<p><strong>ನವದೆಹಲಿ:</strong> ಕೋವಿಡ್-19 ಹೊಸ ಪ್ರಕರಣಗಳು ಹೆಚ್ಚು ಪತ್ತೆಯಾಗಿರುವ 10 ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯವು ತಜ್ಞರ ತಂಡವನ್ನು ಕಳುಹಿಸಿದೆ. ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಮಟ್ಟದ ಮೂವರು ಅಧಿಕಾರಿಗಳು ಈ ತಂಡದಲ್ಲಿ ಇದ್ದಾರೆ.</p>.<p>ಪ್ರತಿದಿನ ಪತ್ತೆಯಾಗುತ್ತಿರುವ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣಿಸಿಕೊಂಡಿರುವ →ಮಹಾರಾಷ್ಟ್ರ, ಕೇರಳ, ಛತ್ತೀಸಗಡ, ಮಧ್ಯಪ್ರದೇಶ, ಗುಜರಾತ್, ಪಂಜಾಬ್, ಕರ್ನಾಟಕ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಹಾಗೂ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಈ ತಂಡಗಳನ್ನು ನಿಯೋಜನೆ ಮಾಡಲಾಗಿದೆ.</p>.<p>‘ಆಯಾ ರಾಜ್ಯಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ದಿಢೀರ್ ಏರಿಕೆ ಆಗಲು ಏನು ಕಾರಣ ಎಂಬುದನ್ನು ಪತ್ತೆ ಮಾಡಲು ಈ ತಂಡಗಳು ಪ್ರಯತ್ನಿಸಲಿವೆ. ಆಯಾ ರಾಜ್ಯಗಳ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತಗಳ ಜತೆಯಲ್ಲಿ ಈ ತಂಡಗಳು ಕೆಲಸ ಮಾಡಲಿವೆ. ಹೊಸ ಅಲೆಯಲ್ಲಿ ಕೋವಿಡ್-19 ಹರಡುವಿಕೆಯ ಸರಪಳಿಯನ್ನು ತುಂಡರಿಸುವುದು ಹೇಗೆ ಎಂಬ ಕಾರ್ಯಯೋಜನೆಯನ್ನು ರೂಪಿಸಲು ಈ ತಂಡಗಳು ಪ್ರಯತ್ನಿಸಲಿವೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ.</p>.<p><strong>ರಾಜ್ಯಗಳಿಗೆ ಪತ್ರ: </strong>ಕೋವಿಡ್ ನಿಯಂತ್ರಣ ಕಾರ್ಯಯೋಜನೆಯ ಅನುಷ್ಠಾನವನ್ನು ಕಡೆಗಣಿಸಿವೆ ಎನ್ನಲಾದ ರಾಜ್ಯಗಳಿಗೆ ಆರೋಗ್ಯ ಸಚಿವಾಲಯವು ಪತ್ರ ಬರೆದಿದೆ.</p>.<p>‘ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ರಾಜ್ಯಗಳಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆಗಳ ಸಂಖ್ಯೆ ಕಡಿಮೆಯಾಗಿರುವುದು ಗಮನಕ್ಕೆ ಬಂದಿದೆ. ಹೀಗೆ ಆದರೆ, ಕೋವಿಡ್ ಲಾಕ್ಡೌನ್ನಿಂದ ಸಾಧಿಸಿದ ನಿಯಂತ್ರಣ<br />ವನ್ನು ಕಳೆದುಕೊಳ್ಳಬೇಕಾಗುತ್ತದೆ. ಆರ್ಟಿ-ಪಿಸಿಆರ್ ಪರೀಕ್ಷೆಗಳ ಸಂಖ್ಯೆಯನ್ನು ಗಣನೀಯ ಪ್ರಮಾಣದಲ್ಲಿ ಏರಿಕೆ ಮಾಡಬೇಕು. ಪತ್ತೆಯಾಗದೇ ಉಳಿದಿರುವ ಪ್ರಕರಣಗಳನ್ನು ಪತ್ತೆ ಮಾಡಬೇಕು’ ಎಂದು ಆರೋಗ್ಯ ಸಚಿವಾಲಯವು ಪತ್ರದಲ್ಲಿ ಸೂಚನೆ ನೀಡಿದೆ. ಮಹಾರಾಷ್ಟ್ರ, ಕೇರಳ, ಛತ್ತೀಸಗಡ, ಮಧ್ಯಪ್ರದೇಶ, ಗುಜರಾತ್, ಪಂಜಾಬ್ ಮತ್ತು ಜಮ್ಮು-ಕಾಶ್ಮೀರಕ್ಕೆ ಈ ಪತ್ರ ಬರೆಯಲಾಗಿದೆ.</p>.