‘ದೇಶದ ಮೂಲೆ ಮೂಲೆಗಳಿಂದ ಏಕಕಾಲಕ್ಕೆ ಜನರು ರೆಮ್ಡಿಸಿವಿರ್ ಔಷಧಕ್ಕಾಗಿ ಬೇಡಿಕೆ ಸಲ್ಲಿಸುತ್ತಿದ್ದಾರೆ. ಕೆಲವರು ತಮ್ಮ ಜೀವ ಉಳಿಸಿಕೊಳ್ಳಲು ರೆಡಿಸಿವಿರ್ ಔಷಧ ಖರೀದಿಗೆ ಪರದಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಬಿಜೆಪಿ ನಾಯಕರು, ರೆಮ್ಡಿಸಿವಿರ್ ಔಷಧಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿರುವುದು ಮಾನವೀಯತೆ ಮೇಲೆ ನಡೆಸುತ್ತಿರುವ ಅಪರಾಧವಾಗಿದೆ‘ ಎಂದು ಪ್ರಿಯಾಂಕಾ ದೂರಿದ್ದಾರೆ.