<p class="bodytext"><strong>ಶ್ರೀನಗರ:</strong> ಗಡಿ ನಿಯಂತ್ರಣ ರೇಖೆಯ (ಎಲ್ಒಸಿ) ಮೂಲಕ ವ್ಯಾಪಾರ ಮಾಡಿ ಅದರಿಂದ ಬಂದ ಹಣವನ್ನು ಭಯೋತ್ಪಾದನಾ ಸಂಘಟನೆಗಳಿಗೆ ದೇಣಿಗೆ ನೀಡಲಾಗುತ್ತಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಭಾನುವಾರ ಜಮ್ಮು–ಕಾಶ್ಮೀರದ ಪೂಂಚ್ ಜಿಲ್ಲೆಯ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿದೆ.</p>.<p class="bodytext">‘ಪೊಲೀಸರು, ಸಿಆರ್ಪಿಎಫ್ ಸಿಬ್ಬಂದಿ ಜತೆಗೂಡಿ ಎನ್ಐಎನ ಅಧಿಕಾರಿಗಳು ಪೂಂಚ್ನ ಶಂಕಿತ ಎಲ್ಒಸಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದ 9 ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">‘ಪ್ರಸ್ತುತ ಪ್ರಕರಣದಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ಕ್ಯಾಲಿಫೋರ್ನಿಯಾ ಬಾದಾಮಿ (ಬಾದಾಮ್–ಗಿರಿ) ಮತ್ತು ಇತರ ವಸ್ತುಗಳನ್ನು ಆಮದು ಮಾಡಿಕೊಳ್ಳುವಾಗ ಭಾರಿ ಮೊತ್ತದ ಹಣವನ್ನು ವರ್ಗಾಯಿಸಲಾಗಿದೆ. ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶ ಹಾಗೂ ಪೂಂಚ್ ಜಿಲ್ಲೆಯ ಚಕ್ಕನ್ ದ ಭಾಗ್ ಪ್ರದೇಶದಲ್ಲಿರುವ ಎಲ್ಒಸಿ ಟ್ರೇಡ್ ಫೆಸಿಲಿಟೇಷನ್ ಸೆಂಟರ್ (ಟಿಎಫ್ಸಿ) ಮೂಲಕ ಇತರ ವಸ್ತುಗಳನ್ನು ಆಮದು ಮಾಡಿಕೊಳ್ಳುವಾಗ ಹಣ ವರ್ಗಾಯಿಸಲಾಗಿದೆ’ ಎಂದು ಎನ್ಐಎ ತನ್ನ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.</p>.<p class="bodytext">‘ಹೀಗೆ ಸಾಗಿಸಲಾಗುತ್ತಿದ್ದ ಹಣವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿನ ಪ್ರತ್ಯೇಕವಾದಿಗಳು ಮತ್ತು ಭಯೋತ್ಪಾದನಾ ಸಂಘಟನೆಗಳ ಬಳಕೆಗಾಗಿ ಒದಗಿಸಲಾಗುತ್ತಿತ್ತು. ಕೆಲವು ವ್ಯಾಪಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಸರಕುಗಳನ್ನು ಆಮದು ಮಾಡಿಕೊಂಡು ಭಯೋತ್ಪಾದನಾ ಸಂಘಟನೆಗಳಿಗೆ ನೆರವು ನೀಡುತ್ತಿದ್ದರು. ಕೆಲ ವ್ಯಾಪಾರಿಗಳು ಈ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಶಂಕೆ ಇದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ’ ಎಂದೂ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="bodytext">2008ರಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ನಡುವಣ ಬಾಂಧವ್ಯ ವೃದ್ಧಿಗಾಗಿ ಎಲ್ಒಸಿ ವ್ಯಾಪಾರ ಆರಂಭಿಸಲಾಗಿತ್ತು. ಪರಸ್ಪರ ವಿನಿಮಯ ವ್ಯವಸ್ಥೆಯನ್ನು ಆಧರಿಸಿದ್ದ ಈ ವ್ಯಾಪಾರದಲ್ಲಿ ಮೂರನೇ ವ್ಯಕ್ತಿಯ ಸರಕುಗಳಿಗೆ ಅನುಮತಿ ಇರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಶ್ರೀನಗರ:</strong> ಗಡಿ ನಿಯಂತ್ರಣ ರೇಖೆಯ (ಎಲ್ಒಸಿ) ಮೂಲಕ ವ್ಯಾಪಾರ ಮಾಡಿ ಅದರಿಂದ ಬಂದ ಹಣವನ್ನು ಭಯೋತ್ಪಾದನಾ ಸಂಘಟನೆಗಳಿಗೆ ದೇಣಿಗೆ ನೀಡಲಾಗುತ್ತಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಭಾನುವಾರ ಜಮ್ಮು–ಕಾಶ್ಮೀರದ ಪೂಂಚ್ ಜಿಲ್ಲೆಯ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿದೆ.</p>.<p class="bodytext">‘ಪೊಲೀಸರು, ಸಿಆರ್ಪಿಎಫ್ ಸಿಬ್ಬಂದಿ ಜತೆಗೂಡಿ ಎನ್ಐಎನ ಅಧಿಕಾರಿಗಳು ಪೂಂಚ್ನ ಶಂಕಿತ ಎಲ್ಒಸಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದ 9 ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">‘ಪ್ರಸ್ತುತ ಪ್ರಕರಣದಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ಕ್ಯಾಲಿಫೋರ್ನಿಯಾ ಬಾದಾಮಿ (ಬಾದಾಮ್–ಗಿರಿ) ಮತ್ತು ಇತರ ವಸ್ತುಗಳನ್ನು ಆಮದು ಮಾಡಿಕೊಳ್ಳುವಾಗ ಭಾರಿ ಮೊತ್ತದ ಹಣವನ್ನು ವರ್ಗಾಯಿಸಲಾಗಿದೆ. ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶ ಹಾಗೂ ಪೂಂಚ್ ಜಿಲ್ಲೆಯ ಚಕ್ಕನ್ ದ ಭಾಗ್ ಪ್ರದೇಶದಲ್ಲಿರುವ ಎಲ್ಒಸಿ ಟ್ರೇಡ್ ಫೆಸಿಲಿಟೇಷನ್ ಸೆಂಟರ್ (ಟಿಎಫ್ಸಿ) ಮೂಲಕ ಇತರ ವಸ್ತುಗಳನ್ನು ಆಮದು ಮಾಡಿಕೊಳ್ಳುವಾಗ ಹಣ ವರ್ಗಾಯಿಸಲಾಗಿದೆ’ ಎಂದು ಎನ್ಐಎ ತನ್ನ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.</p>.<p class="bodytext">‘ಹೀಗೆ ಸಾಗಿಸಲಾಗುತ್ತಿದ್ದ ಹಣವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿನ ಪ್ರತ್ಯೇಕವಾದಿಗಳು ಮತ್ತು ಭಯೋತ್ಪಾದನಾ ಸಂಘಟನೆಗಳ ಬಳಕೆಗಾಗಿ ಒದಗಿಸಲಾಗುತ್ತಿತ್ತು. ಕೆಲವು ವ್ಯಾಪಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಸರಕುಗಳನ್ನು ಆಮದು ಮಾಡಿಕೊಂಡು ಭಯೋತ್ಪಾದನಾ ಸಂಘಟನೆಗಳಿಗೆ ನೆರವು ನೀಡುತ್ತಿದ್ದರು. ಕೆಲ ವ್ಯಾಪಾರಿಗಳು ಈ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಶಂಕೆ ಇದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ’ ಎಂದೂ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="bodytext">2008ರಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ನಡುವಣ ಬಾಂಧವ್ಯ ವೃದ್ಧಿಗಾಗಿ ಎಲ್ಒಸಿ ವ್ಯಾಪಾರ ಆರಂಭಿಸಲಾಗಿತ್ತು. ಪರಸ್ಪರ ವಿನಿಮಯ ವ್ಯವಸ್ಥೆಯನ್ನು ಆಧರಿಸಿದ್ದ ಈ ವ್ಯಾಪಾರದಲ್ಲಿ ಮೂರನೇ ವ್ಯಕ್ತಿಯ ಸರಕುಗಳಿಗೆ ಅನುಮತಿ ಇರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>