<p class="Briefhead"><strong>60ರ ಮೇಲ್ಪಟ್ಟವರಿಗೆ ಮಾರ್ಚ್ 1ರಿಂದ ಲಸಿಕೆ</strong></p>.<p>ಎರಡನೇ ಹಂತದ ಕೋವಿಡ್ ಲಸಿಕೆ ಕಾರ್ಯಕ್ರಮವು ಮಾರ್ಚ್ 1ರಿಂದ ಆರಂಭವಾಗಲಿದೆ. ಈ ಬಾರಿ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ.</p>.<p>* ಈ ಹಂತದಲ್ಲಿ 60 ವರ್ಷ ಮೇಲ್ಪಟ್ಟ 10 ಕೋಟಿ ಜನರಿಗೆ ಲಸಿಕೆ ಹಾಕುವ ಗುರಿ ಹಾಕಿಕೊಳ್ಳಲಾಗಿದೆ</p>.<p>* 45 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಅಂದಾಜು 17 ಕೋಟಿ ಜನರಿಗೆ ಈ ಹಂತದಲ್ಲಿ ಲಸಿಕೆ ನೀಡಲು ಉದ್ದೇಶಿಸಲಾಗಿದೆ</p>.<p>* ಈ ಹಂತದಲ್ಲಿ 10,000 ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಹಾಕಲಾಗುತ್ತದೆ</p>.<p>*20,000 ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ಹಾಕಲಾಗುತ್ತದೆ. ಆದರೆ, ಇದಕ್ಕೆ ಶುಲ್ಕ ಪಾವತಿ ಮಾಡಬೇಕು</p>.<p>* ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳಲು<br />ಶುಲ್ಕದ ಮೊತ್ತವನ್ನು ಒಂದೆರಡು ದಿನಗಳಲ್ಲಿ ಘೋಷಿಸಲಾಗುತ್ತದೆ</p>.<p>* ಯಾವೆಲ್ಲ ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರು ಲಸಿಕೆಗೆ ಅರ್ಹರು ಎಂಬುದನ್ನು ಮುಂದೆ ಪ್ರಕಟಿಸಲಾಗುವುದು</p>.<p class="Briefhead"><strong>ರಾಜ್ಯಗಳಿಗೆ ಸೂಚನೆ</strong></p>.<p>* ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿರುವ ಜಿಲ್ಲೆಗಳತ್ತ ಹೆಚ್ಚು ಗಮನ ನೀಡಬೇಕು. ಅಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಬೇಕು</p>.<p>*ರ್ಯಾಪಿಡ್ ಟೆಸ್ಟ್ನಲ್ಲಿ ನೆಗೆಟಿವ್ ಬಂದಿರುವ, ಆದರೆ ಕೋವಿಡ್ ಲಕ್ಷಣಗಳಿರುವ ಎಲ್ಲರನ್ನೂ ಕಡ್ಡಾಯವಾಗಿ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು</p>.<p>*ಕೋವಿಡ್ ಪಾಸಿಟಿವ್ ಇರುವ ಎಲ್ಲರನ್ನೂ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಇರಿಸಬೇಕು. ಅವರ ಸಂಪರ್ಕಕ್ಕೆ ಬಂದಿದ್ದವರನ್ನು ಪತ್ತೆಮಾಡಿ, ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು</p>.<p>*ಕೇಂದ್ರದ ತಜ್ಞರ ತಂಡಗಳು ಕ್ಷೇತ್ರಾಧ್ಯಯನ ನಡೆಸಲಿವೆ. ಈ ತಂಡಗಳಿಗೆ ಅಗತ್ಯ ಸಹಕಾರ ನೀಡಬೇಕು</p>.<p>*ಕೇಂದ್ರದ ತಜ್ಞರ ತಂಡಗಳು ತಮ್ಮ ಭೇಟಿಯ ಅಂತ್ಯದಲ್ಲಿ ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಜತೆ ಕಡ್ಡಾಯವಾಗಿ ಸಭೆ ನಡೆಸಲಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್-19 ಹೊಸ ಪ್ರಕರಣಗಳು ಹೆಚ್ಚು ಪತ್ತೆಯಾಗಿರುವ 10 ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯವು ತಜ್ಞರ ತಂಡವನ್ನು ಕಳುಹಿಸಿದೆ. ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಮಟ್ಟದ ಮೂವರು ಅಧಿಕಾರಿಗಳು ಈ ತಂಡದಲ್ಲಿ ಇದ್ದಾರೆ.</p>.<p>ಪ್ರತಿದಿನ ಪತ್ತೆಯಾಗುತ್ತಿರುವ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣಿಸಿಕೊಂಡಿರುವ →ಮಹಾರಾಷ್ಟ್ರ, ಕೇರಳ, ಛತ್ತೀಸಗಡ, ಮಧ್ಯಪ್ರದೇಶ, ಗುಜರಾತ್, ಪಂಜಾಬ್, ಕರ್ನಾಟಕ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಹಾಗೂ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಈ ತಂಡಗಳನ್ನು ನಿಯೋಜನೆ ಮಾಡಲಾಗಿದೆ.</p>.<p>‘ಆಯಾ ರಾಜ್ಯಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ದಿಢೀರ್ ಏರಿಕೆ ಆಗಲು ಏನು ಕಾರಣ ಎಂಬುದನ್ನು ಪತ್ತೆ ಮಾಡಲು ಈ ತಂಡಗಳು ಪ್ರಯತ್ನಿಸಲಿವೆ. ಆಯಾ ರಾಜ್ಯಗಳ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತಗಳ ಜತೆಯಲ್ಲಿ ಈ ತಂಡಗಳು ಕೆಲಸ ಮಾಡಲಿವೆ. ಹೊಸ ಅಲೆಯಲ್ಲಿ ಕೋವಿಡ್-19 ಹರಡುವಿಕೆಯ ಸರಪಳಿಯನ್ನು ತುಂಡರಿಸುವುದು ಹೇಗೆ ಎಂಬ ಕಾರ್ಯಯೋಜನೆಯನ್ನು ರೂಪಿಸಲು ಈ ತಂಡಗಳು ಪ್ರಯತ್ನಿಸಲಿವೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ.</p>.<p><strong>ರಾಜ್ಯಗಳಿಗೆ ಪತ್ರ: </strong>ಕೋವಿಡ್ ನಿಯಂತ್ರಣ ಕಾರ್ಯಯೋಜನೆಯ ಅನುಷ್ಠಾನವನ್ನು ಕಡೆಗಣಿಸಿವೆ ಎನ್ನಲಾದ ರಾಜ್ಯಗಳಿಗೆ ಆರೋಗ್ಯ ಸಚಿವಾಲಯವು ಪತ್ರ ಬರೆದಿದೆ.</p>.<p>‘ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ರಾಜ್ಯಗಳಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆಗಳ ಸಂಖ್ಯೆ ಕಡಿಮೆಯಾಗಿರುವುದು ಗಮನಕ್ಕೆ ಬಂದಿದೆ. ಹೀಗೆ ಆದರೆ, ಕೋವಿಡ್ ಲಾಕ್ಡೌನ್ನಿಂದ ಸಾಧಿಸಿದ ನಿಯಂತ್ರಣ<br />ವನ್ನು ಕಳೆದುಕೊಳ್ಳಬೇಕಾಗುತ್ತದೆ. ಆರ್ಟಿ-ಪಿಸಿಆರ್ ಪರೀಕ್ಷೆಗಳ ಸಂಖ್ಯೆಯನ್ನು ಗಣನೀಯ ಪ್ರಮಾಣದಲ್ಲಿ ಏರಿಕೆ ಮಾಡಬೇಕು. ಪತ್ತೆಯಾಗದೇ ಉಳಿದಿರುವ ಪ್ರಕರಣಗಳನ್ನು ಪತ್ತೆ ಮಾಡಬೇಕು’ ಎಂದು ಆರೋಗ್ಯ ಸಚಿವಾಲಯವು ಪತ್ರದಲ್ಲಿ ಸೂಚನೆ ನೀಡಿದೆ. ಮಹಾರಾಷ್ಟ್ರ, ಕೇರಳ, ಛತ್ತೀಸಗಡ, ಮಧ್ಯಪ್ರದೇಶ, ಗುಜರಾತ್, ಪಂಜಾಬ್ ಮತ್ತು ಜಮ್ಮು-ಕಾಶ್ಮೀರಕ್ಕೆ ಈ ಪತ್ರ ಬರೆಯಲಾಗಿದೆ.</p>.<p class="Briefhead"><strong>60ರ ಮೇಲ್ಪಟ್ಟವರಿಗೆ ಮಾರ್ಚ್ 1ರಿಂದ ಲಸಿಕೆ</strong></p>.