<p><strong>ಮಿರ್ಜಾಪುರ</strong>: ʼಉತ್ತರ ಪ್ರದೇಶ ಅಭಿವೃದ್ಧಿಯ ಶ್ರೇಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಬೇಕು. ಸ್ವಾತಂತ್ರ್ಯದ ನಂತರವೇ ರಾಜ್ಯದ ಅಭಿವೃದ್ಧಿ ಸಾಧ್ಯವಾಗಬೇಕಿತ್ತು. ಆದರೆ, ಈ ಹಿಂದೆ ಅಧಿಕಾರದಲ್ಲಿದ್ದ ಪಕ್ಷಗಳಿಗೆ ಅದಕ್ಕೆ ಸಮಯವಿರಲಿಲ್ಲ.ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಯಾವಾಗಲೂ ಶ್ರಮಿಸುತ್ತದೆʼಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.</p>.<p>ಮಿರ್ಜಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಯೋಗಿ ಮಾತನಾಡಿದರು.ವಿವಿಧ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆಶಂಕುಸ್ಥಾಪನೆ ನೆರವೇರಿಸುವ ಸಲುವಾಗಿ ಶಾ ಅವರೂ ಇಲ್ಲಿಗೆ ಆಗಮಿಸಿದ್ದರು.</p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಿರ್ಜಾಪುರ ಸಂಸದೆ ಹಾಗೂ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್, ಜಮ್ಮ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದು ಮಾಡುವಲ್ಲಿ ಶಾ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.</p>.<p>ʼಸಂವಿಧಾನದ 370ನೇ ವಿಧಿ ರದ್ದು ಮಾಡಲು ಅಮಿತ್ ಶಾ ಕಾರಣ. ಅದರಿಂದ ಇತಿಹಾಸ ನಿರ್ಮಾಣವಾಗಿದೆಯಷ್ಟೇಅಲ್ಲದೆ, ದೇಶದ ಭೌಗೋಳಿಕತೆಯನ್ನೂ ಬದಲಿಸಿದೆ. ಶಾ ಅವರನ್ನುರಾಜ್ಯಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆʼ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.</p>.<p>ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಸಂಬಂಧ ಮುಖ್ಯಮಂತ್ರಿ ಯೋಗಿ ಅವರನ್ನು ಅಮಿತ್ ಶಾ ಶ್ಲಾಘಿಸಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯು2022ರಲ್ಲಿ ನಡೆಯಲಿದೆ. 403 ಸದಸ್ಯ ಬಲದ ವಿಧಾನಸಭೆಯಲ್ಲಿ ಸದ್ಯ ಬಿಜೆಪಿ 309, ಸಮಾಜವಾದಿ ಪಕ್ಷ 49, ಬಿಎಸ್ಪಿ 18 ಹಾಗೂ ಕಾಂಗ್ರೆಸ್7 ಸ್ಥಾನಗಳನ್ನು ಹೊಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಿರ್ಜಾಪುರ</strong>: ʼಉತ್ತರ ಪ್ರದೇಶ ಅಭಿವೃದ್ಧಿಯ ಶ್ರೇಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಬೇಕು. ಸ್ವಾತಂತ್ರ್ಯದ ನಂತರವೇ ರಾಜ್ಯದ ಅಭಿವೃದ್ಧಿ ಸಾಧ್ಯವಾಗಬೇಕಿತ್ತು. ಆದರೆ, ಈ ಹಿಂದೆ ಅಧಿಕಾರದಲ್ಲಿದ್ದ ಪಕ್ಷಗಳಿಗೆ ಅದಕ್ಕೆ ಸಮಯವಿರಲಿಲ್ಲ.ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಯಾವಾಗಲೂ ಶ್ರಮಿಸುತ್ತದೆʼಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.</p>.<p>ಮಿರ್ಜಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಯೋಗಿ ಮಾತನಾಡಿದರು.ವಿವಿಧ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆಶಂಕುಸ್ಥಾಪನೆ ನೆರವೇರಿಸುವ ಸಲುವಾಗಿ ಶಾ ಅವರೂ ಇಲ್ಲಿಗೆ ಆಗಮಿಸಿದ್ದರು.</p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಿರ್ಜಾಪುರ ಸಂಸದೆ ಹಾಗೂ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್, ಜಮ್ಮ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದು ಮಾಡುವಲ್ಲಿ ಶಾ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.</p>.<p>ʼಸಂವಿಧಾನದ 370ನೇ ವಿಧಿ ರದ್ದು ಮಾಡಲು ಅಮಿತ್ ಶಾ ಕಾರಣ. ಅದರಿಂದ ಇತಿಹಾಸ ನಿರ್ಮಾಣವಾಗಿದೆಯಷ್ಟೇಅಲ್ಲದೆ, ದೇಶದ ಭೌಗೋಳಿಕತೆಯನ್ನೂ ಬದಲಿಸಿದೆ. ಶಾ ಅವರನ್ನುರಾಜ್ಯಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆʼ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.</p>.<p>ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಸಂಬಂಧ ಮುಖ್ಯಮಂತ್ರಿ ಯೋಗಿ ಅವರನ್ನು ಅಮಿತ್ ಶಾ ಶ್ಲಾಘಿಸಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯು2022ರಲ್ಲಿ ನಡೆಯಲಿದೆ. 403 ಸದಸ್ಯ ಬಲದ ವಿಧಾನಸಭೆಯಲ್ಲಿ ಸದ್ಯ ಬಿಜೆಪಿ 309, ಸಮಾಜವಾದಿ ಪಕ್ಷ 49, ಬಿಎಸ್ಪಿ 18 ಹಾಗೂ ಕಾಂಗ್ರೆಸ್7 ಸ್ಥಾನಗಳನ್ನು ಹೊಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>