ಮತ್ತೊಂದು ಹೆಜ್ಜೆ ಮುಂದೆ ಇರಿಸಿದಂತಾಗಿದೆ.</p>.<p>ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಘಟನೆಯ (ಸಿಡಿಎಸ್ಸಿಒ) ಕೋವಿಡ್–19 ವಿಷಯ ಪರಿಣತ ಸಮಿತಿಯ ಶಿಫಾರಸಿನ ಆಧಾರದಲ್ಲಿ ಲಸಿಕೆಗಳ ಬಳಕೆಗೆ ಅನುಮತಿ ನೀಡುವ ನಿರ್ಧಾರವನ್ನು ಡಿಸಿಜಿಐ ತೆಗೆದುಕೊಂಡಿದೆ. ಆಸ್ಟ್ರಾಜೆನೆಕಾ ಸಂಸ್ಥೆ ಮತ್ತು ಆಕ್ಸ್ಫರ್ಡ್ ವಿಶ್ವವಿದ್ಯಾಲಯವು ಜಂಟಿಯಾಗಿ ಕೋವಿಶೀಲ್ಡ್ ಲಸಿಕೆಯನ್ನು ಅಭಿವೃದ್ಧಿಪಡಿಸಿವೆ.</p>.<p>ಪುಣೆಯ ಸೆರಂ ಇನ್ಸ್ಟಿಟ್ಯೂಟ್ ಈ ಲಸಿಕೆಯನ್ನು ಭಾರತದಲ್ಲಿ ತಯಾರಿಸಲಿದೆ. ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತ್ ಬಯೋಟೆಕ್ ಸಂಸ್ಥೆಯು ದೇಶೀಯವಾಗಿ ಅಭಿವೃದ್ಧಿಪಡಿಸಿದೆ.</p>.<p>ಕೋವಿಶೀಲ್ಡ್ನ ತುರ್ತು ಬಳಕೆಗೆ ಅನುಮೋದನೆ ದೊರೆತಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಶನಿವಾರವೇ ತಿಳಿಸಿದ್ದರು.</p>.<p>ಲಸಿಕೆಗೆ ಅನುಮೋದನೆ ನೀಡಿದ ಕ್ರಮವನ್ನು ವಿಶ್ವ ಆರೋಗ್ಯ ಸಂಸ್ಥೆಯು (ಡಬ್ಲ್ಯುಎಚ್ಒ) ಸ್ವಾಗತಿಸಿದೆ. ಇದು ಈ ಪ್ರದೇಶದಲ್ಲಿನ ಕೋವಿಡ್ ವಿರುದ್ಧದ ಹೋರಾಟವನ್ನು ಇನ್ನಷ್ಟು ತೀವ್ರ ಮತ್ತು ಬಲಗೊಳಿಸಲು ನೆರವಾಗಲಿದೆ ಎಂದು ಡಬ್ಲ್ಯುಎಚ್ಒ ಹೇಳಿದೆ.</p>.<p><strong>ಸಾಹಸಕ್ಕೆ ಪ್ರತಿಫಲ:</strong>ತಮ್ಮ ಸಂಸ್ಥೆಯು ಕೈಗೊಂಡ ದೊಡ್ಡ ಸಾಹಸಕ್ಕೆ ಈಗ ಪ್ರತಿಫಲ ದೊರೆತಂತಾಗಿದೆ. ಕೋವಿ<br />ಶೀಲ್ಡ್ ಲಸಿಕೆಯು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದಾರ್ ಪೂನಾವಾಲಾ ಹೇಳಿದ್ದಾರೆ. ಕೆಲವೇ ವಾರಗಳಲ್ಲಿ ಲಸಿಕೆ ಪೂರೈಸಲು ತಮ್ಮ ಸಂಸ್ಥೆಯು ಸಜ್ಜಾಗಿದೆ ಎಂದೂ ಅವರು ತಿಳಿಸಿದ್ದಾರೆ.</p>.<p>ಲಸಿಕೆ ತಯಾರಿಕೆಯಲ್ಲಿ ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಕಂಪನಿಯಾಗಿರುವ ಸೆರಂನ ಮುಖ್ಯಸ್ಥ ಪೂನಾವಾಲಾ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.</p>.