ರಸ್ತೆಬದಿ ನಿಂತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿತ್ತು, ಇದೇ ವೇಳೆ ಎರಡು ಬಸ್ಗಳು, ಮತ್ತೊಂದು ಟ್ರಕ್ ಅದೇ ಕಾರಿಗೆ ಅಪ್ಪಳಿಸಿದ್ದರಿಂದ ಕಾರು ಸಂಪೂರ್ಣ ಛಿದ್ರವಾಗಿದೆ. ಇದರಿಂದ ಕಾರಿನಲ್ಲಿದ್ದ ಐವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಡಲೂರಿನ ವೇಪ್ಪೂರಿನ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆಗೆದಿದ್ದಾರೆ.