<p>ಎರಡನೇ ಹಂತದ ಕೋವಿಡ್ ಲಸಿಕೆ ಕಾರ್ಯಕ್ರಮವು ಮಾರ್ಚ್ 1ರಿಂದ ಆರಂಭವಾಗಲಿದೆ. ಈ ಬಾರಿ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ.</p>.<p>* ಈ ಹಂತದಲ್ಲಿ 60 ವರ್ಷ ಮೇಲ್ಪಟ್ಟ 10 ಕೋಟಿ ಜನರಿಗೆ ಲಸಿಕೆ ಹಾಕುವ ಗುರಿ ಹಾಕಿಕೊಳ್ಳಲಾಗಿದೆ</p>.<p>* 45 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಅಂದಾಜು 17 ಕೋಟಿ ಜನರಿಗೆ ಈ ಹಂತದಲ್ಲಿ ಲಸಿಕೆ ನೀಡಲು ಉದ್ದೇಶಿಸಲಾಗಿದೆ</p>.<p>* ಈ ಹಂತದಲ್ಲಿ 10,000 ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಹಾಕಲಾಗುತ್ತದೆ</p>.<p>*20,000 ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ಹಾಕಲಾಗುತ್ತದೆ. ಆದರೆ, ಇದಕ್ಕೆ ಶುಲ್ಕ ಪಾವತಿ ಮಾಡಬೇಕು</p>.<p>* ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳಲು<br />ಶುಲ್ಕದ ಮೊತ್ತವನ್ನು ಒಂದೆರಡು ದಿನಗಳಲ್ಲಿ ಘೋಷಿಸಲಾಗುತ್ತದೆ</p>.<p>* ಯಾವೆಲ್ಲ ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರು ಲಸಿಕೆಗೆ ಅರ್ಹರು ಎಂಬುದನ್ನು ಮುಂದೆ ಪ್ರಕಟಿಸಲಾಗುವುದು</p>.<p class="Briefhead"><strong>ರಾಜ್ಯಗಳಿಗೆ ಸೂಚನೆ</strong></p>.<p>* ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿರುವ ಜಿಲ್ಲೆಗಳತ್ತ ಹೆಚ್ಚು ಗಮನ ನೀಡಬೇಕು. ಅಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಬೇಕು</p>.<p>*ರ್ಯಾಪಿಡ್ ಟೆಸ್ಟ್ನಲ್ಲಿ ನೆಗೆಟಿವ್ ಬಂದಿರುವ, ಆದರೆ ಕೋವಿಡ್ ಲಕ್ಷಣಗಳಿರುವ ಎಲ್ಲರನ್ನೂ ಕಡ್ಡಾಯವಾಗಿ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು</p>.<p>*ಕೋವಿಡ್ ಪಾಸಿಟಿವ್ ಇರುವ ಎಲ್ಲರನ್ನೂ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಇರಿಸಬೇಕು. ಅವರ ಸಂಪರ್ಕಕ್ಕೆ ಬಂದಿದ್ದವರನ್ನು ಪತ್ತೆಮಾಡಿ, ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು</p>.<p>*ಕೇಂದ್ರದ ತಜ್ಞರ ತಂಡಗಳು ಕ್ಷೇತ್ರಾಧ್ಯಯನ ನಡೆಸಲಿವೆ. ಈ ತಂಡಗಳಿಗೆ ಅಗತ್ಯ ಸಹಕಾರ ನೀಡಬೇಕು</p>.<p>*ಕೇಂದ್ರದ ತಜ್ಞರ ತಂಡಗಳು ತಮ್ಮ ಭೇಟಿಯ ಅಂತ್ಯದಲ್ಲಿ ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಜತೆ ಕಡ್ಡಾಯವಾಗಿ ಸಭೆ ನಡೆಸಲಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>