<p>ಶ್ರೀನಗರ: ಶ್ರೀನಗರದ ಹೊರವಲಯದಲ್ಲಿರುವ ಲಾವಾಯ್ಪೊರಾದಲ್ಲಿ ಗುರುವಾರ ಉಗ್ರರು ನಡೆಸಿದ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಓರ್ವ ಅಧಿಕಾರಿ ಹುತಾತ್ಮರಾಗಿದ್ದಾರೆ.</p>.<p>ಈ ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರದ ಲಾವಾಯ್ಪೊರಾದ ಪರೀಂಪೊರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಆರ್ಪಿಎಫ್ ಪಡೆಯ ಮೇಲೆ ಉಗ್ರರು ಗುಂಡು ಹಾರಿಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<p>ಗಾಯಗೊಂಡಸೈನಿಕರನ್ನು ಸ್ಥಳೀಯ ಮಿಲಿಟರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.</p>.<p>ಇದನ್ನೂ ಓದಿ:<a href="https://cms.prajavani.net/india-news/permanent-commission-in-army-sc-allows-pleas-of-women-officers-says-acr-evaluation-process-flawed-816371.html" itemprop="url">ಸೇನೆಯಲ್ಲಿ ಮಹಿಳಾ ಅಧಿಕಾರಿಗಳ ಸಾಧನೆ ಕಡೆಗಣನೆ: ‘ಸುಪ್ರೀಂ’ </a></p>.<p>ಉಗ್ರರ ದಾಳಿಯಲ್ಲಿ ಸಬ್ ಇನ್ಸ್ಪೆಕ್ಟರ್, ತ್ರಿಪುರಾ ಮೂಲದ ಮಂಗಾ ರಾಮ್ ದೇವ್ ಬರ್ಮನ್ ಹುತಾತ್ಮರಾಗಿದ್ದಾರೆ. ಕಾನ್ಸ್ಟೆಬಲ್ ನಜೀಮ್ ಅಲಿ, ಜಗನ್ನಾಥ್ ರೇ ಮತ್ತು ಅಶೋಕ್ ಕುಮಾರ್ ಗಾಯಗೊಂಡಿದ್ದಾರೆ.</p>.<p>ಇತ್ತೀಚಿನ ವರ್ಷಗಳಲ್ಲಿ ಇದೇ ಪ್ರದೇಶಗಳಲ್ಲಿ ಭದ್ರತಾ ಪಡೆಗಳ ಮೇಲೆ ಹಲವಾರು ದಾಳಿಗಳು ನಡೆದಿದ್ದು, ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರವನ್ನೇ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಗರ: ಶ್ರೀನಗರದ ಹೊರವಲಯದಲ್ಲಿರುವ ಲಾವಾಯ್ಪೊರಾದಲ್ಲಿ ಗುರುವಾರ ಉಗ್ರರು ನಡೆಸಿದ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಓರ್ವ ಅಧಿಕಾರಿ ಹುತಾತ್ಮರಾಗಿದ್ದಾರೆ.</p>.<p>ಈ ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರದ ಲಾವಾಯ್ಪೊರಾದ ಪರೀಂಪೊರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಆರ್ಪಿಎಫ್ ಪಡೆಯ ಮೇಲೆ ಉಗ್ರರು ಗುಂಡು ಹಾರಿಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<p>ಗಾಯಗೊಂಡಸೈನಿಕರನ್ನು ಸ್ಥಳೀಯ ಮಿಲಿಟರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.</p>.<p>ಇದನ್ನೂ ಓದಿ:<a href="https://cms.prajavani.net/india-news/permanent-commission-in-army-sc-allows-pleas-of-women-officers-says-acr-evaluation-process-flawed-816371.html" itemprop="url">ಸೇನೆಯಲ್ಲಿ ಮಹಿಳಾ ಅಧಿಕಾರಿಗಳ ಸಾಧನೆ ಕಡೆಗಣನೆ: ‘ಸುಪ್ರೀಂ’ </a></p>.<p>ಉಗ್ರರ ದಾಳಿಯಲ್ಲಿ ಸಬ್ ಇನ್ಸ್ಪೆಕ್ಟರ್, ತ್ರಿಪುರಾ ಮೂಲದ ಮಂಗಾ ರಾಮ್ ದೇವ್ ಬರ್ಮನ್ ಹುತಾತ್ಮರಾಗಿದ್ದಾರೆ. ಕಾನ್ಸ್ಟೆಬಲ್ ನಜೀಮ್ ಅಲಿ, ಜಗನ್ನಾಥ್ ರೇ ಮತ್ತು ಅಶೋಕ್ ಕುಮಾರ್ ಗಾಯಗೊಂಡಿದ್ದಾರೆ.</p>.<p>ಇತ್ತೀಚಿನ ವರ್ಷಗಳಲ್ಲಿ ಇದೇ ಪ್ರದೇಶಗಳಲ್ಲಿ ಭದ್ರತಾ ಪಡೆಗಳ ಮೇಲೆ ಹಲವಾರು ದಾಳಿಗಳು ನಡೆದಿದ್ದು, ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರವನ್ನೇ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>