<p>ಲಸಿಕೆಯ ನಾಲ್ಕರಿಂದ ಐದು ಕೋಟಿ ಡೋಸ್ಗಳನ್ನು ಸಂಸ್ಥೆಯು ಸಂಗ್ರಹಿಸಿ ಇರಿಸಿಕೊಂಡಿದೆ. ಮಾರ್ಚ್ನಿಂದ ಪ್ರತಿ ತಿಂಗಳು 10 ಕೋಟಿ ಡೋಸ್ ತಯಾರಿಕೆ ಸಾಧ್ಯವಾಗುವಂತೆ ಸಾಮರ್ಥ್ಯ ಹೆಚ್ಚಿಸಿಕೊಳ್ಳಲಾಗುವುದು. ಜೂನ್ ಹೊತ್ತಿಗೆ 30 ಕೋಟಿ ಡೋಸ್ ಲಸಿಕೆ ಸಿದ್ಧವಾಗಲಿದೆ ಎಂದು ಪೂನಾವಾಲಾ ಕಳೆದ ತಿಂಗಳು ಹೇಳಿದ್ದರು.</p>.<p>ಝೈಡಸ್ ಕ್ಯಾಡಿಲಾಸಂಸ್ಥೆಯು ಅಭಿವೃದ್ಧಿಪಡಿಸಿರುವ ಕೋವಿಡ್ ಸಂಭಾವ್ಯ ಲಸಿಕೆಯ ಮೂರನೇ ಹಂತದ ಪರೀಕ್ಷೆಗಳಿಗೆ ಔಷಧ ಮಹಾನಿಯಂತ್ರಕರು ಅನುಮತಿ ನೀಡಿದ್ದಾರೆ.</p>.<p>ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ನ್ಯಾಷನಲ್ ಬಯೊಫಾರ್ಮಾ ಮಿಷನ್ (ಎನ್ಬಿಎಂ) ಬೆಂಬಲದಲ್ಲಿ ಈ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ. ಮೊದಲ ಮತ್ತು ಎರಡನೇ ಹಂತದಲ್ಲಿ ಒಂದು ಸಾವಿರ ಮಂದಿ ಮೇಲೆ ಲಸಿಕೆ ಪ್ರಯೋಗಿಸಲಾಗಿದೆ. ಮೂರನೇ ಹಂತದಲ್ಲಿ 26 ಸಾವಿರ ಭಾರತೀಯ ಸ್ವಯಂಸೇವಕರಿಗೆ ಲಸಿಕೆ ನೀಡಿ ಪ್ರಯೋಗ ನಡೆಸಲು ಅನುಮತಿ ಕೊಡಲಾಗಿದೆ.</p>.<p><strong>ರಾಜಕೀಯ ವಾಗ್ಯುದ್ಧ:</strong></p>.<p>ಲಸಿಕೆಗಳ ತುರ್ತು ಬಳಕೆಗೆ ಅನುಮೋದನೆ ನೀಡಿದ ವಿಚಾರದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ಯುದ್ಧ ನಡೆದಿದೆ. ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಕೋವ್ಯಾಕ್ಸಿನ್ಗೆ ಅನುಮೋದನೆ ನೀಡಿರುವುದು ‘ಅತ್ಯಾತುರದ ಕ್ರಮ’, ಈ ಲಸಿಕೆ ಪಡೆದುಕೊಂಡವರು ಬಳಿಕ ನಪುಂಸಕತ್ವಕ್ಕೆ ಒಳಗಾಗುವ ಅಪಾಯ ಇದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ, ‘ಸ್ಥಾಪಿತ ಹಿತಾಸಕ್ತಿ’ಗಳ ಪರವಾಗಿ ವಿರೋಧ ಪಕ್ಷಗಳು ಕೆಲಸ ಮಾಡುತ್ತಿವೆ ಎಂದಿದೆ.</p>.<p>* ಸೆರಂ ಮತ್ತು ಭಾರತ್ ಬಯೊಟೆಕ್ ಸಂಸ್ಥೆಗಳ ಲಸಿಕೆಗಳಿಗೆ ದೊರೆತ ಅನುಮೋದನೆಯು ಕೋವಿಡ್ ವಿರುದ್ಧದ ಸ್ಫೂರ್ತಿಯುತ ಹೋರಾಟದಲ್ಲಿ ನಿರ್ಣಾಯಕವಾದ ತಿರುವು.</p>.<p><em><strong>–ನರೇಂದ್ರ ಮೋದಿ, ಪ್ರಧಾನಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೊರೊನಾ ಸೋಂಕು ತಡೆಗೆ ಅಭಿವೃದ್ಧಿಪಡಿಸಿದ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ನ ತುರ್ತು ಮತ್ತು ನಿರ್ಬಂಧಿತ ಬಳಕೆಗೆ ಭಾರತದ ಔಷಧ ಮಹಾನಿಯಂತ್ರಕರು (ಡಿಸಿಜಿಐ) ಅನುಮೋದನೆ ನೀಡಿದ್ದಾರೆ. ಇದರಿಂದಾಗಿ, ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ದಿಸೆಯಲ್ಲಿ ದೇಶವು ಮತ್ತೊಂದು ಹೆಜ್ಜೆ ಮುಂದೆ ಇರಿಸಿದಂತಾಗಿದೆ.</p>.<p>ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಘಟನೆಯ (ಸಿಡಿಎಸ್ಸಿಒ) ಕೋವಿಡ್–19 ವಿಷಯ ಪರಿಣತ ಸಮಿತಿಯ ಶಿಫಾರಸಿನ ಆಧಾರದಲ್ಲಿ ಲಸಿಕೆಗಳ ಬಳಕೆಗೆ ಅನುಮತಿ ನೀಡುವ ನಿರ್ಧಾರವನ್ನು ಡಿಸಿಜಿಐ ತೆಗೆದುಕೊಂಡಿದೆ. ಆಸ್ಟ್ರಾಜೆನೆಕಾ ಸಂಸ್ಥೆ ಮತ್ತು ಆಕ್ಸ್ಫರ್ಡ್ ವಿಶ್ವವಿದ್ಯಾಲಯವು ಜಂಟಿಯಾಗಿ ಕೋವಿಶೀಲ್ಡ್ ಲಸಿಕೆಯನ್ನು ಅಭಿವೃದ್ಧಿಪಡಿಸಿವೆ.</p>.<p>ಪುಣೆಯ ಸೆರಂ ಇನ್ಸ್ಟಿಟ್ಯೂಟ್ ಈ ಲಸಿಕೆಯನ್ನು ಭಾರತದಲ್ಲಿ ತಯಾರಿಸಲಿದೆ. ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತ್ ಬಯೋಟೆಕ್ ಸಂಸ್ಥೆಯು ದೇಶೀಯವಾಗಿ ಅಭಿವೃದ್ಧಿಪಡಿಸಿದೆ.</p>.<p>ಕೋವಿಶೀಲ್ಡ್ನ ತುರ್ತು ಬಳಕೆಗೆ ಅನುಮೋದನೆ ದೊರೆತಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಶನಿವಾರವೇ ತಿಳಿಸಿದ್ದರು.</p>.<p>ಲಸಿಕೆಗೆ ಅನುಮೋದನೆ ನೀಡಿದ ಕ್ರಮವನ್ನು ವಿಶ್ವ ಆರೋಗ್ಯ ಸಂಸ್ಥೆಯು (ಡಬ್ಲ್ಯುಎಚ್ಒ) ಸ್ವಾಗತಿಸಿದೆ. ಇದು ಈ ಪ್ರದೇಶದಲ್ಲಿನ ಕೋವಿಡ್ ವಿರುದ್ಧದ ಹೋರಾಟವನ್ನು ಇನ್ನಷ್ಟು ತೀವ್ರ ಮತ್ತು ಬಲಗೊಳಿಸಲು ನೆರವಾಗಲಿದೆ ಎಂದು ಡಬ್ಲ್ಯುಎಚ್ಒ ಹೇಳಿದೆ.</p>.<p><strong>ಸಾಹಸಕ್ಕೆ ಪ್ರತಿಫಲ:</strong>ತಮ್ಮ ಸಂಸ್ಥೆಯು ಕೈಗೊಂಡ ದೊಡ್ಡ ಸಾಹಸಕ್ಕೆ ಈಗ ಪ್ರತಿಫಲ ದೊರೆತಂತಾಗಿದೆ. ಕೋವಿ<br />ಶೀಲ್ಡ್ ಲಸಿಕೆಯು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದಾರ್ ಪೂನಾವಾಲಾ ಹೇಳಿದ್ದಾರೆ. ಕೆಲವೇ ವಾರಗಳಲ್ಲಿ ಲಸಿಕೆ ಪೂರೈಸಲು ತಮ್ಮ ಸಂಸ್ಥೆಯು ಸಜ್ಜಾಗಿದೆ ಎಂದೂ ಅವರು ತಿಳಿಸಿದ್ದಾರೆ.</p>.<p>ಲಸಿಕೆ ತಯಾರಿಕೆಯಲ್ಲಿ ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಕಂಪನಿಯಾಗಿರುವ ಸೆರಂನ ಮುಖ್ಯಸ್ಥ ಪೂನಾವಾಲಾ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.