ಇದಕ್ಕೆ ಭಾನುವಾರ ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಸಿಬಿಐ ತನಿಖೆಗೆ ಆದೇಶಿಸಿದ ನ್ಯಾಯಾಂಗದ ಟೀಕೆ ಮಾಡಿ, ಬ್ಯಾನರ್ಜಿ ಅವರು ಎಲ್ಲೆ ಮೀರಿದ್ದಾರೆ. ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರು ತ್ವರಿತವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.