<p><strong>ನವದೆಹಲಿ</strong>: ಬಿಜೆಪಿಯ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಜತೆಗೆ ಸಹಮತ ಮುಂದುವರಿಸಲು ಸಿಪಿಎಂನಲ್ಲಿ ಒಮ್ಮತಮೂಡಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಗೊತ್ತುವಳಿಯ ರೂಪುರೇಷೆಯೊಂದನ್ನು ಭಾನುವಾರ ಮುಕ್ತಾಯವಾದ 3 ದಿನಗಳ ಸಿಪಿಎಂ ಕೇಂದ್ರ ಸಮಿತಿ ಸಭೆಯಲ್ಲಿ ಅಂಗೀಕರಿಸಲಾಯಿತು.</p>.<p>ಈ ರೂಪುರೇಷೆಯ ಆಧಾರದಲ್ಲಿ, ಪಾಲಿಟ್ ಬ್ಯೂರೊವು ಗೊತ್ತುವಳಿಯ ಪಠ್ಯ ಸಿದ್ಧಪಡಿಸಲಿದೆ. ಜನವರಿಯಲ್ಲಿ ನಡೆಯುವ ಸಮಿತಿ ಸಭೆಯಲ್ಲಿ ಈ ಗೊತ್ತುವಳಿಯನ್ನು ಮಂಡಿಸಲಾಗುವುದು. ಏಪ್ರಿಲ್ನಲ್ಲಿ ಕೇರಳದ ಕಣ್ಣೂರಿನಲ್ಲಿ ನಡೆಯಲಿರುವ ಪಕ್ಷದ ಸಭೆಯಲ್ಲಿ ಒಪ್ಪಿಗೆ ಸಿಗುವ ನಿರೀಕ್ಷೆ ಇದೆ.</p>.<p>ಕಾಂಗ್ರೆಸ್ ಜೊತೆ ಸಹಯೋಗ ಮುಂದುವರೆರಿಸುವುದರ ಕುರಿತು ಕೆಲ ನಾಯಕರು ವಿರೋಧ ವ್ಯಕ್ತಪಡಿಸಿದರು. ಆದರೆ ವಾದಗಳು ನಡೆಯಲಿಲ್ಲ. ಕಾಂಗ್ರೆಸ್ ಜತೆ ಸಾಗುವುದಕ್ಕೆ ಹೆಚ್ಚಿನವರಿಂದ ಸಹಮತ ದೊರಕಿತು ಎನ್ನಲಾಗಿದೆ.</p>.<p>ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಳ್ಳುತ್ತಿದೆ. ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿಗೆ ಸಮರ್ಥ ಎದುರಾಳಿ ಕಾಂಗ್ರೆಸ್ ಅಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಲಯಾಳ ವಾರಪತ್ರಿಕೆ ‘ಚಿಂತ’ದಲ್ಲಿ ಲೇಖನ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಒಮ್ಮತ ಮೂಡುವುದು ಕಷ್ಟ ಎಂದೇ ಭಾವಿಸಲಾಗಿತ್ತು. ಆದರೆ ಅಂಥ ವಿರೋಧ ಉಂಟಾಗಲಿಲ್ಲ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಜೆಪಿಯ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಜತೆಗೆ ಸಹಮತ ಮುಂದುವರಿಸಲು ಸಿಪಿಎಂನಲ್ಲಿ ಒಮ್ಮತಮೂಡಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಗೊತ್ತುವಳಿಯ ರೂಪುರೇಷೆಯೊಂದನ್ನು ಭಾನುವಾರ ಮುಕ್ತಾಯವಾದ 3 ದಿನಗಳ ಸಿಪಿಎಂ ಕೇಂದ್ರ ಸಮಿತಿ ಸಭೆಯಲ್ಲಿ ಅಂಗೀಕರಿಸಲಾಯಿತು.</p>.<p>ಈ ರೂಪುರೇಷೆಯ ಆಧಾರದಲ್ಲಿ, ಪಾಲಿಟ್ ಬ್ಯೂರೊವು ಗೊತ್ತುವಳಿಯ ಪಠ್ಯ ಸಿದ್ಧಪಡಿಸಲಿದೆ. ಜನವರಿಯಲ್ಲಿ ನಡೆಯುವ ಸಮಿತಿ ಸಭೆಯಲ್ಲಿ ಈ ಗೊತ್ತುವಳಿಯನ್ನು ಮಂಡಿಸಲಾಗುವುದು. ಏಪ್ರಿಲ್ನಲ್ಲಿ ಕೇರಳದ ಕಣ್ಣೂರಿನಲ್ಲಿ ನಡೆಯಲಿರುವ ಪಕ್ಷದ ಸಭೆಯಲ್ಲಿ ಒಪ್ಪಿಗೆ ಸಿಗುವ ನಿರೀಕ್ಷೆ ಇದೆ.</p>.<p>ಕಾಂಗ್ರೆಸ್ ಜೊತೆ ಸಹಯೋಗ ಮುಂದುವರೆರಿಸುವುದರ ಕುರಿತು ಕೆಲ ನಾಯಕರು ವಿರೋಧ ವ್ಯಕ್ತಪಡಿಸಿದರು. ಆದರೆ ವಾದಗಳು ನಡೆಯಲಿಲ್ಲ. ಕಾಂಗ್ರೆಸ್ ಜತೆ ಸಾಗುವುದಕ್ಕೆ ಹೆಚ್ಚಿನವರಿಂದ ಸಹಮತ ದೊರಕಿತು ಎನ್ನಲಾಗಿದೆ.</p>.<p>ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಳ್ಳುತ್ತಿದೆ. ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿಗೆ ಸಮರ್ಥ ಎದುರಾಳಿ ಕಾಂಗ್ರೆಸ್ ಅಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಲಯಾಳ ವಾರಪತ್ರಿಕೆ ‘ಚಿಂತ’ದಲ್ಲಿ ಲೇಖನ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಒಮ್ಮತ ಮೂಡುವುದು ಕಷ್ಟ ಎಂದೇ ಭಾವಿಸಲಾಗಿತ್ತು. ಆದರೆ ಅಂಥ ವಿರೋಧ ಉಂಟಾಗಲಿಲ್ಲ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>