<p><strong>ನವದೆಹಲಿ: </strong>ವಿಸ್ಟ್ರಾನ್ ಕಾರ್ಖಾನೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಮಿಕ ವಿರೋಧಿ ನಿಲುವು ಕೈಗೊಂಡಿದ್ದಾರೆ ಎಂದು ಸಿಪಿಐ(ಎಂ) ಆರೋಪಿಸಿದೆ.</p>.<p>ಪಕ್ಷದ ಪಾಲಿಟ್ ಬ್ಯೂರೊ ಸಭೆಯಲ್ಲಿ ಈ ವಿಷಯದ ಬಗ್ಗೆ ಸಮಾಲೋಚನೆ ನಡೆಸಿದ ಮುಖಂಡರು, ಕಾರ್ಮಿಕರ ಬಂಧನ ಮತ್ತು ಪೊಲೀಸರ ದೌರ್ಜನ್ಯವನ್ನು ಖಂಡಿಸಿದರು.</p>.<p>ನಾಲ್ಕು ತಿಂಗಳು ಕಾಲ ಗುತ್ತಿಗೆ ಕಾರ್ಮಿಕರಿಗೆ ವೇತನ ನೀಡಿರಲಿಲ್ಲ ಮತ್ತು 12 ಗಂಟೆಗಳ ಕಾಲ ದುಡಿಸಿಕೊಳ್ಳಲಾಗುತ್ತಿತ್ತು. ಹೀಗಾಗಿಯೇ ಕಾರ್ಮಿಕರು ರೊಚ್ಚಿಗೆದ್ದು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.</p>.<p>ವಿಸ್ಟ್ರಾನ್ನಲ್ಲಿನ ಸುಮಾರು ಹತ್ತು ಸಾವಿರ ಕಾರ್ಮಿಕರಲ್ಲಿ ಶೇಕಡ 80ರಷ್ಟು ಮಂದಿ ಗುತ್ತಿಗೆ ಕಾರ್ಮಿಕರಿದ್ದಾರೆ. ಇವರನ್ನು ಕಾಯಂ ಮಾಡಿಕೊಂಡಿರಲಿಲ್ಲ. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಈ ರೀತಿ ಕಾನೂನುಗಳನ್ನು ಉಲ್ಲಂಘಿಸುವುದು ಸಾಮಾನ್ಯವಾಗುತ್ತಿದೆ. ಆ್ಯಪಲ್ ಕಂಪನಿ ಸಹ ವಿಸ್ಟ್ರಾನ್ ಕಂಪನಿ ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಆದರೆ, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾರ್ಮಿಕರ ಪರ ನಿಲುವು ತೆಗೆದುಕೊಳ್ಳದೆಯೇ ವಿಸ್ಟ್ರಾನ್ ಕಂಪನಿಗೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ತಿಳಿಸಿದೆ.</p>.<p>ಹೊಸ ಕಾರ್ಮಿಕ ಸಂಹಿತೆ ಜಾರಿಯಾದರೆ ಕಾರ್ಮಿಕರ ಹಕ್ಕುಗಳನ್ನು ಉಲ್ಲಂಘಿಸುವುದು ಮತ್ತಷ್ಟು ಸಹಜವಾಗುತ್ತದೆ. ವಿದೇಶಿ ಬಂಡವಾಳ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಹ ಕಾರ್ಮಿಕ ವಿರೋಧಿ ನಿಲುವು ಕೈಗೊಳ್ಳಬಾರದು ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ವಿಸ್ಟ್ರಾನ್ ಕಾರ್ಖಾನೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಮಿಕ ವಿರೋಧಿ ನಿಲುವು ಕೈಗೊಂಡಿದ್ದಾರೆ ಎಂದು ಸಿಪಿಐ(ಎಂ) ಆರೋಪಿಸಿದೆ.</p>.<p>ಪಕ್ಷದ ಪಾಲಿಟ್ ಬ್ಯೂರೊ ಸಭೆಯಲ್ಲಿ ಈ ವಿಷಯದ ಬಗ್ಗೆ ಸಮಾಲೋಚನೆ ನಡೆಸಿದ ಮುಖಂಡರು, ಕಾರ್ಮಿಕರ ಬಂಧನ ಮತ್ತು ಪೊಲೀಸರ ದೌರ್ಜನ್ಯವನ್ನು ಖಂಡಿಸಿದರು.</p>.<p>ನಾಲ್ಕು ತಿಂಗಳು ಕಾಲ ಗುತ್ತಿಗೆ ಕಾರ್ಮಿಕರಿಗೆ ವೇತನ ನೀಡಿರಲಿಲ್ಲ ಮತ್ತು 12 ಗಂಟೆಗಳ ಕಾಲ ದುಡಿಸಿಕೊಳ್ಳಲಾಗುತ್ತಿತ್ತು. ಹೀಗಾಗಿಯೇ ಕಾರ್ಮಿಕರು ರೊಚ್ಚಿಗೆದ್ದು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.</p>.<p>ವಿಸ್ಟ್ರಾನ್ನಲ್ಲಿನ ಸುಮಾರು ಹತ್ತು ಸಾವಿರ ಕಾರ್ಮಿಕರಲ್ಲಿ ಶೇಕಡ 80ರಷ್ಟು ಮಂದಿ ಗುತ್ತಿಗೆ ಕಾರ್ಮಿಕರಿದ್ದಾರೆ. ಇವರನ್ನು ಕಾಯಂ ಮಾಡಿಕೊಂಡಿರಲಿಲ್ಲ. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಈ ರೀತಿ ಕಾನೂನುಗಳನ್ನು ಉಲ್ಲಂಘಿಸುವುದು ಸಾಮಾನ್ಯವಾಗುತ್ತಿದೆ. ಆ್ಯಪಲ್ ಕಂಪನಿ ಸಹ ವಿಸ್ಟ್ರಾನ್ ಕಂಪನಿ ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಆದರೆ, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾರ್ಮಿಕರ ಪರ ನಿಲುವು ತೆಗೆದುಕೊಳ್ಳದೆಯೇ ವಿಸ್ಟ್ರಾನ್ ಕಂಪನಿಗೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ತಿಳಿಸಿದೆ.</p>.<p>ಹೊಸ ಕಾರ್ಮಿಕ ಸಂಹಿತೆ ಜಾರಿಯಾದರೆ ಕಾರ್ಮಿಕರ ಹಕ್ಕುಗಳನ್ನು ಉಲ್ಲಂಘಿಸುವುದು ಮತ್ತಷ್ಟು ಸಹಜವಾಗುತ್ತದೆ. ವಿದೇಶಿ ಬಂಡವಾಳ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಹ ಕಾರ್ಮಿಕ ವಿರೋಧಿ ನಿಲುವು ಕೈಗೊಳ್ಳಬಾರದು ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>