ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಅವರು ತಮ್ಮ ಪಕ್ಷದ ಶಾಸಕರಿಂದ ಬಂಡಾಯ ಎದುರಿಸುತ್ತಿದ್ದಾರೆ. ಪುದುಚೇರಿಯಲ್ಲಿ ನೆಲೆಕಂಡುಕೊಳ್ಳಲು ಯತ್ನಿಸುತ್ತಿರುವ ಬಿಜೆಪಿ ಜೊತೆ ಡಿಎಂಕೆ ಪಕ್ಷದ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಆಡಳಿತಾರೂಢ ಸರ್ಕಾರವು ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, ಮುಂದಿನ ಚುನಾವಣೆಯನ್ನು ಬೇರೊಂದು ಮೈತ್ರಿಕೂಟದ ಜೊತೆ ಎದುರಿಸಲು ಪುದುಚೇರಿ ಡಿಎಂಕೆ ಘಟಕ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.