ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು ಈಗಾಗಲೇ ಜಲೀಲ್ ಅವರನ್ನು ವಿಚಾರಣೆಗೊಳಪಡಿಸಿದೆ. ಜೊತೆಗೆ, ರಾಜತಾಂತ್ರಿಕ ಮಾರ್ಗದ ದುರ್ಬಳಕೆಗೆ ಸಂಬಂಧಿಸಿದಂತೆ ವಿದೇಶ ದೇಣಿಗೆ ನಿಯಂತ್ರಣ ಕಾಯ್ದೆ(ಎಫ್ಸಿಆರ್ಎ)ಉಲ್ಲಂಘನೆ ಆರೋಪದಡಿ ಜಾರಿ ನಿರ್ದೇಶನಾಲಯವೂ(ಇ.ಡಿ)ಜಲೀಲ್ ಅವರನ್ನು ಇತ್ತೀಚೆಗೆ ವಿಚಾರಣಗೊಳಪಡಿಸಿತ್ತು. ವೈಯಕ್ತಿಕ ಬಳಕೆಗಾಗಿ, ತೆರಿಗೆಯಿಂದ ವಿನಾಯಿತಿ ಪಡೆಯಲು ರಾಜತಾಂತ್ರಿಕ ಮಾರ್ಗದ ಮುಖಾಂತರ ಸರ್ಕಾರಿ ಅಧಿಕಾರಿಗಳು ಕುರಾನ್ ಗ್ರಂಥ ಹಾಗೂ 18 ಸಾವಿರ ಕೆ.ಜಿ ಖರ್ಜೂರವನ್ನು ಆಮದು ಮಾಡಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಇಲಾಖೆಯು ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿತ್ತು.