‘ದೆಹಲಿ ಪೊಲೀಸರ ನಡೆಯಿಂದ ನಮಗೆಲ್ಲಾ ಆಘಾತವಾಗಿದೆ. ಪೊಲೀಸರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಣತಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಮುಖ ರಾಜಕೀಯ ನಾಯಕರು, ಶಿಕ್ಷಣ ತಜ್ಞರು, ಸಾಂಸ್ಕೃತಿಕ ವಲಯದ ವ್ಯಕ್ತಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರ ಹೆಸರುಗಳನ್ನು ಕೋಮು ಗಲಭೆಯೊಂದಿಗೆ ತಳುಕುಹಾಕಲಾಗುತ್ತಿದೆ. ಇದು ಪಕ್ಷಪಾತ ಮತ್ತು ಪ್ರತೀಕಾರದ ಕ್ರಮ’ ಎಂದು ಪಕ್ಷವು ದೂರಿದೆ.