</p>.<p>ಲಸಿಕೆಯ ನಾಲ್ಕರಿಂದ ಐದು ಕೋಟಿ ಡೋಸ್ಗಳನ್ನು ಸಂಸ್ಥೆಯು ಸಂಗ್ರಹಿಸಿ ಇರಿಸಿಕೊಂಡಿದೆ. ಮಾರ್ಚ್ನಿಂದ ಪ್ರತಿ ತಿಂಗಳು 10 ಕೋಟಿ ಡೋಸ್ ತಯಾರಿಕೆ ಸಾಧ್ಯವಾಗುವಂತೆ ಸಾಮರ್ಥ್ಯ ಹೆಚ್ಚಿಸಿಕೊಳ್ಳಲಾಗುವುದು. ಜೂನ್ ಹೊತ್ತಿಗೆ 30 ಕೋಟಿ ಡೋಸ್ ಲಸಿಕೆ ಸಿದ್ಧವಾಗಲಿದೆ ಎಂದು ಪೂನಾವಾಲಾ ಕಳೆದ ತಿಂಗಳು ಹೇಳಿದ್ದರು.</p>.<p>ಝೈಡಸ್ ಕ್ಯಾಡಿಲಾಸಂಸ್ಥೆಯು ಅಭಿವೃದ್ಧಿಪಡಿಸಿರುವ ಕೋವಿಡ್ ಸಂಭಾವ್ಯ ಲಸಿಕೆಯ ಮೂರನೇ ಹಂತದ ಪರೀಕ್ಷೆಗಳಿಗೆ ಔಷಧ ಮಹಾನಿಯಂತ್ರಕರು ಅನುಮತಿ ನೀಡಿದ್ದಾರೆ.</p>.<p>ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ನ್ಯಾಷನಲ್ ಬಯೊಫಾರ್ಮಾ ಮಿಷನ್ (ಎನ್ಬಿಎಂ) ಬೆಂಬಲದಲ್ಲಿ ಈ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ. ಮೊದಲ ಮತ್ತು ಎರಡನೇ ಹಂತದಲ್ಲಿ ಒಂದು ಸಾವಿರ ಮಂದಿ ಮೇಲೆ ಲಸಿಕೆ ಪ್ರಯೋಗಿಸಲಾಗಿದೆ. ಮೂರನೇ ಹಂತದಲ್ಲಿ 26 ಸಾವಿರ ಭಾರತೀಯ ಸ್ವಯಂಸೇವಕರಿಗೆ ಲಸಿಕೆ ನೀಡಿ ಪ್ರಯೋಗ ನಡೆಸಲು ಅನುಮತಿ ಕೊಡಲಾಗಿದೆ.</p>.<p><strong>ರಾಜಕೀಯ ವಾಗ್ಯುದ್ಧ:</strong></p>.<p>ಲಸಿಕೆಗಳ ತುರ್ತು ಬಳಕೆಗೆ ಅನುಮೋದನೆ ನೀಡಿದ ವಿಚಾರದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ಯುದ್ಧ ನಡೆದಿದೆ. ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಕೋವ್ಯಾಕ್ಸಿನ್ಗೆ ಅನುಮೋದನೆ ನೀಡಿರುವುದು ‘ಅತ್ಯಾತುರದ ಕ್ರಮ’, ಈ ಲಸಿಕೆ ಪಡೆದುಕೊಂಡವರು ಬಳಿಕ ನಪುಂಸಕತ್ವಕ್ಕೆ ಒಳಗಾಗುವ ಅಪಾಯ ಇದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ, ‘ಸ್ಥಾಪಿತ ಹಿತಾಸಕ್ತಿ’ಗಳ ಪರವಾಗಿ ವಿರೋಧ ಪಕ್ಷಗಳು ಕೆಲಸ ಮಾಡುತ್ತಿವೆ ಎಂದಿದೆ.</p>.<p>* ಸೆರಂ ಮತ್ತು ಭಾರತ್ ಬಯೊಟೆಕ್ ಸಂಸ್ಥೆಗಳ ಲಸಿಕೆಗಳಿಗೆ ದೊರೆತ ಅನುಮೋದನೆಯು ಕೋವಿಡ್ ವಿರುದ್ಧದ ಸ್ಫೂರ್ತಿಯುತ ಹೋರಾಟದಲ್ಲಿ ನಿರ್ಣಾಯಕವಾದ ತಿರುವು.</p>.<p><em><strong>–ನರೇಂದ್ರ ಮೋದಿ, ಪ್ರಧಾನಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>