<p><strong>ಅಮರಾವತಿ</strong>: ಕಲ್ಲು ತೂರಾಟ ಮತ್ತು ಹಿಂಸಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ನಗರದಲ್ಲಿ ಹೇರಲಾಗಿರುವ ಕರ್ಫ್ಯೂ ಅನ್ನು, ಜಿಲ್ಲೆಯ ಇನ್ನೂ ನಾಲ್ಕು ಪಟ್ಟಣಗಳಿಗೆ ವಿಸ್ತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅಮರಾವತಿಯಲ್ಲಿ ಶುಕ್ರವಾರ ಮತ್ತು ಶನಿವಾರ ವರದಿಯಾದ ಕಲ್ಲು ತೂರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 50 ಜನರನ್ನು ಬಂಧಿಸಲಾಗಿದೆ.</p>.<p>ರಾಜ್ಯ ಮೀಸಲು ಪೊಲೀಸ್ ಪಡೆಯ (ಎಸ್ಆರ್ಪಿಎಫ್) ಎಂಟು ಬೆಟಾಲಿಯನ್ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಯನ್ನು ಅಮರಾವತಿಗೆ ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಯಶೋಮತಿ ಠಾಕೂರ್ ತಿಳಿಸಿದ್ದಾರೆ.</p>.<p>ತ್ರಿಪುರಾದಲ್ಲಿನ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಮುಸ್ಲಿಂ ಸಂಘಟನೆಗಳು ಅಮರಾವತಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ್ದವು. ಈ ಸಮಯದಲ್ಲಿ ಕಲ್ಲುತೂರಾಟ ಹಾಗೂ ಹಿಂಸಾಚಾರ ನಡೆದಿತ್ತು.ನಾಂದೇಡ್, ಮಾಲೆಗಾಂವ್, ವಾಶಿಮ್ ಮತ್ತು ಯವತ್ಮಾಲ್ ಜಿಲ್ಲೆಗಳಲ್ಲೂ ಈ ಘಟನೆ ವರದಿಯಾಗಿದ್ದವು.ಇದನ್ನು ಖಂಡಿಸಿ ಬಿಜೆಪಿ ಶನಿವಾರ ಬಂದ್ಗೆ ಕರೆ ನೀಡಿತ್ತು.ಇದರ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ನಗರದ ರಾಜಕಮಲ್ ಚೌಕದಲ್ಲಿ ಕೇಸರಿ ಧ್ವಜ ಹಿಡಿದು ಘೋಷಣೆಗಳನ್ನು ಕೂಗಿದ್ದರು. ಈ ವೇಳೆ ಮತ್ತೆ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.ಕಲ್ಲು ತೂರಾಟದಿಂದ ಹಲವು ಅಂಗಡಿಗಳಿಗೆ ಹಾನಿಯಾಗಿದೆಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/section-144-imposed-in-amravati-maharashtra-as-bjp-protest-turns-violent-883465.html" itemprop="url" target="_blank">ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಮಹಾರಾಷ್ಟ್ರದ ಅಮರಾವತಿಯಲ್ಲಿ ಕರ್ಫ್ಯೂ ಜಾರಿ </a></p>.<p>ಅಮರಾವತಿಯಲ್ಲಿ ಶನಿವಾರದಿಂದ ನಾಲ್ಕು ದಿನಗಳ ವರೆಗೆ ಕರ್ಫ್ಯೂ ಹೇರಲಾಗಿದ್ದು, ಇಂಟರ್ನೆಟ್ ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ.ಸದ್ಯ ಜಿಲ್ಲೆಯ ಮೋರ್ಷಿ, ವರುದ್, ಅಚಲಪುರ್ ಮತ್ತು ಅಂಜನಾಗಾಂವ್ ಸುರ್ಜಿ ಪಟ್ಟಣಗಳಿಗೆ ಕರ್ಫ್ಯೂ ವಿಸ್ತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಕಲ್ಲು ತೂರಾಟ ಮತ್ತು ಹಿಂಸಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ನಗರದಲ್ಲಿ ಹೇರಲಾಗಿರುವ ಕರ್ಫ್ಯೂ ಅನ್ನು, ಜಿಲ್ಲೆಯ ಇನ್ನೂ ನಾಲ್ಕು ಪಟ್ಟಣಗಳಿಗೆ ವಿಸ್ತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅಮರಾವತಿಯಲ್ಲಿ ಶುಕ್ರವಾರ ಮತ್ತು ಶನಿವಾರ ವರದಿಯಾದ ಕಲ್ಲು ತೂರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 50 ಜನರನ್ನು ಬಂಧಿಸಲಾಗಿದೆ.</p>.<p>ರಾಜ್ಯ ಮೀಸಲು ಪೊಲೀಸ್ ಪಡೆಯ (ಎಸ್ಆರ್ಪಿಎಫ್) ಎಂಟು ಬೆಟಾಲಿಯನ್ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಯನ್ನು ಅಮರಾವತಿಗೆ ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಯಶೋಮತಿ ಠಾಕೂರ್ ತಿಳಿಸಿದ್ದಾರೆ.</p>.<p>ತ್ರಿಪುರಾದಲ್ಲಿನ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಮುಸ್ಲಿಂ ಸಂಘಟನೆಗಳು ಅಮರಾವತಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ್ದವು. ಈ ಸಮಯದಲ್ಲಿ ಕಲ್ಲುತೂರಾಟ ಹಾಗೂ ಹಿಂಸಾಚಾರ ನಡೆದಿತ್ತು.ನಾಂದೇಡ್, ಮಾಲೆಗಾಂವ್, ವಾಶಿಮ್ ಮತ್ತು ಯವತ್ಮಾಲ್ ಜಿಲ್ಲೆಗಳಲ್ಲೂ ಈ ಘಟನೆ ವರದಿಯಾಗಿದ್ದವು.ಇದನ್ನು ಖಂಡಿಸಿ ಬಿಜೆಪಿ ಶನಿವಾರ ಬಂದ್ಗೆ ಕರೆ ನೀಡಿತ್ತು.ಇದರ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ನಗರದ ರಾಜಕಮಲ್ ಚೌಕದಲ್ಲಿ ಕೇಸರಿ ಧ್ವಜ ಹಿಡಿದು ಘೋಷಣೆಗಳನ್ನು ಕೂಗಿದ್ದರು. ಈ ವೇಳೆ ಮತ್ತೆ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.ಕಲ್ಲು ತೂರಾಟದಿಂದ ಹಲವು ಅಂಗಡಿಗಳಿಗೆ ಹಾನಿಯಾಗಿದೆಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/section-144-imposed-in-amravati-maharashtra-as-bjp-protest-turns-violent-883465.html" itemprop="url" target="_blank">ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಮಹಾರಾಷ್ಟ್ರದ ಅಮರಾವತಿಯಲ್ಲಿ ಕರ್ಫ್ಯೂ ಜಾರಿ </a></p>.<p>ಅಮರಾವತಿಯಲ್ಲಿ ಶನಿವಾರದಿಂದ ನಾಲ್ಕು ದಿನಗಳ ವರೆಗೆ ಕರ್ಫ್ಯೂ ಹೇರಲಾಗಿದ್ದು, ಇಂಟರ್ನೆಟ್ ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ.ಸದ್ಯ ಜಿಲ್ಲೆಯ ಮೋರ್ಷಿ, ವರುದ್, ಅಚಲಪುರ್ ಮತ್ತು ಅಂಜನಾಗಾಂವ್ ಸುರ್ಜಿ ಪಟ್ಟಣಗಳಿಗೆ ಕರ್ಫ್ಯೂ ವಿಸ್ತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>