<p><strong>ಮುಂಬೈ</strong>: 2019ರಲ್ಲಿ ಪತ್ರಕರ್ತರೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಕೆಳ ನ್ಯಾಯಾಲಯವು ಜಾರಿ ಮಾಡಿದ್ದ ಸಮನ್ಸ್ಗೆ ನೀಡಿರುವ ತಡೆಯಾಜ್ಞೆಯನ್ನು ಬಾಂಬೆ ಹೈಕೋರ್ಟ್ ಜೂನ್ 13ರ ವರೆಗೆ ವಿಸ್ತರಿಸಿದೆ.</p>.<p>ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಲ್ಮಾನ್ ಖಾನ್ ಮತ್ತು ಅವರ ಅಂಗರಕ್ಷಕ ನವಾಜ್ ಶೇಖ್ ವಿರುದ್ಧ ಸಮನ್ಸ್ ಜಾರಿ ಮಾಡಿ ಏಪ್ರಿಲ್ 5ರೊಳಗೆ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿತ್ತು.</p>.<p>ಇದಕ್ಕೆ ತಡೆಯಾಜ್ಞೆ ಕೋರಿ ಸಲ್ಮಾನ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಮೇ 25ರ ವರೆಗೆ ತಡಯಾಜ್ಞೆ ನೀಡಿತ್ತು. ಬಳಿಕ ನವಾಜ್ ಕೂಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಜೆ. ಜಮಾದಾರ್ ನೇತೃತ್ವದ ನ್ಯಾಯಪೀಠವು ತಡೆಯಾಜ್ಞೆಯನ್ನು ವಿಸ್ತರಿಸಿದೆ.</p>.<p>ತನ್ನ ಮೇಲೆ ಹಲ್ಲೆ ನಡೆಸಿ, ಬೆದರಿಕೆಯೊಡ್ಡಲಾಗಿದೆ ಎಂದು ಆರೋಪಿಸಿ ಪತ್ರಕರ್ತ ಅಶೋಕ್ ಪಾಂಡೆ ಅವರು ಸಲ್ಮಾನ್ ಖಾನ್ ಮತ್ತು ನವಾಜ್ ವಿರುದ್ಧ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: 2019ರಲ್ಲಿ ಪತ್ರಕರ್ತರೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಕೆಳ ನ್ಯಾಯಾಲಯವು ಜಾರಿ ಮಾಡಿದ್ದ ಸಮನ್ಸ್ಗೆ ನೀಡಿರುವ ತಡೆಯಾಜ್ಞೆಯನ್ನು ಬಾಂಬೆ ಹೈಕೋರ್ಟ್ ಜೂನ್ 13ರ ವರೆಗೆ ವಿಸ್ತರಿಸಿದೆ.</p>.<p>ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಲ್ಮಾನ್ ಖಾನ್ ಮತ್ತು ಅವರ ಅಂಗರಕ್ಷಕ ನವಾಜ್ ಶೇಖ್ ವಿರುದ್ಧ ಸಮನ್ಸ್ ಜಾರಿ ಮಾಡಿ ಏಪ್ರಿಲ್ 5ರೊಳಗೆ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿತ್ತು.</p>.<p>ಇದಕ್ಕೆ ತಡೆಯಾಜ್ಞೆ ಕೋರಿ ಸಲ್ಮಾನ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಮೇ 25ರ ವರೆಗೆ ತಡಯಾಜ್ಞೆ ನೀಡಿತ್ತು. ಬಳಿಕ ನವಾಜ್ ಕೂಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಜೆ. ಜಮಾದಾರ್ ನೇತೃತ್ವದ ನ್ಯಾಯಪೀಠವು ತಡೆಯಾಜ್ಞೆಯನ್ನು ವಿಸ್ತರಿಸಿದೆ.</p>.<p>ತನ್ನ ಮೇಲೆ ಹಲ್ಲೆ ನಡೆಸಿ, ಬೆದರಿಕೆಯೊಡ್ಡಲಾಗಿದೆ ಎಂದು ಆರೋಪಿಸಿ ಪತ್ರಕರ್ತ ಅಶೋಕ್ ಪಾಂಡೆ ಅವರು ಸಲ್ಮಾನ್ ಖಾನ್ ಮತ್ತು ನವಾಜ್ ವಿರುದ್ಧ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>