<p><strong>ಮುಂಬೈ</strong>: ಇಲ್ಲಿನ ಕರಾವಳಿಯಲ್ಲಿ ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿ, ಡ್ರಗ್ಸ್ ಸೇವನೆ ಆರೋಪದ ಮೇಲೆ ಬಂಧಿಸಲಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಅ.13ರಂದು ಪ್ರತಿಕ್ರಿಯೆ ಸಲ್ಲಿಸುವಂತೆ ವಿಶೇಷ ನ್ಯಾಯಾಲಯ ಮಾದಕವಸ್ತು ನಿಯಂತ್ರಣ ಸಂಸ್ಥೆಗೆ (ಎನ್ಸಿಬಿ) ಸೋಮವಾರ ತಿಳಿಸಿದೆ.</p>.<p>ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ಎನ್ಡಿಪಿಎಸ್) ಕಾಯ್ದೆಅಡಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ವಿ.ವಿ.ಪಾಟೀಲ್ ಅವರು, ಬುಧವಾರ ಅ.13ರಂದು ಪ್ರತಿಕ್ರಿಯೆ ಸಲ್ಲಿಸುವಂತೆ ಎನ್ಸಿಬಿಗೆ ತಿಳಿಸಿದರು.</p>.<p>ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಅವರನ್ನು ಅ.3 ರಂದು ಬಂಧಿಸಲಾಯಿತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕಳೆದ ವಾರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರು ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಇಲ್ಲಿನ ಕರಾವಳಿಯಲ್ಲಿ ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿ, ಡ್ರಗ್ಸ್ ಸೇವನೆ ಆರೋಪದ ಮೇಲೆ ಬಂಧಿಸಲಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಅ.13ರಂದು ಪ್ರತಿಕ್ರಿಯೆ ಸಲ್ಲಿಸುವಂತೆ ವಿಶೇಷ ನ್ಯಾಯಾಲಯ ಮಾದಕವಸ್ತು ನಿಯಂತ್ರಣ ಸಂಸ್ಥೆಗೆ (ಎನ್ಸಿಬಿ) ಸೋಮವಾರ ತಿಳಿಸಿದೆ.</p>.<p>ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ಎನ್ಡಿಪಿಎಸ್) ಕಾಯ್ದೆಅಡಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ವಿ.ವಿ.ಪಾಟೀಲ್ ಅವರು, ಬುಧವಾರ ಅ.13ರಂದು ಪ್ರತಿಕ್ರಿಯೆ ಸಲ್ಲಿಸುವಂತೆ ಎನ್ಸಿಬಿಗೆ ತಿಳಿಸಿದರು.</p>.<p>ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಅವರನ್ನು ಅ.3 ರಂದು ಬಂಧಿಸಲಾಯಿತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕಳೆದ ವಾರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರು ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>