‘ರೈತರ ಪ್ರತಿಭಟನೆ ಮುಂದುವರಿದಿದೆ. ಆದರೆ, ಸರ್ಕಾರ ಸೂಕ್ಷ್ಮತೆಯನ್ನೇ ಪ್ರದರ್ಶಿಸಲಿಲ್ಲ. ಕೇವಲ ನಾಟಕೀಯ ಸಮಾಲೋಚನೆಗಳನ್ನು ನಡೆಸಿತು. ಈ ಕಾಯ್ದೆಗಳನ್ನು ಕಾಂಗ್ರೆಸ್ ಒಪ್ಪಿಕೊಂಡಿರಲಿಲ್ಲ. ಈ ಕೃಷಿ ಕಾಯ್ದೆಗಳು ಆಹಾರ ಭದ್ರತೆ ಮೂರು ಅಡಿಪಾಯಗಳಾದ ಕನಿಷ್ಠ ಬೆಂಬಲ ಬೆಲೆ, ಸಾರ್ವಜನಿಕವಾಗಿ ಸಂಗ್ರಹಿಸುವ ವ್ಯವಸ್ಥೆ ಮತ್ತು ಸಾರ್ವಜನಿಕವಾಗಿ ವಿತರಣೆ ವ್ಯವಸ್ಥೆಯನ್ನೇ ನಾಶಪಡಿಸಲಿವೆ’ ಎಂದು ಹೇಳಿದ್ದಾರೆ.