ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಕ್ಕಾಡ್‌ನಲ್ಲಿ ಸಿಪಿಎಂ ಮುಖಂಡ ಕೊಲೆ

Last Updated 15 ಆಗಸ್ಟ್ 2022, 11:25 IST
ಅಕ್ಷರ ಗಾತ್ರ

ತಿರುವನಂತಪುರ: ಪಾಲಕ್ಕಾಡ್‌ನಲ್ಲಿ ಸಿಪಿಎಂ ಪಕ್ಷದ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಭಾನುವಾರ ರಾತ್ರಿ ಕೊಲೆ ಮಾಡಿದ್ದಾರೆ.

ಮಲಂಪುಳ ಬಳಿಯ ಕುನ್ನಂಗಡ ನಿವಾಸಿ ಶಾಜಹಾನ್‌ (40) ಕೊಲೆಯಾದವರು. ಇವರು ಸಿಪಿಎಂ ಪಕ್ಷದ ವಿಭಾಗೀಯ ಕಾರ್ಯದರ್ಶಿಯಾಗಿದ್ದರು. ಸ್ಥಳೀಯ ಸಮಿತಿಯ ಸದಸ್ಯರೂ ಆಗಿದ್ದರು.

‘ದುಷ್ಕರ್ಮಿಗಳ ಗುಂ‍ಪೊಂದು ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಕುನ್ನಂಗಡ ವೃತ್ತದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ಘಟನೆಯಲ್ಲಿ ಶಾಜಹಾನ್‌ ಅವರ ಕುತ್ತಿಗೆ ಹಾಗೂ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಅವರಿಗೆ ಪತ್ನಿ ಹಾಗೂ ಮೂವರು ಮಕ್ಕಳಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರು ಈ ಕೊಲೆ ಮಾಡಿದ್ದಾಗಿ ಸಿಪಿಎಂ ಆರೋಪಿಸಿದೆ. ಪಕ್ಷದೊಳಗಿನ ಒಳಜಗಳವೇ ಕೊಲೆಗೆ ಕಾರಣವೆಂದು ಬಿಜೆಪಿ ದೂರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT