<p class="title"><strong>ನವದೆಹಲಿ</strong>: ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ತನ್ನ ಪಡೆಯ ವೀರ ಹುತಾತ್ಮ, ಧೈರ್ಯಶಾಲಿ 13 ಯೋಧರ ಸಾಹಸ ಕುರಿತಾದ ‘ದಿ ಶೌರ್ಯ ಅನ್ಬಾಂಡ್’ ಎಂಬ ಕೃತಿಯನ್ನು ಹೊರತಂದಿದೆ. ಈ ವಿಶೇಷ ಕೃತಿಯು 2001ರಲ್ಲಿ ಸಂಸತ್ ಭವನ ದಾಳಿ ವೇಳೆ ಹುತಾತ್ಮರಾದ ಕಮಲೇಶ್ ಕುಮಾರಿ ಅವರ ಜೀವನಗಾಥೆಯನ್ನೂ ಒಳಗೊಂಡಿದೆ.</p>.<p class="title">ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾನುವಾರ ಈ ಕೃತಿಯನ್ನು ಬಿಡುಗಡೆಗೊಳಿಸಿದರು.</p>.<p class="title">’ಈ ಕೃತಿಯನ್ನು ಓದಿದ ಎಲ್ಲರೂ ಹೆಮ್ಮೆ ಪಡುತ್ತಾರೆ ಹಾಗೂ ಮುಂದಿನ ಪೀಳಿಗೆಗೆ ಇದು ಸ್ಫೂರ್ತಿಯಾಗಲಿದೆ‘ ಎಂದು ಅವರು ತಿಳಿಸಿದ್ದಾರೆ.</p>.<p class="title">ಸಿಆರ್ಪಿಎಫ್ ಡಿಜಿ ಎ.ಪಿ ಮಹೇಶ್ವರಿ ಅವರು, ’ಸಿಆರ್ಪಿಎಫ್ ವೀರಯೋಧರ ಜೀವನಚರಿತ್ರೆಯನ್ನೊಳಗೊಂಡ ಸರಣಿ ಕೃತಿಗಳನ್ನು ಪ್ರಕಟಿಸುವ ಯೋಜನೆ ಇದೆ‘ ಎಂದು ಅವರು ತಿಳಿಸಿದ್ದಾರೆ.</p>.<p class="title">ಸರಣಿಯ ಮೊದಲ ಕೃತಿಯಲ್ಲಿ ಸಿಆರ್ಪಿಎಫ್ನ ಧೈರ್ಯಶಾಲಿ 13 ಯೋಧರ ಜೀವನಕತೆಯನ್ನೊಳಗೊಂಡಿದೆ. ’ಈ ಕೃತಿಯಲ್ಲಿನ ಎಲ್ಲಾ ಯೋಧರು ತಮ್ಮ ಕರ್ತವ್ಯವನ್ನು ಕೆಚ್ಚೆದೆ, ಅಗಾಧ ಧೈರ್ಯ ಹಾಗೂ ಬದ್ಧತೆಯಿಂದ ನಿರ್ವಹಿಸಿದ್ದರು‘ ಎಂದು ಮಹೇಶ್ವರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ತನ್ನ ಪಡೆಯ ವೀರ ಹುತಾತ್ಮ, ಧೈರ್ಯಶಾಲಿ 13 ಯೋಧರ ಸಾಹಸ ಕುರಿತಾದ ‘ದಿ ಶೌರ್ಯ ಅನ್ಬಾಂಡ್’ ಎಂಬ ಕೃತಿಯನ್ನು ಹೊರತಂದಿದೆ. ಈ ವಿಶೇಷ ಕೃತಿಯು 2001ರಲ್ಲಿ ಸಂಸತ್ ಭವನ ದಾಳಿ ವೇಳೆ ಹುತಾತ್ಮರಾದ ಕಮಲೇಶ್ ಕುಮಾರಿ ಅವರ ಜೀವನಗಾಥೆಯನ್ನೂ ಒಳಗೊಂಡಿದೆ.</p>.<p class="title">ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾನುವಾರ ಈ ಕೃತಿಯನ್ನು ಬಿಡುಗಡೆಗೊಳಿಸಿದರು.</p>.<p class="title">’ಈ ಕೃತಿಯನ್ನು ಓದಿದ ಎಲ್ಲರೂ ಹೆಮ್ಮೆ ಪಡುತ್ತಾರೆ ಹಾಗೂ ಮುಂದಿನ ಪೀಳಿಗೆಗೆ ಇದು ಸ್ಫೂರ್ತಿಯಾಗಲಿದೆ‘ ಎಂದು ಅವರು ತಿಳಿಸಿದ್ದಾರೆ.</p>.<p class="title">ಸಿಆರ್ಪಿಎಫ್ ಡಿಜಿ ಎ.ಪಿ ಮಹೇಶ್ವರಿ ಅವರು, ’ಸಿಆರ್ಪಿಎಫ್ ವೀರಯೋಧರ ಜೀವನಚರಿತ್ರೆಯನ್ನೊಳಗೊಂಡ ಸರಣಿ ಕೃತಿಗಳನ್ನು ಪ್ರಕಟಿಸುವ ಯೋಜನೆ ಇದೆ‘ ಎಂದು ಅವರು ತಿಳಿಸಿದ್ದಾರೆ.</p>.<p class="title">ಸರಣಿಯ ಮೊದಲ ಕೃತಿಯಲ್ಲಿ ಸಿಆರ್ಪಿಎಫ್ನ ಧೈರ್ಯಶಾಲಿ 13 ಯೋಧರ ಜೀವನಕತೆಯನ್ನೊಳಗೊಂಡಿದೆ. ’ಈ ಕೃತಿಯಲ್ಲಿನ ಎಲ್ಲಾ ಯೋಧರು ತಮ್ಮ ಕರ್ತವ್ಯವನ್ನು ಕೆಚ್ಚೆದೆ, ಅಗಾಧ ಧೈರ್ಯ ಹಾಗೂ ಬದ್ಧತೆಯಿಂದ ನಿರ್ವಹಿಸಿದ್ದರು‘ ಎಂದು ಮಹೇಶ್ವರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>