ಕೊಚ್ಚಿ: ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಎಂ.ಶಿವಶಂಕರ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಬಂಧಿಸಿದರು.
ಈ ಹಿಂದೆ ಪ್ರಕರಣ ಸಂಬಂಧ ಶಿವಶಂಕರ್ ಅನ್ನುಇ.ಡಿ ಬಂಧಿಸಿತ್ತು. ಮಂಗಳವಾರ ಬೆಳಿಗ್ಗೆ ಶಿವಶಂಕರ್ ಅವರನ್ನು ಇರಿಸಲಾಗಿರುವ ಜೈಲಿಗೆ ಕಸ್ಟಮ್ ಆಯುಕ್ತರು ಭೇಟಿ ನೀಡಿ, ಶಿವಶಂಕರ್ ಬಂಧನವನ್ನು ಔಪಚಾರಿಕವಾಗಿ ದಾಖಲಿಸಿದರು.
ಶಿವಶಂಕರ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇವರನ್ನು ಬಂಧಿಸುವ ಕುರಿತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವು ಕಸ್ಟಮ್ಸ್ಗೆ ಸೋಮವಾರ ಅನುಮತಿ ನೀಡಿತ್ತು.