ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರದಲ್ಲಿ ಸಿಆರ್‌ಪಿಎಫ್ ವಾಹನ ಅಪಘಾತ; ಒಬ್ಬ ಸಿಬ್ಬಂದಿ ಸಾವು, 12 ಜನರಿಗೆ ಗಾಯ

Last Updated 19 ಏಪ್ರಿಲ್ 2022, 6:04 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಸಿಬ್ಬಂದಿಯೊಬ್ಬರು ಸಾವಿಗೀಡಾಗಿದ್ದಾರೆ.

ಹೈದರ್‌ಪೊರಾ ಬೈಪಾಸ್‌ ಪ್ರದೇಶದಲ್ಲಿ ಸಿಆರ್‌ಪಿಎಫ್‌ ವಾಹನಕ್ಕೆ ಟ್ರಕ್‌ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಸಿಆರ್‌ಪಿಎಫ್‌ನ ಒಟ್ಟು 13 ಸಿಬ್ಬಂದಿ ಗಾಯಗೊಂಡಿದ್ದರು.

ಗಾಯಗೊಂಡಿದ್ದ ಎಲ್ಲ ಸಿಬ್ಬಂದಿಯನ್ನೂ ಬಿಎಸ್‌ಎಫ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಕಾನ್‌ಸ್ಟೆಬಲ್‌ ಎಂ.ಎನ್‌.ಮಣಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಎಎಸ್‌ಐ ಜಸ್ರಾಜ್‌ ಮತ್ತು ಕಾನ್‌ಸ್ಟೆಬಲ್‌ ಸುಶಾಂತ್‌ ಬಿಸ್ವಾಸ್‌ ಅವರನ್ನು ಸೇನೆಯ 92 ಬೇಸ್‌ ಆಸ್ಪತ್ರೆಗೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT