ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಸೇನಾದಲ್ಲಿ ಮತ್ತೆ ಬಿರುಕು

Last Updated 10 ಜುಲೈ 2022, 13:54 IST
ಅಕ್ಷರ ಗಾತ್ರ

ಮುಂಬೈ: ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾದಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ.

ಸೇನಾ ಸಂಸದರ ಪೈಕಿ ಬಹುತೇಕರು ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಠಾಕ್ರೆ ಮೇಲೆ ಒತ್ತಡ ಹೇರಿದ್ದಾರೆ. ಈ ವಿಚಾರವಾಗಿ ಠಾಕ್ರೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಲಾಗಿದೆ.

ಶಿವಸೇನಾ 18 ಲೋಕಸಭಾ ಹಾಗೂ ಮೂವರು ರಾಜ್ಯಸಭಾ ಸದಸ್ಯರನ್ನು ಹೊಂದಿದೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷವು ಮುರ್ಮು ಅವರನ್ನು ಬೆಂಬಲಿಸಬೇಕು ಎಂದುಬುಡಕಟ್ಟು ಸಮುದಾಯಕ್ಕೆ ಸೇರಿರುವ ಸಂಸದರಾದರಾಹುಲ್‌ ಶೆವಾಲೆ ಮತ್ತು ರಾಜೇಂದ್ರ ಗಾವಿತ್‌ ಅವರು ಉದ್ಧವ್‌ ಠಾಕ್ರೆಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT