ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು,‘ಎಸ್ಸಿ ಮತ್ತು ಎಸ್ಟಿ ಸಮುದಾಯದ ವಿರುದ್ಧ ಪ್ರಕರಣಗಳು ಹೆಚ್ಚಾಗಿರುವುದು ನಿಜ. ಆದರೆ ಪೊಲೀಸರು ಮತ್ತು ಸಾರ್ವಜನಿಕ ಕಾನೂನು ವ್ಯವಸ್ಥೆ, ಜೀವ ಮತ್ತು ಆಸ್ತಿ ಸಂರಕ್ಷಣೆ, ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡದ (ಎಸ್ಟಿ) ಮೇಲಿನ ಅಪರಾಧಗಳ ಬಗೆಗಿನ ತನಿಖೆ ರಾಜ್ಯ ಸರ್ಕಾರದ ಜವಬ್ದಾರಿಯಾಗಿದೆ’ ಎಂದು ಹೇಳಿದರು.