ಸೋಮವಾರ, ಮಾರ್ಚ್ 27, 2023
29 °C

ಛತ್ತೀಸಗಡ: ಸಿಆರ್‌ಪಿಎಫ್‌ ಸಿಬ್ಬಂದಿಯಿಂದ ಗುಂಡಿನ ದಾಳಿ, 4 ಸಹೋದ್ಯೋಗಿಗಳು ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಸುಕ್ಮಾ: ಸಿಆರ್‌ಪಿಎಫ್‌ ಸಿಬ್ಬಂದಿಯೊಬ್ಬರು ನಡೆಸಿದ ಗುಂಡಿನ ದಾಳಿಯಲ್ಲಿ ಅರೆಸೇನಾ ಪಡೆಯ ನಾಲ್ವರು ಸಿಬ್ಬಂದಿ ಮೃತಪಟ್ಟ ಘಟನೆ ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ. ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರೈಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಲಿಂಗನಪಲ್ಲಿ ಪ್ರದೇಶದಲ್ಲಿರುವ ಸಿಆರ್‌ಪಿಎಫ್‌ ಶಿಬಿರದಲ್ಲಿ ಸೋಮವಾರ ಮುಂಜಾನೆ 3.15ಕ್ಕೆ ದಾಳಿ ನಡೆದಿದೆ ಎಂದು ಬಸ್ತಾರ್ ವಲಯ ಐಜಿಪಿ ಸುಂದರ ರಾಜ್ ಪಿ. ತಿಳಿಸಿದ್ದಾರೆ.

ಸಿಆರ್‌ಪಿಎಫ್ ಸಿಬ್ಬಂದಿ ರಿತೇಶ್ ರಂಜನ್ ಎಂಬುವವರು ಎಕೆ–47 ಬಂದೂಕಿನಿಂದ ದಾಳಿ ನಡೆಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಭದ್ರಾಚಲಂ (ತೆಲಂಗಾಣ) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮೃತ ಸಿಬ್ಬಂದಿಯನ್ನು ರಾಜಮಣಿ ಕುಮಾರ್ ಯಾದವ್, ರಾಜೀವ್ ಮಂಡಲ್, ಧನ್‌ಜಿ ಮತ್ತು ಧರ್ಮೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗುಂಡಿನ ದಾಳಿ ನಡೆಸಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು